ವಿಜಯ್‌ ಹಜಾರೆ ಏಕದಿನ ಕರ್ನಾಟಕಕ್ಕೆ ಹ್ಯಾಟ್ರಿಕ್‌ ಜಯ


Team Udayavani, Mar 1, 2017, 11:17 AM IST

vijay-harare.jpg

ಕೋಲ್ಕತಾ: ರಾಜ್ಯ ಬೌಲರ್‌ಗಳ ಘಾತಕ ಬೌಲಿಂಗ್‌ ದಾಳಿಯಿಂದಾಗಿ ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಆತಿಥೇಯ ಕರ್ನಾಟಕ 73 ರನ್‌ ಗೆಲವು ಸಾಧಿಸಿದೆ. ಹ್ಯಾಟ್ರಿಕ್‌ ಜಯಭೇರಿಯೊಂದಿಗೆ ನಾಗಾಲೋಟಗೈದಿದೆ.

ಕೋಲ್ಕತಾದ “ಈಡನ್‌ ಗಾರ್ಡನ್ಸ್‌’ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ದೊಡ್ಡ ಮೊತ್ತವೇನೂ ಪೇರಿಸಲಿಲ್ಲ. 47.1 ಓವರ್‌ಗಳಲ್ಲಿ ಕೇವಲ 201 ರನ್ನಿಗೆ ಆಲೌಟ್‌ ಆಯಿತು. ಈ ಗುರಿ ಬೆನ್ನು ಹತ್ತಿದ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳು ಕರ್ನಾಟಕ ಬೌಲರ್‌ಗಳ ಮಾರಕ ದಾಳಿಗೆ ಸಾಲು ಸಾಲಾಗಿ ಉದುರತೊಡಗಿದರು. 27 ರನ್‌ ಆಗುವಷ್ಟರಲ್ಲಿಯೇ 5 ವಿಕೆಟ್‌ ಕಳೆದುಕೊಂಡು ಭಾರೀ ಅಂತರದ ಸೋಲಿನ ಸೂಚನೆ ನೀಡಿದರು. ಆದರೆ ಜಯದೇವ್‌ ಶಾ (38), ಚಿರಾಜ್‌ ಜಾನಿ (ಅಜೇಯ 25) ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಅನಂತರ ಶೌರ್ಯ ಸನದಿಯ (31) ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮನ್‌ಗಳು ಎರಡಂಕಿಯ ಮೊತ್ತ ದಾಟಲಿಲ್ಲ.

ಹೀಗಾಗಿ ಸೌರಾಷ್ಟ್ರ 36.2 ಓವರ್‌ನಲ್ಲಿಯೇ 128 ರನ್‌ಗೆ ಎಲ್ಲ ವಿಕೆಟ್‌ ಕಳೆದುಕೊಂಡು ಸೋಲುಂಡಿತು. ಕರ್ನಾಟಕದ ಪರ ಬಿಗು ದಾಳಿ ನಡೆಸಿದ ರೋನಿತ್‌ ಮೋರೆ 4 ವಿಕೆಟ್‌ ಉರುಳಿಸಿದರೆ, ಪ್ರಸಿದ್ಧ್ ಕೃಷ್ಣ ಮತ್ತು ಸ್ಟುವರ್ಟ್‌ ಬಿನ್ನಿ ತಲಾ 2 ವಿಕೆಟ್‌ ಪಡೆದರು.

ರಾಜ್ಯಕ್ಕೆ ಅಗರ್ವಾಲ್‌ ಆಸರೆ
ಮೊದಲು ಬ್ಯಾಟಿಂಗ್‌ ಮಾಡಲಿಳಿದ ಕರ್ನಾಟಕ 2ನೇ ಎಸೆತದಲ್ಲಿಯೇ ರಾಬಿನ್‌ ಉತ್ತಪ್ಪ ವಿಕೆಟ್‌ ಕಳೆದುಕೊಂಡಿತು. ಉತ್ತಪ್ಪ ಖಾತೆಯನ್ನೇ ತೆರೆದಿರಲಿಲ್ಲ. ಅನಂತರವೂ ಕರ್ನಾಟಕ ಒಂದು ಕಡೆಯಿಂದ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಆದರೆ ಮತ್ತೂಂಡೆದೆ ಆರಂಭಿಕ ಬ್ಯಾಟ್ಸ್‌ಮನ್‌ ಮಾಯಾಂಕ್‌ ಅಗರ್ವಾಲ್‌ ಕ್ರೀಸ್‌ಗೆ ಅಂಟಿಕೊಂಡು ನಿಂತರು. 114 ಎಸೆತ ಎದುರಿಸಿದ ಅಗರ್ವಾಲ್‌ ಒಂದು ಸಿಕ್ಸರ್‌, 5 ಬೌಂಡರಿ ಸೇರಿದಂತೆ 89 ರನ್‌ ಬಾರಿಸಿದರು. 

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-47.1 ಓವರ್‌ಗಳಲ್ಲಿ 201 (ಮಾಯಾಂಕ್‌ ಅಗರ್ವಾಲ್‌ 89, ಸ್ಟುವರ್ಟ್‌ ಬಿನ್ನಿ 31, ಕುಶಂಗ್‌ ಪಟೇಲ್‌ 36ಕ್ಕೆ 4).ಸೌರಾಷ್ಟ್ರ-36.2 ಓವರ್‌ಗಳಲ್ಲಿ 128 (ಜಯದೇವ್‌ ಶಾ 38, ಚಿರಾಗ್‌ ಜಾನಿ 28, ರೋನಿತ್‌ ಮೋರೆ 20ಕ್ಕೆ 4).

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.