ಕೊಹ್ಲಿ ಸರ್ವಶ್ರೇಷ್ಠ ಕ್ರಿಕೆಟಿಗ: ಮೈಕೆಲ್‌ ವಾನ್‌


Team Udayavani, Feb 20, 2018, 6:55 AM IST

Michael-Vaughan.jpg

ನವದೆಹಲಿ: ಸಚಿನ್‌ ತೆಂಡುಲ್ಕರ್‌ ನಿವೃತ್ತಿಯಾಗುವಾಗ ಅವರನ್ನು ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಎಂದು ವರ್ಣಿಸಲಾಗಿತ್ತು. ಕೆಲವರಂತೂ ಅವರು ಬ್ರಾಡ್ಮನ್‌ಗಿಂತ ಶ್ರೇಷ್ಠ ಎಂದಿದ್ದರು. ಆಗ ಬಹಳ ವಾದವಿವಾದಗಳಾಗಿದ್ದವು. ಇದೀಗ ವಿರಾಟ್‌ ಕೊಹ್ಲಿಯನ್ನು ಏಕದಿನ ಕ್ರಿಕೆಟ್‌ನ ಸರ್ವಶ್ರೇಷ್ಠ ಆಟಗಾರ ಎಂದು ಇಂಗ್ಲೆಂಡ್‌ನ‌ ಮಾಜಿ ನಾಯಕ ಮೈಕೆಲ್‌ ವಾನ್‌ ವರ್ಣಿಸಿದ್ದಾರೆ. 

ಇಲ್ಲಿಯವರೆಗೆ ಸಚಿನ್‌ ತೆಂಡುಲ್ಕರ್‌, ವಿವಿಯನ್‌ ರಿಚರ್ಡ್ಸ್‌ ಹೀಗೆ ವರ್ಣನೆಗೊಳಗಾಗಿದ್ದರು. ಈಗ ಈ ಮಹಾನ್‌ ದಿಗ್ಗಜರನ್ನು ಪಟ್ಟಿಯಿಂದ ಹೊರಗಿಟ್ಟು ಮಾತನಾಡಿರುವುದು ಅಭಿಮಾನಿಗಳ ನಡುವೆ ಮತ್ತೂಮ್ಮೆ ಭಾರೀ ವಾಗ್ವಾದ ನಡೆಯುವ ಸಾಧ್ಯತೆಯಿದೆ. ಕೊಹ್ಲಿ ಇತ್ತೀಚೆಗೆ ಏಕದಿನದಲ್ಲಿ 35ನೇ ಶತಕ ಬಾರಿಸಿದ್ದರು. 208 ಪಂದ್ಯಗಳಲ್ಲಿ ಈ ಸಾಧನೆ ಮಾಡಿ ಅತ್ಯಂತ ವೇಗದಲ್ಲಿ ಇಂತಹ ಸಾಧನೆ ಮಾಡಿದ ವಿಶ್ವದಾಖಲೆ ನಿರ್ಮಿಸಿದರು. 

ಈ ಸರಣಿಯಲ್ಲೇ 3 ಶತಕ ಬಾರಿಸಿ ದ್ವಿಪಕ್ಷೀಯ ಸರಣಿಯೊಂದರಲ್ಲಿ ಗರಿಷ್ಠ ರನ್‌ಗಳಿಸಿದ ಮತ್ತೂಂದು ವಿಶ್ವದಾಖಲೆಯನ್ನೂ ನಿರ್ಮಿಸಿದರು. ಅಲ್ಲದೇ ಅವರು ಆಡಿದ ಪಂದ್ಯಗಳಲ್ಲಿ ಭಾರತ ಗೆದ್ದಿದ್ದೇ ಹೆಚ್ಚು. ಇಷ್ಟೆಲ್ಲ ಹಿನ್ನೆಲೆಯಿರುವಾಗ ಕೊಹ್ಲಿ ವಿಶ್ವಶ್ರೇಷ್ಠ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾರ್ವಕಾಲಿಕ ಸರ್ವಶ್ರೇಷ್ಠ ಆಟಗಾರ ಎನ್ನುವುದಕ್ಕೆ ಮಾತ್ರ ವಿರೋಧವಿದೆ.

ಅಂಕಿಸಂಖ್ಯೆಗಳು ಏನು ಹೇಳುತ್ತವೆ ಎನ್ನುವುದಕ್ಕಿಂತ ಅವರ ಪ್ರತಿ ಇನಿಂಗ್ಸ್‌ನ ಮಹತ್ವವೇನು ಎನ್ನುವುದು ಪರಿಶೀಲನೆಗೊಳಪಡಬೇಕಾದ ಸಂಗತಿ. ಈ ದೃಷ್ಟಿಯಿಂದ ಕೊಹ್ಲಿ ಬಹಳ ಮೌಲ್ಯಯುತ ಆಟಗಾರ. ತಂಡಕ್ಕೆ ಅಗತ್ಯವಿದ್ದಾಗಲೆಲ್ಲ ನೆಲಕಚ್ಚಿ ಆಡಿರುವ ಅವರು ಆಟಗಾರರ ಮನಃಸ್ಥಿತಿಯಲ್ಲೇ ಬದಲಾವಣೆ ಮಾಡಿದ್ದಾರೆ. ಭಾರತೀಯರ ಮಟ್ಟಿಗೆ ಕೊಹ್ಲಿ ಬ್ಯಾಟಿಂಗ್‌ ಯಾವಾಗಲೂ ಒಂದು ಮಾದರಿ, ಅಷ್ಟೇ ಸ್ಪರ್ಧಾತ್ಮಕ. ಯಾವುದೇ ಪಂದ್ಯವನ್ನು ಎಂತಹ ಹಂತದಲ್ಲೂ ಗೆಲ್ಲಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಈ ಎಲ್ಲ ವಿಚಾರಗಳನ್ನು ಗಮನಿಸಿದಾಗ ವಾನ್‌ ಮತ್ತು ಕೊಹ್ಲಿ ಅಭಿಮಾನಿಗಳು ಹೇಳುವುದು ಸರಿಯೆನ್ನುವುದರಲ್ಲೂ ಅರ್ಥವಿದೆ. ಆದರೂ ನಿರ್ಣಾಯಕವಾಗಿ ಕೊಹ್ಲಿಯೊಬ್ಬರೇ ಶ್ರೇಷ್ಠ ಎಂಬ ಮಾತುಗಳು ವಿವಾದವಾಗುವ ಸಾಧ್ಯತೆ ದಟ್ಟವಾಗಿದೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.