ಪಾಂಡ್ಯ, ರಾಹುಲ್ ಔಟ್ : ವಿಜಯ್ ಶಂಕರ್, ಗಿಲ್ ಇನ್
Team Udayavani, Jan 13, 2019, 10:00 AM IST
ಮುಂಬೈ: ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಅಸಭ್ಯ ಹೇಳಿಕೆ ನೀಡಿದ್ದ ಟೀಮ್ ಇಂಡಿಯಾ ಆಟಗಾರರಾದ ಕೆ.ಎಲ್.ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ತಾತ್ಕಾಲಿಕ ಅಮಾನತು ಮಾಡಿದ ಹಿನ್ನಲೆಯಲ್ಲಿ ಶುಭ್ಮನ್ ಗಿಲ್ ಮತ್ತು ವಿಜಯ್ ಶಂಕರ್ ಅವರನ್ನು ತಂಡಕ್ಕೆ ಸೇರಿಸಿಸಿಕೊಳ್ಳಲಾಗಿದೆ.
ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿ ಮತ್ತು ಮುಂಬರುವ ನ್ಯೂಜಿಲ್ಯಾಂಡ್ ವಿರುದ್ದದ ಸರಣಿಗೆ ಈ ಬದಲಾವಣೆ ಮಾಡಿಕೊಳ್ಳಲಾಗಿದೆ. ಆದರೆ ಶುಭ್ಮನ್ ಗಿಲ್ ಅವರನ್ನು ನ್ಯೂಜಿಲ್ಯಾಂಡ್ ಸರಣಿಗೆ ಮಾತ್ರ ಕರೆಸಿಕೊಳ್ಳಲಾಗಿದೆ. ವಿಜಯ್ ಶಂಕರ್ ಆಸ್ಟ್ರೇಲಿಯಾ ವಿರುದ್ದದ ಎರಡನೇ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.
ಪಂಜಾಬ್ ಮೂಲದ 19ರ ಹರೆಯದ ಶುಭ್ಮನ್ ಗಿಲ್ ಭಾರತ ಅಂಡರ್ 19 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕಿರಿಯರ ವಿಶ್ವ ಕಪ್ ನಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯು ಗಿಲ್ ಗೆ ಒಲಿದು ಬಂದಿತ್ತು.
ತಮಿಳುನಾಡು ಮೂಲದ ಆಲ್ ರೌಂಡರ್ ವಿಜಯ್ ಶಂಕರ್ ಈ ಮೊದಲು ನಿದಹಾಸ್ ಟ್ರೋಫಿಯಲ್ಲಿ ಭಾರತ ದಂಡದ ಪರ ಆಡಿದ ಅನುಭವ ಹೊಂದಿದ್ದಾರೆ. 5 ಟಿ-20 ಪಂದ್ಯಗಳ ಅನುಭವ ಹೊಂದಿರುವ ಶಂಕರ್ ಏಕದಿನ ಪಂದ್ಯಗಳಲ್ಲಿ ಭಾರತ ತಂಡದ ಪರವಾಗಿ ಆಡುವ ಅಸೆ ಹೊತ್ತು ಆಸ್ಟ್ರೇಲಿಯಾಗೆ ಪ್ರಯಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ