ವಿಶ್ವಕಪ್ ಸೆಮಿ ಫೈನಲ್ ಮೀಸಲು ದಿನ ಅಗತ್ಯ: ಹರ್ಮನ್ಪ್ರೀತ್ ಕೌರ್
Team Udayavani, Mar 6, 2020, 2:37 PM IST
ಸಿಡ್ನಿ: “ಮೊದಲ ಸಲ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿರುವುದು ಸಂತಸ ತಂದಿದೆ. ಆದರೆ ಸೆಮಿಫೈನಲ್ ಸಹಿತ ನಾಕೌಟ್ ಪಂದ್ಯಗಳಿಗೆ ಮೀಸಲು ದಿನ ಬೇಕಿತ್ತು’ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೇಳಿದ್ದಾರೆ.
“ಇಂದು ಪಂದ್ಯವನ್ನು ಆಡಲು ಸಾಧ್ಯವಾಗದೇ ಇರುವುದು ನಮ್ಮ ಪಾಲಿಗೆ ದುರದೃಷ್ಟವೇ ಸರಿ. ಆದರೆ ಇದೇ ನಿಯಮ. ನಮ್ಮಿಂದೇನೂ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ನಾವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರದಿದ್ದರೆ ಇಂದು ಫೈನಲ್ಗೆ ತೇರ್ಗಡೆಯಾಗುತ್ತಿರಲಿಲ್ಲ. ಇಂಗ್ಲೆಂಡ್ ಕೂಡ ಬಲಿಷ್ಠವಾಗಿತ್ತು. ಆದರೆ ಈ ನಿಯಮದಿಂದ ಅವರಿಗೆ ಭಾರೀ ನಷ್ಟವಾಗಿದೆ’ ಎಂದು ಹರ್ಮನ್ಪ್ರೀತ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮಳೆ ನಿಯಮ ಬದಲಾಗಬೇಕು: ನೈಟ್
ಇಂಗ್ಲೆಂಡ್ ನಾಯಕಿ ಹೀತರ್ ನೈಟ್ ಕೂಡ ಇಂಥ ಪ್ರತಿಷ್ಠಿತ ಪಂದ್ಯಾವಳಿಗಳಲ್ಲಿ ಮಳೆ ನಿಯಮ ಬದಲಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
“ನಿಜಕ್ಕೂ ನಿರಾಸೆಯಾಗಿದೆ. 4 ಬಲಿಷ್ಠ ತಂಡಗಳು ಇಲ್ಲಿ ಸೆಣಸುತ್ತಿದ್ದವು. ಉತ್ತಮ ಸ್ಪರ್ಧೆ ಏರ್ಪಡುವ ಎಲ್ಲ ಸಾಧ್ಯತೆ ಇತ್ತು. ಆದರೆ ಆಡದೇ ಹೊರಬಿದ್ದಿರುವುದು ನೋವುಂಟು ಮಾಡಿದೆ. ನಿಯಮಗಳಿಗೆ ಎಲ್ಲರೂ ಮೊದಲೇ ಸಹಿ ಹಾಕಿ ಸಮ್ಮತಿಸಿರುತ್ತಾರೆ ನಿಜ, ಆದರೆ ಇಲ್ಲಿ ಬದಲಾವಣೆಯ ಅಗತ್ಯವಿದೆ. ಬೇರೆ ತಂಡಕ್ಕೆ ಇಂಥ ಅನುಭವ ಆಗಬಾರದು. ಯಾವ ತಂಡವೂ ಮಳೆಯಿಂದಾಗಿ ವಿಶ್ವಕಪ್ನಿಂದ ಹೊರಬೀಳಲು ಬಯಸುವುದಿಲ್ಲ. ಫೈನಲ್ ಪಂದ್ಯಕ್ಕೆ ಇಂಥ ವಿಘ್ನ ಎದುರಾಗದಿರಲಿ…’ ಎಂದು ಹೀತರ್ ನೈಟ್ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ