ವಿಜಯ್‌ ಹಜಾರೆ: ಕ್ವಾ. ಫೈನಲ್‌ಗೆ ಕರ್ನಾಟಕ


Team Udayavani, Oct 13, 2019, 5:40 AM IST

vijay-hazare

ಬೆಂಗಳೂರು: ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ ಪಂದ್ಯಾವಳಿಯ ಶನಿವಾರದ ಮುಖಾಮುಖೀಯಲ್ಲಿ ಆತಿಥೇಯ ಕರ್ನಾಟಕ ತಂಡ ಸೌರಾಷ್ಟ್ರ ವಿರುದ್ಧ 8 ವಿಕೆಟ್‌ ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿತು. ಇದು ಕರ್ನಾಟಕದ 6ನೇ ಗೆಲುವಾಗಿದ್ದು, 24 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದೆ.
“ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸೌರಾಷ್ಟ್ರ ವೇಗಿ ಪ್ರಸಿದ್ಧ್ ಕೃಷ್ಣ (19ಕ್ಕೆ 5) ಮತ್ತು ವಿ. ಕೌಶಿಕ್‌ (23ಕ್ಕೆ 3) ಅವರ ಮಾರಕ ಬೌಲಿಂಗ್‌ ದಾಳಿಗೆ ಸಿಲುಕಿ 47.2 ಓವರ್‌ಗಳಲ್ಲಿ 212ಕ್ಕೆ ಆಲೌಟಾಯಿತು. ಸುಲಭ ಗುರಿ ಬೆನ್ನಟ್ಟಿದ ರಾಜ್ಯ ತಂಡ 36.4 ಓವರ್‌ಗಳಲ್ಲಿ ಕೇವಲ 2 ವಿಕೆಟಿಗೆ 213 ರನ್‌ ಗಳಿಸಿ ಜಯ ಸಾಧಿಸಿತು. ಕರ್ನಾಟಕ ಅ. 16ರಂದು ಕೊನೆಯ ಲೀಗ್‌ ಪಂದ್ಯದಲ್ಲಿ ಗೋವಾವನ್ನು ಎದುರಿಸಲಿದೆ.

ಆರ್ಭಟಿಸಿದ ಪಡಿಕ್ಕಲ್‌
ಆರಂಭಕಾರ ದೇವದತ್‌ ಪಡಿಕ್ಕಲ್‌ ಅವರ ಅಜೇಯ 103 ರನ್‌ (104 ಎಸೆತ, 13 ಬೌಂಡರಿ, 1 ಸಿಕ್ಸರ್‌) ಕರ್ನಾಟಕ ಸರದಿಯ ಆಕರ್ಷಣೆ ಆಗಿತ್ತು. ಅವರೊಂದಿಗೆ ನಾಯಕ ಮನೀಷ್‌ ಪಾಂಡೆ 67 ರನ್‌ ಬಾರಿಸಿ ಔಟಾಗದೆ ಉಳಿದರು (53 ಎಸೆತ, 7 ಬೌಂಡರಿ, 2 ಸಿಕ್ಸರ್‌). ಇವರಿಬ್ಬರಿಂದ ಮುರಿಯದ 3ನೇ ವಿಕೆಟಿಗೆ 134 ರನ್‌ ಹರಿದು ಬಂತು. ಕೆ.ಎಲ್‌. ರಾಹುಲ್‌ (23), ಕರುಣ್‌ ನಾಯರ್‌ (16) ಬೇಗ ಪೆವಿಲಿಯನ್‌ ಕಡೆಗೆ ನಡೆದರು. ಈ ಎರಡೂ ವಿಕೆಟ್‌ ಪ್ರೇರಕ್‌ ಮಂಕಡ್‌ ಪಾಲಾದವು.

ಪ್ರೇರಕ್‌, ಚಿರಾಗ್‌ ನೆರವು
ಸೌರಾಷ್ಟ್ರ ತಂಡ ಕರ್ನಾಟಕದ ಮಾರಕ ಬೌಲಿಂಗಿಗೆ ತತ್ತರಿಸಿತು. ನಿರಂತರ ವಿಕೆಟ್‌ ಕಳೆದುಕೊಳ್ಳುತ್ತಲೇ ಸಾಗಿತು. ಒಂದು ಹಂತದಲ್ಲಿ ಬರೀ 37 ರನ್ನಿಗೆ 6 ವಿಕೆಟ್‌ ಉದುರಿತ್ತು. ಆದರೆ ಪ್ರೇರಕ್‌ ಮಂಕಡ್‌ (86) ಮತ್ತು ಚಿರಾಗ್‌ ಜಾನಿ (66) ಹೋರಾಟ ಸಂಘಟಿಸಿ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು.
ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-47.2 ಓವರ್‌ಗಳಲ್ಲಿ 212 (ಮಂಕಡ್‌ 86, ಜಾನಿ 66, ಪ್ರಸಿದ್ಧ್ ಕೃಷ್ಣ 19ಕ್ಕೆ 5, ವಿ. ಕೌಶಿಕ್‌ 23ಕ್ಕೆ 3). ಕರ್ನಾಟಕ-36.4 ಓವರ್‌ಗಳಲ್ಲಿ 2 ವಿಕೆಟಿಗೆ 213 (ಪಡಿಕ್ಕಲ್‌ ಔಟಾಗದೆ 103, ಪಾಂಡೆ ಔಟಾಗದೆ 67, ಮಂಕಡ್‌ 33ಕ್ಕೆ 2).

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.