ವಿರಾಟ್ ಕೊಹ್ಲಿ ಎಂದಿಗೂ ಸೂರ್ಯಕುಮಾರ್ ರಷ್ಟು ಉತ್ತಮ ಬ್ಯಾಟರ್ ಆಗಲಾರರು: ಪಾಕ್ ಮಾಜಿ ನಾಯಕ
Team Udayavani, Sep 4, 2022, 5:24 PM IST
ದುಬೈ: ಏಷ್ಯನ್ ಕ್ರಿಕೆಟಿಂಗ್ ದೇಶಗಳ ನಡುವೆ ಸದ್ಯ ಯುಎಇ ನಲ್ಲಿ ಏಷ್ಯಾ ಕಪ್ ನಡೆಯುತ್ತಿದೆ. ಇಂದು ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗಲಿದೆ.
ಕಳೆದ ಕೆಲವು ಸಮಯದಿಂದ ಕಳಪೆ ಫಾರ್ಮ್ ನಲ್ಲಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಏಷ್ಯಾಕಪ್ ನಲ್ಲಿ ಫಾರ್ಮ್ ಕಂಡು ಕೊಳ್ಳುತ್ತಿದ್ದಾರೆ. ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ 35 ರನ್ ಮತ್ತು ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಅರ್ಧಶತಕ ಸಿಡಿದಿದ್ದರು. ಆದರೆ ಪಾಕಿಸ್ಥಾನದ ಮಾಜಿ ನಾಯಕ ರಶೀದ್ ಲತೀಫ್ ಪ್ರಕಾರ, ವಿರಾಟ್ ಕೊಹ್ಲಿ ಅವರು ಸೂರ್ಯಕುಮಾರ್ ಯಾದವ್ ರಂತೆ ಉತ್ತಮ ಬ್ಯಾಟರ್ ಸಾಧ್ಯವೇ ಇಲ್ಲವಂತೆ.
ಟಿ20 ಕ್ರಿಕೆಟ್ಗೆ ಬಂದರೆ ಮುಂಬೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಂತೆ ಕೊಹ್ಲಿ ಎಂದಿಗೂ ಉತ್ತಮವಾಗುವುದಿಲ್ಲ ಎಂದು ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ರಶೀದ್ ಲತೀಫ್, “ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗೆ ಯಾರೂ ಹತ್ತಿರವಾಗುವುದಿಲ್ಲ, ಆದರೆ ಅವರು ಎಂದಿಗೂ ಉತ್ತಮ ಟಿ20 ಆಟಗಾರನಾಗಿರಲಿಲ್ಲ. ಅವರು ಉತ್ತಮ ಸರಾಸರಿ ಹೊಂದಿದ್ದಾರೆ, ಆದರೆ ಸ್ಟ್ರೈಕ್ ರೇಟ್ ಉತ್ತಮವಾಗಿಲ್ಲ” ಎಂದಿದ್ದಾರೆ.
“ವಿರಾಟ್ ಕೊಹ್ಲಿ ನಿಧಾನವಾಗಿ ಆಡುತ್ತಾರೋ ಅಥವಾ ವೇಗವಾಗಿ ಆಡುತ್ತಾರೋ ಎಂಬುದು ಮುಖ್ಯವಲ್ಲ. ಅವರು 30-35 ಎಸೆತಗಳನ್ನು ಆಡಿದ ನಂತರ ಹೊಡೆಯಲು ಪ್ರಾರಂಭಿಸುತ್ತಾರೆ. ರೋಹಿತ್ ಶರ್ಮಾ ಪವರ್ ಪ್ಲೇ ಬಳಸುವ ರೀತಿಯ ಆಟಗಾರ. ವಿರಾಟ್ ಎಂದಿಗೂ ಸೂರ್ಯಕುಮಾರ್ ಯಾದವ್ ಅಥವಾ ರೋಹಿತ್ ಶರ್ಮಾ ಆಗಲು ಸಾಧ್ಯವಿಲ್ಲ. ಅವರ ಆಟದ ಶೈಲಿ ಆರ್ ಸಿಬಿ ಯಲ್ಲಿಯೂ ಹಾಗೆಯೇ ಉಳಿದಿದೆ, ಅದಕ್ಕಾಗಿಯೇ ಅವರು ಎಂದಿಗೂ ಚಾಂಪಿಯನ್ ಆಗಲು ಸಾಧ್ಯವಾಗಲಿಲ್ಲ” ಲತೀಫ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ