ಆರ್ ಸಿಬಿ ನಾಯಕತ್ವಕ್ಕೆ ವಿದಾಯ ಹೇಳಿದ ಹಿಂದಿನ ಕಾರಣ ನೀಡಿದ ವಿರಾಟ್ ಕೊಹ್ಲಿ


Team Udayavani, Feb 24, 2022, 4:20 PM IST

Virat Kohli explains decision to quit RCB captaincy

ಬೆಂಗಳೂರು: ಕಳೆದ ಸೀಸನ್ ನ ಐಪಿಎಲ್ ಆರಂಭಕ್ಕೂ ಮೊದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ ಹಿಂದೆ ಯಾವುದೇ ದುಗುಡ ಇರಲಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

ಆರ್ ಸಿಬಿ ಪಾಡ್ ಕಾಸ್ಟ್ ನಲ್ಲಿ ಮಾತನಾಡಿರುವ ಅವರು, ಆರ್ ಸಿಬಿ ನಾಯಕತ್ವ ತೊರೆಯುವ ನಿರ್ಧಾರವು ಸರಳ ಮತ್ತು ನೇರವಾಗಿತ್ತು. ಕೆಲಸದ ಹೊರೆಯನ್ನು ಕಡಿಮೆ ಮಾಡಲು ಈ ನಿರ್ಧಾರ ಮಾಡಲಾಗಿತ್ತು ಎಂದಿದ್ದಾರೆ.

ಕ್ರಿಕೆಟಿಗರು ತೆಗೆದುಕೊಳ್ಳುವ ನಿರ್ಧಾರಗಳನ್ನು ಹೊರಗಿನ ಜನರು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ ಎಂದು ಕೊಹ್ಲಿ ಹೇಳಿದರು. ಅಲ್ಲದೆ ಅವರ ನಿರ್ಧಾರದ ಸುತ್ತಲಿನ ಊಹಾಪೋಹಗಳನ್ನು ತಳ್ಳಿಹಾಕಿದರು.

ಆರ್‌ಸಿ ಬಿ ಸ್ಟಾರ್ ಆಟಗಾರ ವಿರಾಟ್, ಕಳೆದ ವರ್ಷ ಭಾರತದ ಟಿ 20 ನಾಯಕನ ಸ್ಥಾನವನ್ನು ತೊರೆದರು, ನಂತರ ಅವರನ್ನು ಏಕದಿನ ನಾಯಕತ್ವದಿಂದ ವಜಾಗೊಳಿಸಲಾಗಿತ್ತು. ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 1-2 ಅಂತರದಿಂದ ಸೋತ ನಂತರ ವಿರಾಟ್ ಕೊಹ್ಲಿ ಅನಿರೀಕ್ಷಿತ ನಡೆಯಲ್ಲಿ ಭಾರತದ ಟೆಸ್ಟ್ ನಾಯಕತ್ವವನ್ನೂ ತ್ಯಜಿಸಿದ್ದರು.

ಇದನ್ನೂ ಓದಿ:ಉಕ್ರೇನ್ ಮೇಲ್ಯಾಕೆ ರಷ್ಯಾ ಕಣ್ಣು? ವಿವಾದದ ಮೂಲವೇನು? NATO ಕಂಡರೆ ಪುಟಿನ್ ಗೆ ಯಾಕೆ ಉರಿ?

“ನಾನು ನನಗಿಂತ ಹೆಚ್ಚು ವಿಷಯಗಳನ್ನು ಹಿಡಿದಿಟ್ಟುಕೊಳ್ಳುವವನಲ್ಲ. ನಾನು ಹೆಚ್ಚಿನ ಒತ್ತಡ ನಿಭಾಯಿಸಬಲ್ಲೆ ಎಂದು ನನಗೆ ತಿಳಿದಿದ್ದರೂ, ನಾನು ಆ ನಡುವಿನ ಪ್ರಕ್ರಿಯೆಯನ್ನು ಆನಂದಿಸಲು ಹೋಗದಿದ್ದರೆ, ಯಾವುದೇ ಕೆಲಸ ಮಾಡಲು ಹೋಗುವುದಿಲ್ಲ” ಎಂದು ಕೊಹ್ಲಿ ಹೇಳಿದರು.

ತನ್ನ ನಿರ್ಧಾರದ ಬಗ್ಗೆ ಜನರ ಮಾತನ್ನು ತಳ್ಳಿಹಾಕಿದ ಕೊಹ್ಲಿ, “ವಾಸ್ತವವಾಗಿ ಏನೂ ಇರಲಿಲ್ಲ. ನಾನು ನನ್ನ ಜೀವನವನ್ನು ತುಂಬಾ ಸರಳ ಇಟ್ಟುಕೊಳ್ಳುತ್ತೇನೆ, ನಾನು ನಿರ್ಧಾರ ತೆಗೆದುಕೊಳ್ಳಬೇಕೆಂದು ಬಯಸಿದಾಗ ತೆಗೆದುಕೊಂಡೆ ಮತ್ತು ಅದನ್ನು ಘೋಷಿಸಿದ್ದೇನೆ ಅಷ್ಟೇ” ಎಂದು ವಿರಾಟ್ ಹೇಳಿದರು.

ವಿರಾಟ್ ರಾಜೀನಾಮೆಯಿಂದ ತೆರವಾಗಿರುವ ಆರ್ ಸಿಬಿ ನಾಯಕತ್ವ ಸ್ಥಾನಕ್ಕೆ ಸದ್ಯ ಯಾರನ್ನೂ ನೇಮಿಸಲಾಗಿಲ್ಲ. ಗ್ಲೆನ್ ಮ್ಯಾಕ್ಸ್ ವೆಲ್ ಅಥವಾ ಫಾಫ್ ಡುಪ್ಲೆಸಿಸ್ ತಂಡದ ಚುಕ್ಕಾಣಿ ಹಿಡಿಯಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.