ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ : ಪಡಿಕ್ಕಲ್‌ ಸತತ ಶತಕ; ಕೇರಳವನ್ನು ಕಾಡಿದ ಕರ್ನಾಟಕ


Team Udayavani, Feb 26, 2021, 11:34 PM IST

Untitled-2

ಬೆಂಗಳೂರು: “ಟಾಪ್‌ ಫಾರ್ಮ್’ನಲ್ಲಿರುವ ಆರಂಭಕಾರ ದೇವದತ್ತ ಪಡಿಕ್ಕಲ್‌ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಸತತ 2ನೇ ಶತಕ ಬಾರಿಸಿದ್ದಾರೆ. ಕರ್ನಾಟಕ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ. ಶುಕ್ರವಾರದ ಮುಖಾಮುಖೀಯಲ್ಲಿ ಆರ್‌. ಸಮರ್ಥ್ ಪಡೆ ಕೇರಳವನ್ನು 9 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿತು.

ಕರ್ನಾಟಕದ ಮಾಜಿ ಆಟಗಾರ ರಾಬಿನ್‌ ಉತ್ತಪ್ಪ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡರೂ, ಮುಂದಿನ ಓವರಿನಲ್ಲೇ ಸಂಜು ಸ್ಯಾಮ್ಸನ್‌ (3) ಔಟಾದರೂ ಕೇರಳ 8 ವಿಕೆಟಿಗೆ 277 ರನ್ನುಗಳ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು. ಜವಾಬಿತ್ತ ಕರ್ನಾಟಕ 45.3 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 279 ರನ್‌ ಬಾರಿಸಿ “ಸಿ’ ವಿಭಾಗದ ಅಗ್ರಸ್ಥಾನಿಯಾಯಿತು.

ಪಡಿಕ್ಕಲ್‌ ಪ್ರಚಂಡ ಬ್ಯಾಟಿಂಗ್‌ :

ಪ್ರಚಂಡ ಬ್ಯಾಟಿಂಗ್‌ ಮುಂದುವರಿಸಿದ ಪಡಿಕ್ಕಲ್‌ 126 ರನ್‌ ಬಾರಿಸಿ ಅಜೇಯರಾಗಿ ಉಳಿದರು (138 ಎಸೆತ, 13 ಬೌಂಡರಿ, 2 ಸಿಕ್ಸರ್‌). ನಾಯಕ ಆರ್‌. ಸಮರ್ಥ್ 51 ಎಸೆತ ಎದುರಿಸಿ 62 ರನ್‌ ಮಾಡಿದರು. ಇವರಿಂದ ಆರಂಭಿಕ ವಿಕೆಟಿಗೆ 99 ರನ್‌ ಒಟ್ಟುಗೂಡಿತು. ವನ್‌ಡೌನ್‌ ಬ್ಯಾಟ್ಸ್‌ಮನ್‌ ಕೆ. ಸಿದ್ಧಾರ್ಥ್ ಔಟಾಗದೆ 86 ರನ್‌ ಹೊಡೆದರು (84 ಎಸೆತ, 5 ಬೌಂಡರಿ, 3 ಸಿಕ್ಸರ್‌). ಮುರಿಯದ ದ್ವಿತೀಯ ವಿಕೆಟಿಗೆ 180 ರನ್‌ ಹರಿದು ಬಂತು.

ಪಡಿಕ್ಕಲ್‌ ಒಡಿಶಾ ವಿರುದ್ಧದ ಕಳೆದ ಪಂದ್ಯದಲ್ಲಿ 152 ರನ್ನುಗಳ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಕೂಟದ 4 ಪಂದ್ಯಗಳಿಂದ ಅವರ ರನ್‌ ಗಳಿಕೆ 427ಕ್ಕೆ ಏರಿದೆ.

ಕೇರಳ ಸರದಿಯಲ್ಲಿ ವತ್ಸಲ್‌ ಗೋವಿಂದ್‌ 95, ನಾಯಕ ಸಚಿನ್‌ ಬೇಬಿ 54, ಅಜರುದ್ದೀನ್‌ ಔಟಾಗದೆ 59 ರನ್‌ ಮಾಡಿದರು. ಉತ್ತಪ್ಪ ಅವರನ್ನು ಮೊದಲ ಎಸೆತದಲ್ಲೇ ಕೆಡವಿದ ಮಿಥುನ್‌ ಸಾಧನೆ 52ಕ್ಕೆ 5 ವಿಕೆಟ್‌. ಪ್ರಸಿದ್ಧ್ ಕೃಷ್ಣ 2 ವಿಕೆಟ್‌ ಕಿತ್ತರು.

ರವಿವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ತಂಡ ರೈಲ್ವೇಸ್‌ ವಿರುದ್ಧ ಆಡಲಿದೆ.

ಸಂಕ್ಷಿಪ್ತ ಸ್ಕೋರ್‌: ಕೇರಳ-8 ವಿಕೆಟಿಗೆ 277 (ವತ್ಸಲ್‌ ಗೋವಿಂದ್‌ 95, ಅಜರುದ್ದೀನ್‌ ಔಟಾಗದೆ 59, ಸಚಿನ್‌ ಬೇಬಿ 54, ಮಿಥುನ್‌ 52ಕ್ಕೆ 5, ಪ್ರಸಿದ್ಧ್ ಕೃಷ್ಣ 65ಕ್ಕೆ 2). ಕರ್ನಾಟಕ-45.3 ಓವರ್‌ಗಳಲ್ಲಿ ಒಂದು ವಿಕೆಟಿಗೆ 279 (ಪಡಿಕ್ಕಲ್‌ ಔಟಾಗದೆ 126, ಸಿದ್ಧಾರ್ಥ್ ಔಟಾಗದೆ 86, ಸಮರ್ಥ್ 62, ಜಲಜ್‌ ಸಕ್ಸೇನಾ 34ಕ್ಕೆ 1).

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.