ಕುಂಬ್ಳೆ ವಿಶ್ವದಾಖಲೆ ತಪ್ಪಿಸಬಹುದಿತ್ತು, ವಾಕರ್ಗೆ ಅಕ್ರಮ್ ಯಾರ್ಕರ್
Team Udayavani, Feb 11, 2017, 3:45 AM IST
ಕರಾಚಿ: ಒಂದಲ್ಲ ಒಂದು ವಿವಾದದಿಂದ ಪಾಕಿಸ್ತಾನ ಕ್ರಿಕೆಟಿಗರು ಸದಾ ಪ್ರಚಾರದಲ್ಲಿರುತ್ತಾರೆ. ಇದೀಗ ಅನಿಲ್ ಕುಂಬ್ಳೆ ಇನಿಂಗ್ಸ್ ಒಂದರಲ್ಲಿ 10 ವಿಕೆಟ್ ದಾಖಲೆ ಕುರಿತಾಗಿ ಪಾಕ್ನ ಮಾಜಿ ಕ್ರಿಕೆಟಿಗರಾದ ವಾಸೀಂ ಅಕ್ರಂ ಮತ್ತು ವಾಕರ್ ಯೂನಿಸ್ ಟ್ವೀಟರ್ನಲ್ಲಿ ಪರಸ್ಪರ ಕೆಸರೆರಚಾಟ ನಡೆಸಿದ ಘಟನೆ ನಡೆದಿದೆ.
ಮನಸ್ಸು ಮಾಡಿದ್ದರೆ ಅಂದು ಕೊನೆಯ ಬ್ಯಾಟ್ಸ್ಮನ್ ಆಗಿದ್ದ ವಾಕರ್ ರನೌಟಾಗಬಹುದಿತ್ತು. ಕುಂಬ್ಳೆ ದಾಖಲೆಯನ್ನು ತಪ್ಪಿಸುವ ಅವಕಾಶ ಇತ್ತು ಎಂದು ಪ್ರಕಟಿಸಿದ್ದರು. ಇದಕ್ಕೆ ವಾಕರ್ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ. ತನ್ನ ಮೇಲಿನ ಎಲ್ಲ ಆರೋಪವನ್ನು ನಿರಾಕರಿಸಿದ್ದಾರೆ. ಮಾತ್ರವಲ್ಲ ಅಕ್ರಂಗೆ ವಯಸ್ಸಾಗಿದೆ ಎಂದು ಪ್ರತಿ ಟ್ವೀಟ್ ಮಾಡಿದ್ದಾರೆ. ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ವಿವಾದಕ್ಕೆ ಎಡೆ ಮಾಡಿಕೊಡುತ್ತಿದೆ ಎನ್ನುವಷ್ಟರಲ್ಲಿ ಎಚ್ಚೆತ್ತ ವಾಕರ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಏನಿದು ಘಟನೆ?: 1999ರಲ್ಲಿ ದಿಲ್ಲಿಯಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಟೆಸ್ಟ್ ಪಂದ್ಯದ ಇನಿಂಗ್ಸ್ವೊಂದರಲ್ಲಿ ಭಾರತದ ಮಾಜಿ ಸ್ಪಿನ್ ಬೌಲರ್ ಅನಿಲ್ ಕುಂಬ್ಳೆ 10 ವಿಕೆಟ್ ಕಬಳಿಸಿದ್ದರು. ವಿಶ್ವ ದಾಖಲೆ ನಿರ್ಮಿಸಿದ್ದರು. ಈ ದಾಖಲೆ ಆಗಿ ಇತ್ತೀಚೆಗೆ 18 ವರ್ಷಗಳಾಗಿವೆ. ಇತ್ತೀಚೆಗೆ ಕುಂಬ್ಳೆ 18 ವರ್ಷದ ಸಂಭ್ರಮವನ್ನು ಆಚರಿಸಿದ್ದರು. ಈ ವೇಳೆ ಟ್ವೀಟರ್ನಲ್ಲಿ ಮಾಜಿ ವೇಗಿ ವಾಸೀಂ ಅಕ್ರಂ ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಒಂದು ವೇಳೆ ವಾಕರ್ ಬುದ್ದಿವಂತಿಕೆ ಉಪಯೋಗಿಸಿ ರನೌಟ್ ಆಗಿದ್ದರೆ ಕುಂಬ್ಳೆ ದಾಖಲೆಯನ್ನು ತಪ್ಪಿಸಬಹುದಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ವಾಕರ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ನಿಮಗೆ (ಅಕ್ರಂ) ವಯಸ್ಸಾಗಿದೆ ಎಂದು ಅನಿಸುತ್ತಿದೆ ಎಂದಿದ್ದಾರೆ. ಸತ್ಯ ಸಂಗತಿ ಬಗ್ಗೆ ಮಾತನಾಡು, ವಯಸ್ಸಿನ ವಿಷಯದಲ್ಲಿ ನಾನು ಯಾವಾಗಲೂ ನಿನ್ನಿಂದ ಮುಂದಿದ್ದೇನೆ ಎಂದು ಅಕ್ರಂ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ