ವಿಜಯ್ ಹಜಾರೆ ಟ್ರೋಫಿ: ಎನ್.ಜಗದೀಶನ್ ಇತಿಹಾಸ; ಕೊಹ್ಲಿ ದಾಖಲೆ ಪತನ

ಸತತ 5 ನೇ ಶತಕ, ಏಕದಿನ ಪಂದ್ಯದಲ್ಲಿ 277 ರನ್ ಚಚ್ಚಿದ ತಮಿಳುನಾಡಿನ ಬ್ಯಾಟ್ಸ್ ಮ್ಯಾನ್

Team Udayavani, Nov 21, 2022, 2:58 PM IST

1-asdsadad

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡಿನ ಆರಂಭಿಕ ಆಟಗಾರ ಎನ್.ಜಗದೀಶನ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಸ್ಪೋಟಕ ದ್ವಿಶತಕ ಗಳಿಸಿದ್ದು, ದಿಗ್ಗಜರ ಹಲವು ದಾಖಲೆಗಳು ಮುರಿಯಲ್ಪಟ್ಟಿವೆ. ತಮ್ಮ ಸತತ ಐದನೇ ಶತಕವನ್ನು ಗಳಿಸಿದ ಜಗದೀಶನ್ ಈಗ ಪ್ರಧಾನ ದೇಶೀಯ ಕ್ರಿಕೆಟ್ ನಲ್ಲಿ ಸತತ ಶತಕಗಳ ದಾಖಲೆ ಹೊಂದಿದ್ದ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಜಗದೀಶನ್ ನಿರ್ಗಮಿಸಿದಾಗ, ಅವರು ಬರೋಬ್ಬರಿ 277 ರನ್ ಗಳಿಸಿದ್ದರು. ತಮಿಳುನಾಡು 50 ಓವರ್‌ಗಳಲ್ಲಿ 506 ರನ್ ಗಳ ಹೊಸ ದಾಖಲೆಯ ಬೃಹತ್ ಮೊತ್ತ ಕಲೆ ಹಾಕಿತು.

ಜಗದೀಶನ್ ಸಿಡಿಲಬ್ಬರದ ಬ್ಯಾಟಿಂಗ್
ಟಾಸ್ ಗೆದ್ದ ನಂತರ ಅರುಣಾಚಲ ಪ್ರದೇಶ ಫೀಲ್ಡಿಂಗ್ ಆಯ್ದು ಕೊಂಡಿತು. ಈ ನಿರ್ಧಾರವು ಬೌಲರ್ ಗಳಿಗೆ ದೊಡ್ಡ ಸಂಕಟವನ್ನೇ ತಂದೊಡ್ಡಿತು. ಈ ಹಿಂದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ನಾಲ್ಕು ಶತಕಗಳನ್ನು ಗಳಿಸಿದ್ದ ಜಗದೀಶನ್ ಅವರು ಪ್ರಭಾವಶಾಲಿ ಫಾರ್ಮ್‌ನೊಂದಿಗೆ ಮುಂದುವರಿದು 141 ಎಸೆತಗಳಲ್ಲಿ 277 ರನ್ ಗಳಿಸಿದರು. ಅವರ ಅದ್ಭುತ ಇನ್ನಿಂಗ್ಸ್‌ನಲ್ಲಿ ಅತ್ಯಮೋಘ 15 ಸಿಕ್ಸರ್ ಮತ್ತು ಆಕರ್ಷಕ 25 ಬೌಂಡರಿಗಳು ಒಳಗೊಂಡಿದ್ದವು.

ರೋಹಿತ್ ಶರ್ಮಾ ದಾಖಲೆಯೂ ಪತನ
ನವೆಂಬರ್ 2014 ರಲ್ಲಿ ಐಸಿಸಿ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಜಗದೀಶನ್ ಮುರಿದರು. 277 ರನ್ ಏಕದಿನ ಕ್ರಿಕೆಟ್ ನ ಒಂದು ಇನ್ನಿಂಗ್ಸ್‌ನಲ್ಲಿ  ಗರಿಷ್ಠ ಸ್ಕೋರ್ ಆಗಿದೆ.

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ತಂಡವೊಂದು ಕಲೆ ಹಾಕಿದ ಅತ್ಯಧಿಕ ಮೊತ್ತ ಇದಾಗಿದೆ.
ಉಳಿದ ಅತ್ಯಧಿಕ ಮೊತ್ತಗಳು ಈ ಕೆಳಗಿನಂತೆ ಇವೆ
ಇಂಗ್ಲೆಂಡ್ 498/4 – ನೆದರ್ಲ್ಯಾಂಡ್ಸ್ ವಿರುದ್ಧ (2022)
ಸರ್ರೆ 496/4 – ಗ್ಲೌಸೆಸ್ಟರ್‌ಶೈರ್ ವಿರುದ್ಧ (2007)
ಇಂಗ್ಲೆಂಡ್ 481/6 – ಆಸ್ಟ್ರೇಲಿಯಾದ ವಿರುದ್ಧ (2018)
ಭಾರತ ಎ 458/4 – ಲೀಸೆಸ್ಟರ್‌ಶೈರ್  ವಿರುದ್ಧ (2018)

ಆರಂಭಿಕ ವಿಕೆಟ್‌ ದಾಖಲೆಯ ಜತೆಯಾಟ
ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸುಲಭವಾಗಿ ಮುರಿದ ಜಗದೀಶನ್ ಮತ್ತು ಸಾಯಿ ಸುದರ್ಶನ್ ಅವರು 38.3 ಓವರ್‌ಗಳಲ್ಲಿ 416 ರನ್‌ಗಳ ಆರಂಭಿಕ ಜತೆಯಾಟದೊಂದಿಗೆ ಮತ್ತೊಂದು ದಾಖಲೆಯನ್ನು ಮುರಿದರು. ಇದು ಲಿಸ್ಟ್-ಎ ಕ್ರಿಕೆಟ್‌ನ ಇತಿಹಾಸದಲ್ಲಿ ಮೊದಲ ವಿಕೆಟ್‌ ಗೆ ಕಲೆ ಹಾಕಿದ ಗರಿಷ್ಠ ಮೊತ್ತಗಳ ದಾಖಲೆಯಾಗಿದೆ. ಜಗದೀಶನ್ 277 ರನ್ ಗಳಿಸಿದರೆ, ಸಾಯಿ ಸುದರ್ಶನ್ 102 ಎಸೆತಗಳಲ್ಲಿ 154 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 19 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು ಒಳಗೊಂಡಿದ್ದು, ಆರಂಭಿಕ ಜತೆಯಾಟಕ್ಕೆ ಟೆಕಿ ಡೋರಿಯಾ ಬ್ರೇಕ್ ಹಾಕಿದರು.

ಜಗದೀಶನ್ 42ನೇ ಓವರ್‌ನಲ್ಲಿ ಔಟಾದ ನಂತರ ಬಾಬಾ ಅಪರಜಿತ್ ಮತ್ತು ಅವರ ಸಹೋದರ ಇಂದ್ರಜಿತ್ ಆಟ ಮುಂದುವರಿಸಿ ತಮಿಳುನಾಡು 50 ಓವರ್‌ಗಳಲ್ಲಿ ಒಟ್ಟು 506 ರನ್‌ ಗಳಿಸಲು ಕಾರಣರಾದರು. ಇಬ್ಬರೂ ಸಹೋದರರು ತಮ್ಮ ಇನ್ನಿಂಗ್ಸ್‌ನಲ್ಲಿ ತಲಾ 31 ರನ್ ಗಳಿಸಿ ಅಜೇಯರಾಗಿ ಉಳಿದರು. ಕುತೂಹಲಕಾರಿಯಾಗಿ, 416 ರನ್ ಜತೆಯಾಟದಲ್ಲಿ ಜಗದೀಶನ್ 251 ರನ್‌ಗಳನ್ನು ಕೊಡುಗೆಯಾಗಿ ನೀಡಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.