ಯುಎಸ್‌ ಓಪನ್‌: ಮೊದಲ ಸುತ್ತಿನಲ್ಲೇ ಹಾಲೆಪ್‌-ಶರಪೋವಾ ಮುಖಾಮುಖೀ


Team Udayavani, Aug 27, 2017, 7:20 AM IST

sharapova.jpg

ನ್ಯೂಯಾರ್ಕ್‌: ವೈಲ್ಡ್‌ಕಾರ್ಡ್‌ ಪ್ರವೇಶ ಪಡೆದಿರುವ ಮರಿಯಾ ಶರಪೋವಾ ಯುಎಸ್‌ ಓಪನ್‌ ಟೆನಿಸ್‌ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ವಿಶ್ವದ ನಂ.2 ಆಟಗಾರ್ತಿ ಸಿಮೋನಾ ಹಾಲೆಪ್‌ ಅವರನ್ನು ಎದುರಿಸುವ ಮೂಲಕ ಗ್ರ್ಯಾನ್‌ಸ್ಲಾಮ್‌ ಅಭಿಯಾನವನ್ನು ಮರಳಿ ಆರಂಭಿಸಲಿದ್ದಾರೆ.15 ತಿಂಗಳ “ಉದ್ದೀಪನ ನಿಷೇಧ’ದಿಂದ ಮುಕ್ತರಾದ ಬಳಿಕ ಶರಪೋವಾ ಆಡುತ್ತಿರುವ ಮೊದಲ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ ಇದಾಗಿದೆ. 

ಎಪ್ರಿಲ್‌ನಲ್ಲಿ ನಡೆದ “ಸ್ಟಟ್‌ಗಾರ್ಟ್‌’ ಪಂದ್ಯಾವಳಿ ಯಲ್ಲೂ ವೈಲ್ಡ್‌ಕಾರ್ಡ್‌ ಪ್ರವೇಶ ಪಡೆದಿದ್ದ ಶರಪೋವಾ, ಅಲ್ಲಿ ಸೆಮಿಫೈನಲ್‌ ತನಕ ಸಾಗಿದ್ದರು. ಆದರೆ ಫ್ರೆಂಚ್‌ ಓಪನ್‌ ಸಂಘಟಕರು ಇವರಿಗೆ ವೈಲ್ಡ್‌ಕಾರ್ಡ್‌ ನಿರಾಕರಿಸಿದರು. ಗಾಯಾಳಾದ ಕಾರಣ ವಿಂಬಲ್ಡನ್‌ ಕೂಟದಲ್ಲಿ ಆಡಲಾಗಲಿಲ್ಲ. 

5 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳನ್ನು ಗೆದ್ದಿರುವ ಶರಪೋವಾ 2006ರಷ್ಟು ಹಿಂದೆ “ನ್ಯೂಯಾರ್ಕ್‌ ರಾಣಿ’ಯಾಗಿ ಮೆರೆದಿದ್ದರು. ಆದರೆ ಕಳೆದ 4 ಯುಎಸ್‌ ಓಪನ್‌ ಪಂದ್ಯಾವಳಿಗಳಲ್ಲಿ ಮೂರರಲ್ಲಿ ಆಡಿರಲಿಲ್ಲ. ಕೊನೆಯ ಸಲ ಇಲ್ಲಿ ಕಾಣಿಸಿಕೊಂಡದ್ದು 2014ರಲ್ಲಿ. ಅಂದು 4ನೇ ಸುತ್ತಿನಲ್ಲಿ ಎಡವಿದ್ದರು.

ಮಾಜಿ ನಂ.1 ಆಟಗಾರ್ತಿಯಾಗಿರುವ ಶರಪೋವಾ ರೊಮೇನಿಯಾದ ಸಿಮೋನಾ ಹಾಲೆಪ್‌ ವಿರುದ್ಧ ಆಡಿದ ಎಲ್ಲ 6 ಪಂದ್ಯಗಳಲ್ಲೂ ಜಯ ಸಾಧಿಸಿ ಸ್ಪಷ್ಟ ಮೇಲುಗೈ ಸಾಧಿಸಿದ್ದಾರೆ. ಇತ್ತ ಹಾಲೆಪ್‌ ಕೆಲವು ದಿನಗಳ ಹಿಂದಷ್ಟೇ ಸಿನ್ಸಿನಾಟಿ ಫೈನಲ್‌ನಲ್ಲಿ ಗಾರ್ಬಿನ್‌ ಮುಗುರುಜಾ ವಿರುದ್ಧ ಸೋಲನುಭವಿಸಿ ಬಂದಿದ್ದಾರೆ. 3ನೇ ಸಲ ನಂ.1 ಎನಿಸಿಕೊಳ್ಳುವ ಅವಕಾಶದಿಂದ ಹಾಲೆಪ್‌ ವಂಚಿತ ರಾಗಿದ್ದರು. 

ಅಕಸ್ಮಾತ್‌ ಶರಪೋವಾ ಎದುರಿನ ಸೋಲಿನ ಸರಪಳಿ ಕಡಿದು ಹಾಲೆಪ್‌ ಗೆಲುವಿನ ಅಭಿಯಾನ ಮುಂದುವರಿಸಿದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಬ್ರಿಟನ್ನಿನ ಜೊಹಾನ್ನಾ ಕೊಂಟಾ ಅವರನ್ನು ಎದುರಿಸುವ ಸಾಧ್ಯತೆ ಇದೆ.

– ಕೆರ್ಬರ್‌ ವರ್ಸಸ್‌ ಒಸಾಕಾ
ವಿಶ್ವದ ನಂ.1 ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ಪೋಲೆಂಡಿನ ಮಾಗಾx ಲಿನೆಟ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಕ್ವಾರ್ಟರ್‌ ಫೈನಲ್‌ ತನಕ ಮುಂದುವರಿದರೆ ರಶ್ಯದ ಸ್ವೆತ್ಲಾನಾ ಕುಜ್ನೆತ್ಸೋವಾ ಸವಾಲನ್ನು ಎದುರಿಸಬೇಕಾಗಬಹುದು.

ಹಾಲಿ ಚಾಂಪಿಯನ್‌ ಆ್ಯಂಜೆಲಿಕ್‌ ಕೆರ್ಬರ್‌ ಜಪಾನಿನ ನವೋಮಿ ಒಸಾಕಾ ವಿರುದ್ಧ ಪ್ರಥಮ ಸುತ್ತಿನ ಪಂದ್ಯ ಆಡುವರು. ಇವರಿಗೆ ಉಕ್ರೇನಿನ ಎಲಿನಾ ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಎದುರಾಳಿ ಆಗುವ ಸಾಧ್ಯತೆ ಇದೆ.
3ನೇ ಶ್ರೇಯಾಂಕದ ಗಾರ್ಬಿನ್‌ ಮುಗುರುಜಾ ಮತ್ತು ಡೆನ್ಮಾರ್ಕ್‌ನ ಕ್ಯಾರೋಲಿನಾ ವೋಜ್ನಿಯಾಕಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೆಣಸಾಡುವ ಸಂಭವವಿದೆ. ವೋಜ್ನಿಯಾಕಿ ಅಮೆರಿಕದ ವರ್ವರಾ ಲೆಪೆcಂಕೊ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು.

ಅಮೆರಿಕದ 37ರ ಹರೆಯದ ಆಟಗಾರ್ತಿ ವೀನಸ್‌ ವಿಲಿಯಮ್ಸ್‌ ಕೂಡ ಅರ್ಹತಾ ಆಟಗಾರ್ತಿಯನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದ್ದು, 4ನೇ ಸುತ್ತಿನಲ್ಲಿ ಕ್ಯಾರೋಲಿನ್‌ ವೋಜ್ನಿಯಾಕಿ ವಿರುದ್ಧ ಆಡುವ ಸಾಧ್ಯತೆಯೊಂದು ಗೋಚರಿಸುತ್ತಿದೆ. ಇವೆಲ್ಲವೂ ಆಟಗಾರರ ರ್‍ಯಾಂಕಿಂಗ್‌ ಆಧಾರಿತ ಲೆಕ್ಕಾಚಾರಗಳಾಗಿವೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.