ರಣಜಿ ಟ್ರೋಫಿ: ಮಗಳ ನಿಧನದ ದುಃಖದ ನಡುವೆಯೂ ಶತಕ ಸಿಡಿಸಿದ ವಿಷ್ಣು ಸೋಲಂಕಿ


Team Udayavani, Feb 26, 2022, 3:18 PM IST

ರಣಜಿ ಟ್ರೋಫಿ: ಮಗಳ ನಿಧನದ ದುಃಖದ ನಡುವೆಯೂ ಶತಕ ಸಿಡಿಸಿ ವಿಷ್ಣು ಸೋಲಂಕಿ

ಭುವನೇಶ್ವರ: ಕೆಲವು ದಿನಗಳ ಹಿಂದೆ ನವಜಾತ ಶಿಶುವನ್ನು ಕಳೆದುಕೊಂಡ ನೋವಿನಲ್ಲೂ ಬರೋಡಾ ಬ್ಯಾಟರ್ ವಿಷ್ಣು ಸೋಲಂಕಿ ಅವರು ಶುಕ್ರವಾರ ಭರ್ಜರಿ ಶತಕ ಸಿಡಿಸಿದ್ದಾರೆ.

ಭುವನೇಶ್ವರದಲ್ಲಿ ನಡೆದ ರಣಜಿ ಟ್ರೋಫಿ 2022 ಮುಖಾಮುಖಿಯಲ್ಲಿ ಚಂಡೀಗಢ ತಂಡದ ವಿರುದ್ಧ ವಿಷ್ಣು ಸೋಲಂಖಿ ತಮ್ಮ ವೈಯಕ್ತಿಕ ದುರಂತದ ನಡುವೆಯೂ ಶತಕ ಗಳಿಸಿದರು.

ಬರೋಡಾ ಎರಡನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್‌ಗೆ 398 ರನ್ ಗಳಿಸಿತು. ಚಂಡೀಗಢ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 168 ರನ್‌ಗಳಿಗೆ ಆಲೌಟ್ ಆಗಿತ್ತು. ಸೋಲಂಕಿ ಬ್ಯಾಟಿಂಗ್ ಸಹಾಯದಿಂದ ಬರೋಡಾ ತಂಡ 230 ರನ್‌ಗಳ ಮಹತ್ವದ ಮುನ್ನಡೆ ಗಳಿಸಲು ಸಾಧ್ಯವಾಯಿತು.

ನಂ.5ರಲ್ಲಿ ಬ್ಯಾಟಿಂಗ್ ಗೆ ಬಂದ ಸೋಲಂಕಿ 161 ಎಸೆತಗಳಲ್ಲಿ ಅಜೇಯ 103 ರನ್ ಗಳಿಸಿದರು. ಅವರ ವೀರಾವೇಶದ ಶತಕವು 12 ಬೌಂಡರಿಗಳನ್ನು ಒಳಗೊಂಡಿತ್ತು ಮತ್ತು ಬರೋಡಾ ಬ್ಯಾಟರ್ ಆರಂಭಿಕ ಜ್ಯೋತ್ಸ್ನಿಲ್ ಸಿಂಗ್ ಅವರಿಂದ ಸಮರ್ಥ ಬೆಂಬಲವನ್ನು ಪಡೆದರು. ಚಂಡೀಗಢದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಜ್ಯೋತ್ಸ್ನಿಲ್ 96 ರನ್ ಗಳಿಸಿದ್ದ ವೇಳೆ ರನೌಟಾದರು.

ಇದನ್ನೂ ಓದಿ:ಲಂಕಾ ಸರಣಿಯಿಂದ ಹೊರಬಿದ್ದ ಋತುರಾಜ್ ಗಾಯಕ್ವಾಡ್: ಬದಲಿ ಆಟಗಾರನ ನೇಮಿಸಿದ ಬಿಸಿಸಿಐ

ಇತ್ತೀಚೆಗೆ ಹುಟ್ಟಿದ ಹೆಣ್ಣು ಮಗು ನಿಧನವಾದ ದುರದೃಷ್ಟಕರ ಸುದ್ದಿ ತಿಳಿದಾಗ ವಿಷ್ಣು ಸೋಲಂಕಿ ಅವರು ಬರೋಡಾ ತಂಡದ ಸಹ ಆಟಗಾರರೊಂದಿಗೆ ಭುವನೇಶ್ವರದಲ್ಲಿದ್ದರು. ತಕ್ಷಣ ಅವರು ತಮ್ಮ ಮಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಡೋದರಾಕ್ಕೆ ಮರಳಿದರು. ಮೂರು ದಿನಗಳ ನಂತರ ಅವರು ವಿಮಾನದ ಮೂಲಕ ಮತ್ತೆ ಭುವನೇಶ್ವರಕ್ಕೆ ಆಗಮಿಸಿ ತಂಡವನ್ನು ಕೂಡಿಕೊಂಡಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.