ಇಸ್ನರ್‌, ಕಿರ್ಗಿಯೋಸ್‌ ಹೋರಾಟ ಅಂತ್ಯ


Team Udayavani, Sep 2, 2019, 5:45 AM IST

AP9_1_2019_000018B

ನ್ಯೂಯಾರ್ಕ್: ದ್ವಿತೀಯ ಶ್ರೇಯಾಂಕದ ರಫೆಲ್‌ ನಡಾಲ್‌ ಅವರು ಸುಲಭ ಜಯದೊಂದಿಗೆ ಯುಎಸ್‌ ಓಪನ್‌ ಟೆನಿಸ್‌ ಕೂಟದಲ್ಲಿ ನಾಲ್ಕನೇ ಸುತ್ತು ತಲುಪಿದ್ದಾರೆ. ಆದರೆ ಅಮೆರಿಕದ ಜಾನ್‌ ಇಸ್ನರ್‌, ನಿಕ್‌ ಕಿರ್ಗಿಯೋಸ್‌ ಹೋರಾಟ ಮೂರನೇ ಸುತ್ತಿನಲ್ಲಿಯೇ ಅಂತ್ಯಗೊಂಡಿದೆ.

ಮೂರು ಬಾರಿ ಇಲ್ಲಿ ಚಾಂಪಿಯನ್‌ ಆಗಿರುವ ನಡಾಲ್‌ ದಕ್ಷಿಣ ಕೊರಿಯದ ಅರ್ಹತಾ ಆಟಗಾರ ಚುಂಗ್‌ ಹೆಯುನ್‌ ಅವರನ್ನು 6-3, 6-4, 6-2 ಸೆಟ್‌ಗಳಿಂದ ಮಣಿಸಿದರು. ಅವರು ಮುಂದಿನ ಸುತ್ತಿನಲ್ಲಿ 2014ರ ಚಾಂಪಿಯನ್‌ ಮರಿನ್‌ ಸಿಲಿಕ್‌ ಅವರನ್ನು ಎದುರಿಸಲಿದ್ದಾರೆ. ಸಿಲಿಕ್‌ ಇನ್ನೊಂದು ಪಂದ್ಯದಲ್ಲಿ ಅಮೆರಿಕದ ಭರವಸೆ ಜಾನ್‌ ಇಸ್ನರ್‌ ಅವರನ್ನು 7-5, 3-6, 7-6 (8-6), 6-4 ಸೆಟ್‌ಗಳ ಸುದೀರ್ಘ‌ ಹೋರಾಟದಲ್ಲಿ ಕೆಡಹಿದರು. ಈ ಪಂದ್ಯ 3 ಗಂಟೆ 19 ನಿಮಿಷಗಳವರೆಗೆ ಸಾಗಿತ್ತು.

ಮತ್ತೆ ನಾಲ್ಕನೇ ಸುತ್ತಿಗೇರಿರುವುದು ಸಂತೊಷ ವಾಗಿದೆ. ಇದೊಂದು ಒಳ್ಳೆಯ ಪಂದ್ಯವಾಗಿತ್ತು ಎಂದು ಪಂದ್ಯದ ಬಳಿಕ ನಡಾಲ್‌ ತಿಳಿಸಿದರು.

ಕಿರ್ಗಿಯೋಸ್‌ ಪತನ
ಶಕ್ತಿಶಾಲಿ ಸರ್ವ್‌ಗಳ ಕಾದಾಟದಲ್ಲಿ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ರಶ್ಯದ ಆ್ಯಂಡ್ರೆ ರುಬ್ಲೆವ್‌ಗೆ ಶರಣಾಗಿದ್ದಾರೆ. ತೀವ್ರ ಪೈಪೋಟಿ ಯಿಂದ ಸಾಗಿದ ಈ ಪಂದ್ಯದಲ್ಲಿ ರುಬ್ಲೆವ್‌ 7-6 (5), 7-6 (5), 6-3 ಸೆಟ್‌ಗಳಿಂ ದ ಗೆಲುವು ಸಾಧಿಸಿ ಮುನ್ನಡೆದರು. ಎರಡು ವರ್ಷಗಳ ಹಿಂದೆ ಇಲ್ಲಿ ಕ್ವಾ. ಫೈನಲ್‌ ತಲುಪಿದ್ದ ರುಬ್ಲೆವ್‌ ಮುಂದಿನ ಸುತ್ತಿನಲ್ಲಿ ಇಟಲಿಯ ಮಾಟೆಯೊ ಬರೆಟ್ಟಿನಿ ಅವರನ್ನು ಎದುರಿಸಲಿದ್ದಾರೆ. ಬರೆಟ್ಟಿನಿ ಇನ್ನೊಂದು ಪಂದ್ಯದಲ್ಲಿ ಆಸ್ಟ್ರೇಲಿಯದ ಅಲೆಕ್ಸಿ ಪೊಪಿರಿನ್‌ ಅವರನ್ನು 6-4, 6-4, 6-7 (3-7), 7-6 (7-2), ಸೆಟ್‌ಗಳಿಂದ ಕೆಡಹಿದ್ದರು.

ಮಾನ್‌ಫಿಲ್ಸ್‌ಗೆ ಮ್ಯಾರಥಾನ್‌ ಗೆಲುವು
ಫ್ರಾನ್ಸ್‌ನ ಗಾಲ್‌ ಮಾನ್‌ಫಿಲ್ಸ್‌ ಐದು ಸೆಟ್‌ಗಳ ಮ್ಯಾರಥಾನ್‌ ಹೋರಾಟದಲ್ಲಿ ಕೆನಡದ ಡೆನಿಸ್‌ ಶಪೋವಲೋವ್‌ ಅವರನ್ನು 6-7 (5-7), 7-6 (7-4), 6-4, 6-7 (6-8), 6-3 ಸೆಟ್‌ಗಳಿಂದ ಮಣಿಸಿದರು. ಈ ಹೋರಾಟ 3 ತಾಸು 34 ನಿಮಿಷಗಳವರೆಗೆ ಸಾಗಿತ್ತು. ಇನ್ನೊಂದು ಪಂದ್ಯದಲ್ಲಿ ಅಲೆಕ್ಸಾಂಡರ್‌ ಜ್ವರೇವ್‌ ಜಯ ಸಾಧಿಸಿದ್ದರು. ಆರನೇ ಶ್ರೇಯಾಂಕದ ಅವರು ಸ್ಲೋವಾಕಿಯಾದ ಅಲ್ಜಾಜ್‌ ಬೆಡೆನೆ ಅವರನ್ನು 6-7 (4-7), 7-6 (7-4), 6-3, 7-6 (7-3) ಸೆಟ್‌ಗಳಿಂದ ಪರಾಭವಗೊಳಿಸಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.