ಐಪಿಎಲ್‌ ನಡುವಲ್ಲೇ ಕೊಹ್ಲಿ ನಾಯಕತ್ವಕ್ಕೆ ಸಂಚಕಾರ?


Team Udayavani, Sep 23, 2021, 7:30 AM IST

ಐಪಿಎಲ್‌ ನಡುವಲ್ಲೇ ಕೊಹ್ಲಿ ನಾಯಕತ್ವಕ್ಕೆ ಸಂಚಕಾರ?

ಅಬುಧಾಬಿ: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದ ನಾಯಕನಾಗಿ ಇದು ತನ್ನ ಕೊನೆಯ ಋತು ಎಂಬುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗಷ್ಟೇ ಪ್ರಕಟಿಸಿದ್ದರು. ಆದರೀಗ 2021ನೇ ಐಪಿಎಲ್‌ ನಡುವೆಯೇ ಅವರ ನಾಯಕತ್ವಕ್ಕೆ ಸಂಚಕಾರ ಬರಲಿದೆಯೇ ಎಂಬ ಪ್ರಶ್ನೆಯೊಂದು ಮೂಡಿದೆ. ಮಾಜಿ ಕ್ರಿಕೆಟಿಗರೊಬ್ಬರು ಈ ಸಾಧ್ಯತೆಯನ್ನು ತೆರೆದಿರಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರ ದಿಢೀರ್‌ ರಾಜೀನಾಮೆ ಘೋಷಣೆಯಿಂದ ತಂಡದ ಸಾಧನೆ ಮೇಲೆ ಪರಿಣಾಮ ಬೀರಲಿದೆ ಎಂದು ಅನೇಕ ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದರು. ಅದರಂತೆ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಹೀನಾಯವಾಗಿ ಸೋಲನುಭವಿಸಿತ್ತು.

ಮೊದಲರ್ಧದಲ್ಲಿ ಉತ್ತಮವಾಗಿ ಆಡಿದ್ದ ಆರ್‌ಸಿಬಿ ಯುಎಇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿರುವುದು ಫ್ರಾಂಚೈಸಿಯ ಚಿಂತೆಗೆ ಕಾರಣವಾಗಿದೆ. ಆರ್‌ಸಿಬಿ ಮುಂದಿನ ಅಥವಾ ಇನ್ನೊಂದು ಪಂದ್ಯವನ್ನು ಹೀಗೆಯೇ ಸೋತರೆ ಟೂರ್ನಿಯ ನಡುವಲ್ಲೇ ಆರ್‌ಸಿಬಿ ನಾಯಕತ್ವದಲ್ಲಿ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಕ್ರಿಕೆಟಿಗರೊಬ್ಬರು, “ಮುಂದಿನ ಪಂದ್ಯಗಳಿಗೆ ಕೊಹ್ಲಿ ಬದಲು ಮತ್ತೂಬ್ಬ ಆಟಗಾರನಿಗೆ ಆರ್‌ಸಿಬಿ ನಾಯಕತ್ವ ವಹಿಸುವ ಸಾಧ್ಯತೆ ಇದೆ. ಈ ಕುರಿತು ಬೆಂಗಳೂರು ಫ್ರಾಂಚೈಸಿ ಕೂಡ ಕೊಹ್ಲಿ ಜತೆ ಚರ್ಚಿಸಿದ್ದು, ಅವರೂ ಇದಕ್ಕೆ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ’ ಎಂದಿದ್ದಾರೆ.

ಬದಲಾವಣೆ ಹೊಸತಲ್ಲ: ಐಪಿಎಲ್ ನಲ್ಲಿ ಇಂತಹ ಬದಲಾವಣೆ ಹೊಸತೇನಲ್ಲ. ಹಿಂದೆಯೂ ಹಲವು ತಂಡಗಳು ಅರ್ಧದಲ್ಲೇ ನಾಯಕನನ್ನು ಬದಲಿಸಿವೆ. ಕೆಕೆಆರ್‌ ದಿನೇಶ್‌ ಕಾರ್ತಿಕ್‌ ಅವರನ್ನು ಕೆಳಗಿಳಿಸಿ ಇಯಾನ್‌ ಮಾರ್ಗನ್‌ ಅವರನ್ನು ನೇಮಿಸಿತ್ತು. ಹೈದರಾಬಾದ್‌ ತಂಡದ ನಾಯಕತ್ವವನ್ನು ಡೇವಿಡ್‌ ವಾರ್ನರ್‌ ಅವರಿಂದ ಕೇನ್‌ ವಿಲಿಯಮ್ಸನ್‌ಗೆ ವರ್ಗಾಯಿಸಲಾಗಿತ್ತು. ಆರ್‌ಸಿಬಿಯಲ್ಲೂ ಇಂಥ ಪರಿವರ್ತನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಕ್ರಿಕೆಟಿಗರು ತಿಳಿಸಿದ್ದಾರೆ. ಆದರೆ ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿ ಹೊಪರತುಪಡಿಸಿ ನಾಯಕತ್ವಕ್ಕೆ ತಾರಾ ಮೆರುಗು ತಂದುಕೊಡಬಲ್ಲ ಭಾರತೀಯ ಆಟಗಾರ ಯಾರಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ!

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.