T20 ವಿಶ್ವಕಪ್‌ ತಂಡದಲ್ಲಿ ವಿರಾಟ್‌ ಕೊಹ್ಲಿಗೆ ಸ್ಥಾನವಿಲ್ಲ?


Team Udayavani, Mar 13, 2024, 7:20 AM IST

T20 ವಿಶ್ವಕಪ್‌ ತಂಡದಲ್ಲಿ ವಿರಾಟ್‌ ಕೊಹ್ಲಿಗೆ ಸ್ಥಾನವಿಲ್ಲ?

ಹೊಸದಿಲ್ಲಿ: ಸಮಕಾಲೀನ ಕ್ರಿಕೆಟಿನ ಶ್ರೇಷ್ಠ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರಿಗೆ ಈ ಬಾರಿಯ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಸಿಗುವುದಿಲ್ಲವೇ? ಇಂಥದೊಂದು ಅನುಮಾನ, ಗುಸುಗುಸು ಹುಟ್ಟಿಕೊಂಡಿದೆ.

2013ರ ಅನಂತರ ಭಾರತ ಸತತವಾಗಿ ಐಸಿಸಿ ಕೂಟಗಳ ಫೈನಲ್‌, ಸೆಮಿಫೈನಲ್‌ಗ‌ಳಲ್ಲಿ ಸೋಲುತ್ತಿದೆ. ಈ ಬಾರಿ ವೆಸ್ಟ್‌ ಇಂಡೀಸ್‌-ಅಮೆರಿಕದಲ್ಲಿ ನಡೆಯುವ ಟಿ20 ವಿಶ್ವಕಪ್‌ ಗೆಲ್ಲಲೇಬೇಕೆಂಬ ತೀರ್ಮಾ ನದಲ್ಲಿರುವ ಬಿಸಿಸಿಐ, ಯುವಕರಿಗೆ ಮಣೆ ಹಾಕುವ ನಿರೀಕ್ಷೆಯಿದೆ. ಹೀಗಾಗಿ ಕೊಹ್ಲಿಗೆ ಜಾಗ ಅನುಮಾನ ಎನ್ನಲಾಗಿದೆ. ಇದು ಒಂದು ತರ್ಕ.

ಟಿ20ಗೆ ಸಮರ್ಥರಲ್ಲ
ಮೂಲಗಳ ಪ್ರಕಾರ, ಟಿ20 ಕ್ರಿಕೆಟ್‌ನ ಅಗತ್ಯಗಳಿಗೆ ತಕ್ಕಂತೆ ಕೊಹ್ಲಿ ಆಡಲು ಸಮರ್ಥರಲ್ಲ ಎಂಬ ವಾದ ಬಿಸಿಸಿಐ ಆಯ್ಕೆ ಸಮಿತಿಯಲ್ಲಿ ಕೇಳಿ ಬರುತ್ತಿದೆಯಂತೆ. ಆದರೆ ಈ ಬಗ್ಗೆ ದೃಢವಾಗಿ ಮಾತನಾಡಲು ಯಾರೂ ಸಿದ್ಧರಿಲ್ಲ. ಇವೆಲ್ಲದರ ನಡುವೆ ತಂಡದ ನಾಯಕತ್ವವನ್ನು ಹಿರಿಯ ಆಟಗಾರ ರೋಹಿತ್‌ ಶರ್ಮ ಅವರಿಗೇ ನೀಡುವ ಯೋಜನೆ ಬಿಸಿಸಿಐನದ್ದು.

ಟಿ20ಯಲ್ಲಿ ಸ್ಫೋಟಕವಾಗಿ ಆಡುವ ಸೂರ್ಯಕುಮಾರ್‌ ಯಾದವ್‌, ರಿಂಕು ಸಿಂಗ್‌, ತಿಲಕ್‌ ವರ್ಮ, ಶಿವಂ ದುಬೆ ಅವರ ಮೇಲೆ ಬಿಸಿಸಿಐ ಕಣ್ಣಿರಿಸಿದೆ. ಅಲ್ಲದೇ ಈಗಷ್ಟೇ ಚೇತರಿಸಿಕೊಂಡಿರುವ ಹಾರ್ದಿಕ್‌ ಪಾಂಡ್ಯ ತಂಡಕ್ಕೆ ಮರಳಲೂ ಬಹುದು. ಕೊಹ್ಲಿ ಆಡುವುದರ ಬಗ್ಗೆ ಅಂತಿಮ ನಿರ್ಧಾರವನ್ನು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಕೊಹ್ಲಿ ಆಸ್ಟ್ರೇಲಿಯದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನಲ್ಲಿ 6 ಪಂದ್ಯಗಳಿಂದ 296 ರನ್‌ ಗಳಿಸಿದ್ದರು. ಇದರಲ್ಲಿ 4 ಅರ್ಧ ಶತಕಗಳಿದ್ದವು. 2023ರಲ್ಲಿ ಭಾರತದಲ್ಲೇ ನಡೆದ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ 765 ರನ್‌ ಗಳಿಸಿದ್ದರು. ಈ ಎರಡೂ ಕೂಟಗಳಲ್ಲಿ ಗರಿಷ್ಠ ರನ್‌ ಬಾರಿಸಿದ್ದು ಕೊಹ್ಲಿ ಎನ್ನುವುದನ್ನು ಮರೆಯುವಂತಿಲ್ಲ.

ಐಪಿಎಲ್‌ನಲ್ಲಿ ಭವಿಷ್ಯ
ವಿರಾಟ್‌ ಕೊಹ್ಲಿ ಕಳೆದ ಜ. 17ರಿಂದ ಯಾವುದೇ ಪಂದ್ಯವಾಡಿಲ್ಲ. ಅಫ್ಘಾನಿಸ್ಥಾನ ವಿರುದ್ಧದ 2 ಟಿ20 ಪಂದ್ಯಗಳಲ್ಲೂ ಮಿಂಚಿರಲಿಲ್ಲ (19, 0). ಇದೀಗ ಐಪಿಎಲ್‌ ಮೂಲಕ ಸ್ಪರ್ಧಾತ್ಮಕ ಕ್ರಿಕೆಟಿಗೆ ಮರಳುವ ಯೋಜನೆಯಲ್ಲಿದ್ದಾರೆ. ಇಲ್ಲಿ ಕೊಹ್ಲಿ ಅವರ ವಿಶ್ವಕಪ್‌ ಭವಿಷ್ಯ ಅಡಗಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವಿಶ್ವಕಪ್‌ ತಂಡದಲ್ಲಿ ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಾಗಿ ಐಪಿಎಲ್‌ನಲ್ಲಿ ರನ್‌ ಪ್ರವಾಹ ಹರಿಸಿದರೆ ಕೊಹ್ಲಿ ಅವರನ್ನು ವಿಶ್ವಕಪ್‌ಗೆ ಆರಿಸಲೇಬೇಕಾಗುತ್ತದೆ!

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.