ವಿಜಯ್‌ ಹಜಾರೆ: ಸೆಮಿಫೈನಲ್‌ಗೆ ಕರ್ನಾಟಕ

ಪುದುಚೇರಿ ವಿರುದ್ಧ ಪಾಂಡೆ ಪಡೆಗೆ 8 ವಿಕೆಟ್‌ ಗೆಲುವು

Team Udayavani, Oct 20, 2019, 11:49 PM IST

KL-RAHUL

ಬೆಂಗಳೂರು: ಕರ್ನಾಟಕ “ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ ಪಂದ್ಯಾವಳಿ’ಯ ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ. ರವಿವಾರದ ಕ್ವಾರ್ಟರ್‌ ಫೈನಲ್‌ನಲ್ಲಿ ಪಾಂಡೆ ಪಡೆ ಪುದುಚೇರಿಯನ್ನು 8 ವಿಕೆಟ್‌ಗಳಿಂದ ಸೋಲಿಸಿ ಮುನ್ನುಗ್ಗಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪುದುಚೇರಿ ತಂಡ 9 ವಿಕೆಟಿಗೆ 207 ರನ್ನುಗಳ ಸಾಮಾನ್ಯ ಮೊತ್ತ ಗಳಿಸಿದರೆ, ಕರ್ನಾಟಕ 41 ಓವರ್‌ಗಳಲ್ಲಿ ಎರಡೇ ವಿಕೆಟ್‌ ಕಳೆದುಕೊಂಡು 213 ರನ್‌ ಬಾರಿಸಿತು.

41 ರನ್ನಿಗೆ ಬಿತ್ತು 6 ವಿಕೆಟ್‌
ಪ್ರವೀಣ್‌ ದುಬೆ (44ಕ್ಕೆ 3), ವಿ. ಕೌಶಿಕ್‌ (33ಕ್ಕೆ 2) ಹಾಗೂ ಅಭಿಮನ್ಯು ಮಿಥುನ್‌ (35ಕ್ಕೆ 2) ಅವರ ಬಿಗಿ ಬೌಲಿಂಗ್‌ ದಾಳಿಗೆ ಸಿಲುಕಿದ ಪುದುಚೇರಿ ರನ್‌ ಗಳಿಸಲು ಪರದಾಡಿತು. 16ನೇ ಓವರ್‌ ವೇಳೆ 41 ರನ್ನಿಗೆ 6 ವಿಕೆಟ್‌ ಉದುರಿ ಹೋದಾಗ ಪುದುಚೇರಿ ನೂರರ ಗಡಿ ದಾಟುವುದೂ ಅನುಮಾನವಿತ್ತು. ಆದರೆ ಕೆಳ ಸರದಿಯ ಆಟಗಾರರಾದ ಸಾಗರ್‌ ತ್ರಿವೇದಿ (54), ವಿ. ಮಾರಿಮುತ್ತು (58), ಫಾಬಿದ್‌ ಅಹ್ಮದ್‌ (37) ಉತ್ತಮ ಹೋರಾಟ ಸಂಘಟಿಸಿ ಮೊತ್ತವನ್ನು ಇನ್ನೂರರಾಚೆ ವಿಸ್ತರಿಸುವಲ್ಲಿ ನೆರವಾದರು. ವನ್‌ಡೌನ್‌ನಲ್ಲಿ ಬಂದ ಕರ್ನಾಟಕದ ಮಾಜಿ ಆಟಗಾರ ಆರ್‌. ವಿನಯ್‌ ಕುಮಾರ್‌ ಗಳಿಸಿದ್ದು 2 ರನ್‌ ಮಾತ್ರ. ಬೌಲಿಂಗ್‌ನಲ್ಲೂ ಅವರ ಜಾದೂ ನಡೆಯಲಿಲ್ಲ. 7 ಓವರ್‌ಗಳಲ್ಲಿ 45 ರನ್‌ ನೀಡಿ “ವಿಕೆಟ್‌ ಲೆಸ್‌’ ಎನಿಸಿದರು. ಎರಡೂ ವಿಕೆಟ್‌ ಸಾಗರ್‌ ಉದೇಶಿ ಪಾಲಾಯಿತು.

ಕರ್ನಾಟಕ ಭರ್ಜರಿ ಆರಂಭ
ಕರ್ನಾಟಕಕ್ಕೆ ಕೆ.ಎಲ್‌. ರಾಹುಲ್‌-ದೇವದತ್‌ ಪಡಿಕ್ಕಲ್‌ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟಿಗೆ 98 ರನ್‌ ಹರಿದು ಬಂತು. ದ್ವಿತೀಯ ವಿಕೆಟಿಗೆ ಜತೆಗೂಡಿದ ರಾಹುಲ್‌-ರೋಹನ್‌ ಕದಂ 88 ರನ್‌ ಪೇರಿಸಿದರು. ಮೂವರಿಂದಲೂ ಅರ್ಧ ಶತಕ ದಾಖಲಾಯಿತು.

ಶತಕದ ನಿರೀಕ್ಷೆಯಲ್ಲಿದ್ದ ರಾಹುಲ್‌ 90 ರನ್‌ ಬಾರಿಸಿ ನಿರ್ಗಮಿಸ ಬೇಕಾಯಿತು (112 ಎಸೆತ, 8 ಬೌಂಡರಿ, 1 ಸಿಕ್ಸರ್‌). ಪಡಿಕ್ಕಲ್‌ 54 ಎಸೆತಗಳಿಂದ 50 ರನ್‌ ಹೊಡೆದರು (5 ಬೌಂಡರಿ, 1 ಸಿಕ್ಸರ್‌). ರೋಹನ್‌ ಅವರ ಅಜೇಯ 50 ರನ್‌ 68 ಎಸೆತಗಳಿಂದ ಬಂತು (3 ಬೌಂಡರಿ).

ಸಂಕ್ಷಿಪ್ತ ಸ್ಕೋರ್‌: ಪುದುಚೇರಿ-9 ವಿಕೆಟಿಗೆ 207. ಕರ್ನಾಟಕ-41 ಓವರ್‌ಗಳಲ್ಲಿ 2 ವಿಕೆಟಿಗೆ 213.

ದಿಲ್ಲಿಯನ್ನು
ಮಣಿಸಿದ ಗುಜರಾತ್‌
ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಪಾರ್ಥಿವ್‌ ಪಟೇಲ್‌ ನೇತೃತ್ವದ ಗುಜರಾತ್‌ 6 ವಿಕೆಟ್‌ಗಳಿಂದ ದಿಲ್ಲಿಯನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ದಿಲ್ಲಿ 49 ಓವರ್‌ಗಳಲ್ಲಿ 223ಕ್ಕೆ ಆಲೌಟ್‌ ಆಯಿತು. ಜವಾಬಿತ್ತ ಗುಜರಾತ್‌ 37.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಲ್ಲಿ 225 ರನ್‌ ಬಾರಿಸಿ ಜಯ ಸಾಧಿಸಿತು. ಪಾರ್ಥಿವ್‌ ಪಟೇಲ್‌ (76)-ಪ್ರಿಯಾಂಕ್‌ ಪಾಂಚಾಲ್‌ (80) ಮೊದಲ ವಿಕೆಟಿಗೆ 150 ರನ್‌ ಪೇರಿಸಿ ದಿಲ್ಲಿ ಮೇಲೆ ಸವಾರಿ ಮಾಡಿದರು.

ದಿಲ್ಲಿ ಸರದಿಯಲ್ಲಿ ನಾಯಕ ಧ್ರುವ ಶೋರಿ 91 ರನ್‌ ಬಾರಿಸಿ ಗಮನ ಸೆಳೆದರು. ಗುಜರಾತ್‌ನ ಚಿಂತನ್‌ ಗಜ ಮತ್ತು ಎನ್‌. ಅರ್ಜಾನ್‌ ತಲಾ 3 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.