ಅಂಡರ್‌-19 ವಿಶ್ವಕಪ್‌: ನ್ಯೂಜಿಲ್ಯಾಂಡಿಗೆ ಸೋಲು; ಭಾರತ ಅಜೇಯ


Team Udayavani, Jan 25, 2020, 5:34 AM IST

RAVI

ಬ್ಲೋಮ್‌ಫಾಂಟೈನ್‌: ಮಳೆ ಪಂದ್ಯದಲ್ಲಿ ನ್ಯೂಜಿಲ್ಯಾಂಡನ್ನು 44 ರನ್ನುಗಳಿಂದ ಬಗ್ಗುಬಡಿದ ಭಾರತ, ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಕೂಟದ ಲೀಗ್‌ ಹಂತವನ್ನು ಅಜೇಯವಾಗಿ ಮುಗಿಸಿದೆ. ಕ್ವಾರ್ಟರ್‌ ಫೈನಲ್‌ ಸ್ಥಾನಕ್ಕೆ ಅಗ್ರಸ್ಥಾನದ ಗೌರವ ಪಡೆದಿದೆ.

ಶುಕ್ರವಾರದ ಮುಖಾಮುಖೀಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 23 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 115 ರನ್‌ ಗಳಿಸಿದರೆ, ನ್ಯೂಜಿಲ್ಯಾಂಡ್‌ ಗೆಲುವಿಗೆ 192 ರನ್ನುಗಳ ಕಠಿನ ಗುರಿ ನಿಗದಿಯಾಯಿತು. ಆರಂಭದಲ್ಲಿ ಸಿಡಿದರೂ ಅಂತಿಮವಾಗಿ 21 ಓವರ್‌ಗಳಲ್ಲಿ 147ಕ್ಕೆ ಆಲೌಟ್‌ ಆಯಿತು. ರವಿ ಬಿಶ್ನೋಯಿ (30ಕ್ಕೆ 4), ಅಥರ್ವ ಅಂಕೋಲೆಕರ್‌ (28ಕ್ಕೆ 3) ಬೌಲಿಂಗ್‌ನಲ್ಲಿ ಮಿಂಚಿದರು.

ಆದರೆ ಪೊಚೆಫ್ಸೂóಮ್‌ನಲ್ಲಿ ನಡೆಯಬೇಕಿದ್ದ ದಿನದ ಉಳಿದೆರಡು ಪಂದ್ಯಗಳು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದುಗೊಂಡವು. ಅಫ್ಘಾನಿಸ್ಥಾನ-ಕೆನಡಾ
(ಡಿ ವಿಭಾಗ), ಪಾಕಿಸ್ಥಾನ-ಬಾಂಗ್ಲಾದೇಶ (ಸಿ ವಿಭಾಗ) ಅಂಕ ಹಂಚಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದವು.

23 ಓವರ್‌ಗಳ ಪಂದ್ಯ
ಭಾರೀ ಮಳೆಯಿಂದಾಗಿ ಈ ಪಂದ್ಯವನ್ನು ಮೊದಲು 27 ಓವರ್‌ಗಳಿಗೆ ಇಳಿಸಲಾಯಿತು. ಬಳಿಕ 23 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆಗ ಭಾರತದ ಆರಂಭಿಕರಾದ ಯಶಸ್ವಿ ಜೈಸ್ವಾಲ್‌ ಮತ್ತು ದಿವ್ಯಾಂಶ್‌ ಸಕ್ಸೇನಾ ಅಜೇಯರಾಗಿ ಉಳಿದಿದ್ದರು. ಭಾರತ ವಿಕೆಟ್‌ ನಷ್ಟವಿಲ್ಲದೆ 115 ರನ್‌ ಪೇರಿಸಿತ್ತು.

ಭಾರತ ಯಾವುದೇ ವಿಕೆಟ್‌ ಕಳೆದುಕೊಳ್ಳದೇ ಇದ್ದುದರಿಂದ ನ್ಯೂಜಿಲ್ಯಾಂಡಿನ ಗುರಿಯಲ್ಲಿ ಭಾರೀ ಹೆಚ್ಚಳ ಕಂಡುಬಂತು. ಅದು “ಮಳೆ ನಿಯಮ’ದಂತೆ 23 ಓವರ್‌ಗಳಲ್ಲಿ 192 ರನ್‌ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತು.

ಭಾರತಕ್ಕೆ ಜೈಸ್ವಾಲ್‌-ಸಕ್ಸೇನಾ ಅಮೋಘ ಆರಂಭ ಒದಗಿಸಿದರು. ಕಿವೀಸ್‌ನ 6 ಮಂದಿ ದಾಳಿಗಿಳಿದರೂ ಈ ಜೋಡಿಯನ್ನು ಬೇರ್ಪಡಿಸಲು ಸಾಧ್ಯವಾಗಲಿಲ್ಲ. ಜೈಸ್ವಾಲ್‌ 77 ಎಸೆತಗಳಿಂದ 57 ರನ್‌ ಬಾರಿಸಿದರೆ (4 ಬೌಂಡರಿ, 2 ಸಿಕ್ಸರ್‌), ಸಕ್ಸೇನಾ 62 ಎಸೆತ ಎದುರಿಸಿ 52 ರನ್‌ ಹೊಡೆದರು (6 ಬೌಂಡರಿ).

ಸಂಕ್ಷಿಪ್ತ ಸ್ಕೋರ್‌: ಭಾರತ-23 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 115 (ಜೈಸ್ವಾಲ್‌ ಔಟಾಗದೆ 57, ಸಕ್ಸೇನಾ ಔಟಾಗದೆ 52). ನ್ಯೂಜಿಲ್ಯಾಂಡ್‌-21 ಓವರ್‌ಗಳಲ್ಲಿ 147 (ಮಾರೂÂ 42, ಲೆಲ್‌ಮಾÂನ್‌ 31, ಬಿಶ್ನೋಯಿ 30ಕ್ಕೆ 4, ಅಂಕೋಲೆಕರ್‌ 28ಕ್ಕೆ 3). ಪಂದ್ಯಶ್ರೇಷ್ಠ: ರವಿ ಬಿಶ್ನೋಯಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.