ಯುಪಿಎಲ್‌ ಟ್ರೋಫಿ ಅನಾವರಣ


Team Udayavani, Apr 12, 2017, 3:26 PM IST

anavarana.jpg

ಉಡುಪಿ: ಉಡುಪಿ ಕ್ರಿಕೆಟ್‌ ಕ್ಲಬ್‌ನ ಆಶ್ರಯದಲ್ಲಿ ಸಾಬ್‌ ಉಡುಪಿ ಪ್ರೀಮಿಯರ್‌ ಲೀಗ್‌ ಟಿ10 ಹಾರ್ಡ್‌ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್ನಮೆಂಟ್‌ ಸೀಸನ್‌-2 ಮಂಗಳೂರು ಪಣಂಬೂರಿನ ಎನ್‌ಎಂಪಿಟಿ ಮೈದಾನದಲ್ಲಿ ಎ. 17ರಿಂದ 23ರ ವರೆಗೆ ನಡೆಯಲಿದ್ದು, ಅದರ ಟ್ರೋಫಿಯನ್ನು ಮಂಗಳೂರು ವಿವಿ ಸೆನೆಟ್‌ ಸದಸ್ಯ ಪಿ. ಅಮೃತ್‌ ಶೆಣೈ ಅವರು ಉಡುಪಿಯ ಓಶಿಯನ್‌ ಪರ್ಲ್ ಹೊಟೇಲ್‌ ಸಭಾಂಗಣದಲ್ಲಿ ಅನಾವರಣ ಮಾಡಿದರು. 

ಯುಪಿಎಲ್‌ ಕ್ರಿಕೆಟ್‌ ಸಂಸ್ಥೆಯವರು ಕಳೆದ ವರ್ಷ ಉಡುಪಿಯಲ್ಲಿ ಯಶಸ್ವಿಯಾಗಿ ಲೀಗ್‌ ಪಂದ್ಯ ಆಯೋಜಿಸಿದ್ದು, ಈ ಬಾರಿ ಪಣಂಬೂರಿನಲ್ಲಿ ಇಟ್ಟಿದ್ದಾರೆ. ಈ ಪಂದ್ಯಕೂಟದಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಅವಕಾಶಗಳು ಸಿಗುತ್ತದೆ. ಅದು ಅವರ ಕ್ರೀಡಾ ಬೆಳವಣಿಗೆಗೆ ಅಡಿಪಾಯ ಹಾಕಿದಂತೆ. ಗಲ್ಫ್ ದೇಶಗಳ ತಂಡಗಳೂ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಾರ್ಡ್‌ ಬಾಲ್‌ ಕ್ರಿಕೆಟ್‌ ಟೂರ್ನಿಯನ್ನೂ ಸಹ ಆಯೋಜಿಸಬಹುದಾಗಿದೆ ಎಂದು ಅಮೃತ್‌ ಶೆಣೈ ಹೇಳಿದರು. 

ಉಡುಪಿ ಪ್ರೀಮಿಯರ್‌ ಲೀಗ್‌ನ ಕಮಿಟಿ ಚಯರ್‌ಮನ್‌ ಸಲ್ಲಾಹುದ್ದೀನ್‌ ಸಲ್ಮಾನ್‌, ವೈಸ್‌ ಚಯರ್‌ಮನ್‌ ಮಹಮ್ಮದ್‌ ಮುಬೀನ್‌, ಯುಪಿಎಲ್‌ ವೈಸ್‌ ಚಯರ್‌ಮನ್‌ ಮಹಮ್ಮದ್‌ ಆರಿಫ್, ಸಾದಿಕ್‌ ಕಾಪು, ಅಬ್ದುಲ್‌ ಖಾದರ್‌, ಮಹಮ್ಮದ್‌ ಸಾದಿಕ್‌, ವಾಹಿದ್‌ ಹೈದರ್‌, ನಾಸಿರ್‌ ಮಂಜೇಶ್ವರ, ಹುರೈಶ್‌, ಇಕ್ಬಾಲ್‌ ಕಾವೂರು, ಮಹಮ್ಮದ್‌ ಇಕ್ಬಾಲ್‌, ಆರೂರು ಸುಕೇಶ್‌ ಶೆಟ್ಟಿ, ಇಮ್ರಾನ್‌ ಜಹೂರ್‌, ಮಹಮ್ಮದ್‌ ನಿಯಾಜ್‌, ಇರಾ#ನ್‌, ಫಿರೋಜ್‌, ಎಂ. ಸಮೀಯುದ್ದೀನ್‌, ಅನ್ಸಫ್ ಆಲಿ ಮತ್ತಿತರರು ಉಪಸ್ಥಿತರಿದ್ದರು. 

ಟ್ರೋಫಿಯೊಂದಿಗೆ ಒಟ್ಟು 50 ಲ.ರೂ. ನಗದು ಬಹುಮಾನವಿದ್ದು, ಫೈನಲ್‌ನಲ್ಲಿ ಪ್ರಥಮ-25 ಲ.ರೂ., ದ್ವಿತೀಯ-12 ಲ.ರೂ., ಸೆಮಿಫೈನಲ್‌ನವರಿಗೆ 3 ಲ.ರೂ. ಸಹಿತ ವೈಯಕ್ತಿಕವಾಗಿ ಸರ್ವೋತ್ತಮ ಕ್ರೀಟಾಪಟುವಿಗೆ ಕಾರು, ಫೈನಲ್‌ ಮ್ಯಾನ್‌ ಆಫ್ ದ ಮ್ಯಾಚ್‌ ಹಾಗೂ ಬೆಸ್ಟ್‌ ಬೌಲರ್‌ ಮತ್ತು ಬೆಸ್ಟ್‌ ಬ್ಯಾಟ್ಸ್‌ಮನ್‌ಗೆ ಬೈಕ್‌ನೀಡಲಾಗುತ್ತದೆ. ಹೆಚ್ಚು ಸಿಕ್ಸರ್‌ ಬಾರಿಸಿದವರಿಗೆ ಮತ್ತು ಪ್ರತಿ ಮ್ಯಾಚ್‌ನಲ್ಲಿ ಮ್ಯಾನ್‌ ಆಫ್ ದ ಮ್ಯಾಚ್‌ ಆಟಗಾರನಿಗೆ 2 ಸಾವಿರ ನಗದು ಸಹಿತ ಟ್ರೋಫಿ, ಮೆಡಲ್‌ ಕೊಡಮಾಡಲಾಗುತ್ತದೆ. 

ಗಲ್ಫ್ ರಾಷ್ಟ್ರದ ತಂಡಗಳು
ಹಾರ್ಡ್‌ ಟೆನಿಸ್‌ ಬಾಲ್‌ನ ಈ ಪಂದ್ಯದಲ್ಲಿ 20ಕ್ಕೂ ಅಧಿಕ ತಂಡಗಳು ಭಾಗವಹಿಸಲಿದ್ದು, ಎಲ್ಲ ಪಂದ್ಯಗಳು 10 ಓವರ್‌ನದ್ದಾಗಿರುತ್ತದೆ. ದೇಶದ ವಿವಿಧ ರಾಜ್ಯಗಳ ತಂಡ ಸೇರಿದಂತೆ ಗಲ್ಫ್ ರಾಷ್ಟ್ರದ ಸೌದಿ ಅರೇಬಿಯಾ, ಕತಾರ್‌, ದುಬೈ, ಒಮನ್‌ ಮತ್ತು ಮಸ್ಕತ್‌ನ ತಂಡವೂ ಪಾಲ್ಗೊಳ್ಳಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.