ವಿಜಯ್ ಹಜಾರೆ ಟ್ರೋಫಿ: ಪಂಜಾಬ್ ವಿರುದ್ಧ ಗೆದ್ದು ಸೆಮಿ ಎಂಟ್ರಿಕೊಟ್ಟ ಕರ್ನಾಟಕ
Team Udayavani, Nov 28, 2022, 5:15 PM IST
ಸಂಗ್ರಹ ಚಿತ್ರ
ಅಹಮದಾಬಾದ್: ಪಂಜಾಬ್ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಫಿ-2022ರ ಸೆಮಿ ಫೈನಲ್ ಪ್ರವೇಶ ಮಾಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ 50 ಓವರ್ ಗಳಲ್ಲಿ 235 ರನ್ ಗಳಿಸಿದರೆ, ಕರ್ನಾಟಕ ತಂಡವು 49.2 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಪಂಜಾಬ್ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ವಿಕೆಟ್ ಕಳೆದುಕೊಂಡಿತು. ಪ್ರಭಸಿಮ್ರನ್ ಗೋಲ್ಡನ್ ಡಕ್ ಗೆ ಔಟಾದರು. ಒಂದೆಡೆ ಪಂಜಾಬ್ ಸತತ ವಿಕೆಟ್ ಕಳೆದುಕೊಂಡರೂ ಅಭಿಷೇಕ್ ಶರ್ಮಾ ನಿಂತು ಆಡಿದರು. 123 ಎಸೆತ ಎದುರಿಸಿದ ಶರ್ಮಾ 109 ರನ್ ಗಳಿಸಿದರು. ಉಳಿದಂತೆ ಸನ್ವೀರ್ ಸಿಂಗ್ 39 ರನ್, ಅನ್ಮೋಲ್ ಮಲ್ಹೋತ್ರಾ 29 ರನ್ ಮಾಡಿದರು. ಕರ್ನಾಟಕದ ಪರ ವಿದ್ವತ್ ಕಾವೇರಪ್ಪ ನಾಲ್ಕು ವಿಕೆಟ್, ರೋನಿತ್ ಮೋರೆ ಎರಡು ವಿಕೆಟ್, ವಿ ಕೌಶಿಕ್, ಮನೋಜ್ ಭಂಡಗೆ ಮತ್ತು ಗೌತಮ್ ತಲಾ ಒಂದು ವಿಕೆಟ್ ಕಿತ್ತರು.
ಗುರಿ ಬೆನ್ನತ್ತಿದ ಕರ್ನಾಟಕ ತಂಡವೂ ಆರಂಭದಲ್ಲಿ ನಾಯಕ ಮಯಾಂಕ್ ರೂಪದಲ್ಲಿ ವಿಕೆಟ್ ಕಳೆದುಕೊಂಡಿತು. ಆದರೆ ನಂತರ ರವಿಕುಮಾರ್ ಸಮರ್ಥ್ 71 ರನ್ ಗಳಿಸಿ ಆಧಾರ ನೀಡಿದರು. ಅನುಭವಿಗಳಾದ ಮನೀಷ್ ಪಾಂಡೆ 35 ರನ್, ಶ್ರೇಯಸ್ ಗೋಪಾಲ್ 42 ರನ್, ನಿಕಿನ್ ಜೋಸ್ 29 ರನ್ ಮಾಡಿದರು. ಕೊನೆಯಲ್ಲಿ ಮನೋಜ್ ಭಂಡಗೆ ಅಜೇಯ 25 ರನ್ ಮಾಡಿದರು. ಕೊನೆಯಲ್ಲಿ ಸಿಕ್ಸರ್ ಮೂಲಕ ತಂಡಕ್ಕೆ ಜಯ ತಂದಿತ್ತರು.
ನಾಲ್ಕು ವಿಕೆಟ್ ಕಿತ್ತ ವಿಧ್ವತ್ ಕಾವೇರಪ್ಪ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್