ಮೂರು ಕೋಟಿ ರೂ ದೇಣಿಗೆ ನೀಡಿದ ವಿರುಷ್ಕಾ ಜೋಡಿ? ಭಾರೀ ಮೊತ್ತ ನೀಡಿದ್ದರೂ ಮುಚ್ಚಿಟ್ಟಿದ್ದೇಕೆ?
Team Udayavani, Apr 1, 2020, 2:10 PM IST
ಮುಂಬೈ: ದೇಶದಲ್ಲಿ ತಲ್ಲಣ ಎಬ್ಬಿಸಿರುವ ಮಹಾಮಾರಿ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮ ದೇಣಿಗೆ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.
ಈ ವಿಷಯ ಎಲ್ಲರಿಗೂ ಗೊತ್ತು. ಆದರೆ ಎಷ್ಟು ಹಣ ನೀಡಿದ್ದಾರೆ ಎನ್ನುವುದನ್ನು ಇಬ್ಬರು ಎಲ್ಲಿಯೂ ಪ್ರಕಟಿಸಿರಲಿಲ್ಲ. ಇದೀಗ ಈ ಕುತೂಹಲಕ್ಕೆ ಉತ್ತರ ಸಿಕ್ಕಿದೆ.
ಮೂಲಗಳ ಪ್ರಕಾರ ಅವರಿಬ್ಬರು ಜಂಟಿಯಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟಾರೆ 3 ಕೋಟಿ ರೂ. ನೀಡಿದ್ದಾರೆ ಎಂದು ಬಾಲಿವುಡ್ನ ಆಪ್ತ ಮೂಲಗಳು ತಿಳಿಸಿವೆ.
ಭಾರತದ ಒಟ್ಟಾರೆ ಕ್ರೀಡಾ ಕುಟುಂಬ ಕೋವಿಡ್-19 ವಿರುದ್ಧ ಸಮರಕ್ಕೆ ಸರ್ಕಾರದ ಜತೆಗೆ ಕೈ ಜೋಡಿಸಿರುವುದು ಶ್ಲಾಘನೀಯ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ಸುರೇಶ್ ರೈನಾ ಸಹಿತ ಹಲವಾರು ಮಂದಿ ದಿಗ್ಗಜರು ತಮ್ಮ ಕೈಯಿಂದಾಗಿರುವ ಧನ ಸಹಾಯವನ್ನು ಮಾಡಿದ್ದಾರೆ.
ಧೋನಿ ಕೂಡ 1 ಲಕ್ಷ ರೂ. ಹಣವನ್ನು ಪುಣೆ ಮೂಲದ ಸರ್ಕಾರೇತರ ಸಂಘ ಸಂಸ್ಥೆಗೆ ನೀಡಿದ್ದರು, ಆದರೆ ಇದು ವಿವಾದಕ್ಕೂ ಕಾರಣವಾಗಿತ್ತು, ಕೋಟ್ಯಂತರ ರೂ.ಗಳ ಒಡೆಯ ಧೋನಿ ಸಣ್ಣ ಮೊತ್ತ ನೀಡಿರುವುದು ಹಲವರ ಕಣ್ಣು ಕೆಂಪಗಾಗಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿಯೋ ಗೊತ್ತಿಲ್ಲ, ಎಲ್ಲೂ ಕೊಹ್ಲಿ -ಅನುಷ್ಕಾ ತಾವು ನೀಡಿರುವ ಹಣದ ಮೊತ್ತವನ್ನು ಎಲ್ಲೂ ಬಹಿರಂಗ ಪಡಿಸಿರಲಿಲ್ಲ.
ತಮ್ಮ ಕೈನಿಂದ ಆಗಿರುವ ಹಣವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದೇವೆ ಎಂದಷ್ಟೆ ಪ್ರತಿಕ್ರಿಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ