Asia Cup 2023; ’15 ವರ್ಷಗಳಲ್ಲೇ ಇದೇ ಮೊದಲು….’: ಲಂಕಾ ಪಂದ್ಯಕ್ಕೆ ಮೊದಲು ವಿರಾಟ್ ಮಾತು


Team Udayavani, Sep 12, 2023, 10:51 AM IST

Virat Kohli spoke about back to back matches in Asia cup 2023

ಕೊಲಂಬೊ: ಏಷ್ಯಾ ಕಪ್ 2023ರ ಕೂಟದಲ್ಲಿ ಭಾರತ ತಂಡ ತನ್ನ ಮೊದಲ ಸೂಪರ್ ಫೋರ್ ಕದನವನ್ನು ಸುಲಭದಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ 228 ರನ್ ಅಂತರದಿಂದ ಗೆಲುವು ಸಾಧಿಸಿದೆ. ಬ್ಯಾಟರ್ ಗಳ ಅದ್ಭುತ ಪ್ರದರ್ಶನ ಮತ್ತು ಬೌಲರ್ ಗಳ ಸಾಂಘಿಕ ದಾಳಿಯಿಂದ ಬೃಹತ್ ಗೆಲುವು ಸಾಧಿಸಿದ ತಂಡವು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಪಾಕ್ ಮೇಲೆ ಸವಾರಿ ಮಾಡಿದರು. ಕೇವಲ 94 ಎಸೆತಗಳನ್ನು ಎದುರಿಸಿದ ವಿರಾಟ್ ಅಜೇಯ 122 ರನ್ ಬಾರಿಸಿದರು. ಅರ್ಹವಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂತು.

ಪಾಕಿಸ್ತಾನ ವಿರುದ್ಧದ ಪಂದ್ಯ ರವಿವಾರ ನಡೆಯಬೇಕಿತ್ತು. ಆದರೆ ಮಳೆಯ ಕಾರಣದಿಂದ ಮೀಸಲು ದಿನವಾದ ಸೋಮವಾರ ಪೂರ್ಣಗೊಂಡಿದೆ. ಮೂಲ ವೇಳಾಪಟ್ಟಿಯಂತೆ ಮಂಗಳವಾರ (ಸೆ.12) ಭಾರತ ತಂಡವು ಶ್ರೀಲಂಕಾ ವಿರುದ್ಧ ಆಡಲಿದೆ. ಇದರ ಬಗ್ಗೆ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ:Accused arrested: ಅಂಗಡಿಯಲ್ಲಿ ಚಿನ್ನದ ಸರ ಕೊರಳಿಗೆ ಹಾಕಿಕೊಂಡು ಪರಾರಿಯಾಗಿದ್ದವನ ಸೆರೆ

“ನಾನು ರನ್ ಗಾಗಿ ವೇಗವಾಗಿ ಓಡುತ್ತಿದ್ದೆ. ಇದರ ಬಗ್ಗೆ ಖುಷಿಯಿದೆ. ಆದರೆ ನಾಳೆ ಮಧ್ಯಾಹ್ನ 3 ಗಂಟೆಗೆ ಮತ್ತೆ ಆಡಬೇಕಿದೆ ಎಂದು ನಾನು ಯೋಚಿಸುತ್ತಿದ್ದೆ” ಎಂದು ಸೋಮವಾರ ಪ್ರಶಸ್ತಿ ಸಮಾರಂಭದ ವೇಳೆ ಹೇಳಿದರು.

“ಈ ರೀತಿ ಸತತ ಆಡುತ್ತಿರುವುದು ನನ್ನ 15 ವರ್ಷದ ವೃತ್ತಿ ಜೀವನದಲ್ಲೇ ಇದೇ ಮೊದಲು. ಅದೃಷ್ಟಕ್ಕೆ ನಾವು ಟೆಸ್ಟ್ ಆಟಗಾರರು. ನಮಗೆ ಮರುದಿನ ಮತ್ತೆ ಬಂದು ಆಡುವುದು ಗೊತ್ತು. ಚೇತರಿಸಿಕೊಳ್ಳುವುದು ನಿರ್ಣಾಯಕ. ಇಂದು ಅಲ್ಲಿ ತೇವವಿತ್ತು. ನವೆಂಬರ್‌ನಲ್ಲಿ ನನಗೆ 35 ವರ್ಷವಾಗುತ್ತದೆ. ಆದ್ದರಿಂದ ನನ್ನ ಚೇತರಿಕೆಯ ಬಗ್ಗೆ ನಾನು ಕಾಳಜಿ ವಹಿಸಬೇಕಾಗಿದೆ” ಎಂದು ವಿರಾಟ್ ಹೇಳಿದರು.

ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಬ್ಯಾಟಿಂಗ್ ಪರಾಕ್ರಮದಿಂದ ತಂಡಕ್ಕೆ ನೆರವಾದರು. ವಿರಾಟ್ ಮತ್ತು ರಾಹುಲ್ ಶತಕ ಸಿಡಿಸಿದರೆ, ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ ಐದು ವಿಕೆಟ್ ಪಡೆದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.