ದ್ರಾವಿಡ್ ಗೆ ವಿಶ್ರಾಂತಿ: ನ್ಯೂಜಿಲ್ಯಾಂಡ್ ಸರಣಿಗೆ ಲಕ್ಷ್ಮಣ್ ಮುಖ್ಯ ಕೋಚ್


Team Udayavani, Nov 11, 2022, 1:53 PM IST

VVS Laxman to coach India for white-ball series against New Zealand

ಮುಂಬೈ: ಟಿ20 ವಿಶ್ವಕಪ್ ಕೂಟದಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದ ರೋಹಿತ್ ಬಳಗ ಮತ್ತೊಮ್ಮೆ ನಿರಾಸೆ ಅನುಭವಿಸಿದೆ. ಸದ್ಯ ತಂಡ ನ್ಯೂಜಿಲ್ಯಾಂಡ್ ಸರಣಿಗೆ ಸಿದ್ದತೆ ನಡೆಸುತ್ತಿದೆ.

ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ವಿರಾಮ ನೀಡಲಾಗಿದೆ. ಹೀಗಾಗಿ ಮುಂಬರುವ ಸೀಮಿತ ಓವರ್‌ಗಳ ನ್ಯೂಜಿಲೆಂಡ್ ಪ್ರವಾಸಕ್ಕಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ತಂಡದ ಕೋಚ್ ಆಗಿ ನೇಮಿಸಲಾಗಿದೆ.

“ಲಕ್ಷ್ಮಣ್ ನೇತೃತ್ವದ ಎನ್‌ ಸಿಎ ತಂಡದಲ್ಲಿ ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್) ಮತ್ತು ಸಾಯಿರಾಜ್ ಬಹುತುಲೆ (ಬೌಲಿಂಗ್) ಇದ್ದು, ಅವರು ನ್ಯೂಜಿಲೆಂಡ್ ಪ್ರವಾಸದ ತಂಡವನ್ನು ಸೇರಿಕೊಳ್ಳಲಿದ್ದಾರೆ” ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಭಾರತವು ನವೆಂಬರ್ 18 ರಿಂದ 30 ರವರೆಗೆ ಮೂರು ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡಲಿದೆ. ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ಆರಂಭಿಕ ಕೆಎಲ್ ರಾಹುಲ್ ಮತ್ತು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಂತಹ ದೊಡ್ಡ ಹೆಸರುಗಳಿಗೆ ಪ್ರವಾಸದಲ್ಲಿ ವಿಶ್ರಾಂತಿ ನೀಡಲಾಗಿದೆ.

ಇದನ್ನೂ ನೋಡಿ:“ನವ ಭಾರತದ ಸಂಕಲ್ಪ” ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಲಕ್ಷ್ಮಣ್ ಭಾರತ ತಂಡದ ಜವಾಬ್ದಾರಿ ವಹಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಜಿಂಬಾಬ್ವೆ ಮತ್ತು ಐರ್ಲೆಂಡ್ ಪ್ರವಾಸಗಳಲ್ಲಿ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಇತ್ತೀಚಿನ ತವರು ಸರಣಿಗಳಲ್ಲಿ ಮುಖ್ಯ ಕೋಚ್ ಆಗಿದ್ದರು.

ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಅವರು ತಂಡವನ್ನು ಮುನ್ನಡೆಸಲಿದ್ದು, ಏಕದಿನ ತಂಡಕ್ಕೆ ಶಿಖರ್ ಧವನ್ ನೇತೃತ್ವ ವಹಿಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಅವರು ಡಿಸೆಂಬರ್ 4 ರಿಂದ ಬಾಂಗ್ಲಾದೇಶ ಪ್ರವಾಸಕ್ಕೆ ಭಾರತವನ್ನು ಮುನ್ನಡೆಸಲು ಮರಳಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ಸಹ ಬಾಂಗ್ಲಾದೇಶ ಪ್ರವಾಸಕ್ಕೆ ತಂಡಕ್ಕೆ ಮರಳಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿವೆ.

ಟಾಪ್ ನ್ಯೂಸ್

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

samra

ಶೂಟಿಂಗ್‌: ಭಾರತದ ಭವಿಷ್ಯದ ಶೂಟರ್‌ ಸಿಫ್ಟ್ ಕೌರ್‌ ಸಮ್ರಾಗೆ ಕಂಚು

weight lift

ಯೂತ್‌ ವೇಟ್‌ಲಿಫ್ಟಿಂಗ್‌: ಭಾರತಕ್ಕೆ ಎರಡು ಕಂಚು

mash

ಮಯಾಮಿ ಓಪನ್‌ ಟೆನಿಸ್‌: ಕೊಕೊ ಗಾಫ್ ಪರಾಭವ

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.