ಇಂಡಿಯನ್‌ ವೆಲ್ಸ್‌ ಟೆನಿಸ್‌ ಅಜರೆಂಕಾಗೆ ವೈಲ್ಡ್‌ಕಾರ್ಡ್‌


Team Udayavani, Feb 2, 2018, 6:35 AM IST

Victoria-Azarenka.jpg

ಲಾಸ್‌ ಏಂಜಲೀಸ್‌: ಮುಂದಿನ ತಿಂಗಳು ನಡೆಯುವ “ಇಂಡಿಯನ್‌ ವೆಲ್ಸ್‌-ಬಿಎನ್‌ಪಿ ಪರಿಬಾಸ್‌ ಓಪನ್‌ ಟೆನಿಸ್‌’ ಪಂದ್ಯಾವಳಿಯಲ್ಲಿ 2 ಬಾರಿಯ ಚಾಂಪಿಯನ್‌, ಬೆಲರೂಸ್‌ನ ವಿಕ್ಟೋರಿಯಾ ಅಜರೆಂಕಾ ಅವರಿಗೆ ವೈಲ್ಡ್‌ಕಾರ್ಡ್‌ ನೀಡಲಾಗಿದೆ. ಕೂಟದ ಸಂಘಟಕರು ಈ ವಿಷಯವನ್ನು ಪ್ರಕಟಿಸಿದರು.

ಕ್ಯಾಲಿಫೋರ್ನಿಯಾದಲ್ಲಿ ನಡೆಯುವ ಈ ಪ್ರತಿಷ್ಠಿತ ಹಾರ್ಡ್‌ಕೋರ್ಟ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಅಜರೆಂಕಾ 2012 ಮತ್ತು 2016ರಲ್ಲಿ ಚಾಂಪಿಯನ್‌ ಆಗಿದ್ದರು. ಕಳೆದ ವರ್ಷ ಗಂಡು ಮಗುವಿಗೆ ಜನ್ಮ ನೀಡಿದ ಕಾರಣ ಈ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ. 2017ರ ನಡು ಅವಧಿಯಲ್ಲಿ “ಹೆರಿಗೆ ರಜೆ’ಯನ್ನೆಲ್ಲ ಮುಗಿಸಿದರೂ ವರ್ಷಾಂತ್ಯದ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಕೂಟದಿಂದ ದೂರವೇ ಉಳಿದಿದ್ದರು. ಮಗುವಿನ ವಿಚಾರವಾಗಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಅಜರೆಂಕಾಗೆ ಕ್ಯಾಲಿಫೋರ್ನಿಯಾ ಬಿಟ್ಟು ಹೋಗದಂತೆ ಸೂಚಿಸಲಾಗಿತ್ತು. ಇದೇ ಕಾರಣಕ್ಕಾಗಿ ಅವರು ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯನ್ನೂ ತಪ್ಪಿಸಿಕೊಳ್ಳಬೇಕಾಯಿತು. ಇಲ್ಲಿಯೂ ಅಜರೆಂಕಾಗೆ ವೈಲ್ಡ್‌ಕಾರ್ಡ್‌ ನೀಡಲಾಗಿತ್ತು. ಆದರೆ ಅವರು ಮೆಲ್ಬರ್ನ್ಗೆ ಪ್ರಯಾಣಿಸುವಂತಿರಲಿಲ್ಲ.

ಬಿಎನ್‌ಪಿ ಪರಿಬಾಸ್‌ ಓಪನ್‌ ಟೆನಿಸ್‌ ಪಂದ್ಯಾವಳಿ ಕ್ಯಾಲಿಫೋರ್ನಿಯಾದಲ್ಲೇ ನಡೆಯುತ್ತಿರುವುದರಿಂದ ಅಜರೆಂಕಾಗೆ ಇದರಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿದೆ. ಅಜರೆಂಕಾ ಪಾಲಿಗೆ ಇದು 11ನೇ ಇಂಡಿಯನ್‌ ವೆಲ್ಸ್‌ ಪಂದ್ಯಾವಳಿ.

“ಇಂಡಿಯನ್‌ ವೆಲ್ಸ್‌ನಲ್ಲಿ ಆಡುವುದನ್ನು ನಾನು ಯಾವತ್ತೂ ಇಷ್ಟಪಡುತ್ತೇನೆ. ಅದರಲ್ಲೂ ಈ ಮಾರ್ಚ್‌ನಲ್ಲಿ ಇಲ್ಲಿ ಆಡುವಾಗ ಹೆಚ್ಚು ರೋಮಾಂಚನ ಆಗುವುದರಲ್ಲಿ ಅನುಮಾನವಿಲ್ಲ. ಇಲ್ಲಿ 3ನೇ ಪ್ರಶಸ್ತಿಗಾಗಿ ಕಾದಾಡಲಿದ್ದೇನೆ’ ಎಂದು ವಿಕ್ಟೋರಿಯಾ ಅಜರೆಂಕಾ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.