ಭಾರತಕ್ಕೆ ಬಂದ ಆಸ್ಟ್ರೇಲಿಯಾ ತಂಡ; ಉಸ್ಮಾನ್ ಖವಾಜಾಗೆ ಮತ್ತೆ ವೀಸಾ ಸಮಸ್ಯೆ
Team Udayavani, Feb 1, 2023, 4:25 PM IST
ಸಿಡ್ನಿ: ಬಾರ್ಡರ್- ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಾರತಕ್ಕೆ ಆಗಮಿಸಿದೆ. ಎರಡು ಬ್ಯಾಚ್ ಗಳಾಗಿ ಪ್ಯಾಟ್ ಕಮಿನ್ಸ್ ಪಡೆ ಭಾರತಕ್ಕೆ ಕಾಲಿರಿಸಿದೆ. ಆದರೆ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರು ವಿಮಾನ ತಪ್ಪಿಸಿಕೊಂಡಿದ್ದಾರೆ.
ಉಸ್ಮಾನ್ ಖವಾಜಾ ಅವರಿಗೆ ವೀಸಾ ಸಮಸ್ಯೆಯಾಗಿದೆ. ಹೀಗಾಗಿ ಎರಡೂ ಬ್ಯಾಚ್ ಗಳಲ್ಲಿ ಅವರಿಗೆ ವಿಮಾನ ಏರಲು ಸಾಧ್ಯವಾಗಿಲ್ಲ. ಬುಧವಾರ ವೀಸಾ ಸಮಸ್ಯೆ ಬಗೆಹರಿಯ ಬಹುದು. ಹೀಗಾದರೆ ಗುರುವಾರ ಅವರು ಭಾರತಕ್ಕೆ ಪ್ರಯಾಣಿಸುತ್ತಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!
ಸೋಮವಾರ ರಾತ್ರಿ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಉಸ್ಮಾನ್ ಖವಾಜಾ ಭಾಗವಹಿಸಿದ್ದರು. ಅತ್ಯುತ್ತಮ ಟೆಸ್ಟ್ ಆಟಗಾರನಿಗೆ ನೀಡಲಾಗುವ ಶೇನ್ ವಾರ್ನ್ ಪ್ರಶಸ್ತಿಯನ್ನು ಉಸ್ಮಾನ್ ಖವಾಜಾ ಪಡೆದಿದ್ದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗಾವಸ್ಕರ್ ಟ್ರೋಫಿ ಕೂಟವು ಫೆಬ್ರವರಿ 9ರಂದು ಆರಂಭವಾಗಲಿದೆ. ಸರಣಿಯ ನಾಲ್ಕು ಪಂದ್ಯಗಳು ನಾಗ್ಪುರ, ಹೊಸದಿಲ್ಲಿ, ಧರ್ಮಶಾಲಾ ಮತ್ತು ಅಹಮದಾಬಾದ್ ನಲ್ಲಿ ನಡೆಯಲಿದೆ.
Me waiting for my Indian Visa like… #stranded #dontleaveme #standard #anytimenow https://t.co/pCGfagDyC1
— Usman Khawaja (@Uz_Khawaja) February 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ