ನಾವೇನೂ ಅಜೇಯರಲ್ಲ: ವಿರಾಟ್‌ ಕೊಹ್ಲಿ


Team Udayavani, Jun 10, 2017, 12:23 PM IST

kohli.jpg

ಲಂಡನ್‌: “ನಾವೇನೂ ಅಜೇಯರಲ್ಲ…’ ಎನ್ನುವ ಮೂಲಕ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ  ಶ್ರೀಲಂಕಾ ವಿರುದ್ಧದ ಸೋಲನ್ನು ಎತ್ತಿ ಹಿಡಿದಿದ್ದಾರೆ!

“ಪಂದ್ಯದ ಮೊದಲಾರ್ಧದಲ್ಲಿ ನಾವೇ ಮೇಲುಗೈ ಸಾಧಿಸಿದ್ದೆವು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಏಕೆಂದರೆ, ಆಗ ಸ್ಕೋರ್‌ಬೋರ್ಡ್‌ನಲ್ಲಿ ನಮ್ಮ ತಂಡ 322ರಷ್ಟು ದೊಡ್ಡ ಮೊತ್ತವನ್ನು ದಾಖಲಿಸಿತ್ತು. ಆದರೆ ಅನಂತರ ಲೆಕ್ಕಾಚಾರ ತಲೆಕೆಳಗಾಯಿತು. ನಮ್ಮ ಬೌಲಿಂಗ್‌ ವೈಫ‌ಲ್ಯ ಅನುಭವಿಸಿತಾದರೂ ತೀರಾ ಕಳಪೆಯಾಗೇನೂ ಇರಲಿಲ್ಲ. ಇಲ್ಲಿ ಹೆಚ್ಚಿನ ಸುಧಾರಣೆ ಅಗತ್ಯವಿದೆ. ಕ್ರೀಸಿಗೆ ಬಂದ ಲಂಕನ್ನರೆಲ್ಲ ಶ್ರೇಷ್ಠ ಮಟ್ಟದ ಬ್ಯಾಟಿಂಗ್‌ ಪ್ರದರ್ಶನ ವಿತ್ತರು. ಹೀಗಾಗಿ ಇದರ ಶ್ರೇಯವೆಲ್ಲ ಅವರಿಗೇ ಸಲ್ಲುತ್ತದೆ. ನಾವೇನೂ ಅಜೇಯರಲ್ಲ…’ ಎಂದು ಕೊಹ್ಲಿ ಹೇಳಿದರು. 

“ಇಲ್ಲಿ ಎಲ್ಲವೂ ಚಾಂಪಿಯನ್‌ ತಂಡಗಳೇ ಆಗಿವೆ. ಶ್ರೀಲಂಕಾ ಕೂಡ ಇದಕ್ಕೆ ತಕ್ಕ ಪ್ರದರ್ಶನ ನೀಡಿತು. ನಮ್ಮ ವಿಭಾಗದಲ್ಲೀಗ ಸಮಬಲ ನೆಲೆಸಿದೆ. ಎಲ್ಲವೂ ಕ್ವಾರ್ಟರ್‌ ಫೈನಲ್‌ ಪಂದ್ಯಗಳಾಗಿವೆ. ಹೀಗಾಗಿ ಸ್ಪರ್ಧೆ ತೀವ್ರಗೊಂಡಿದೆ. ಜತೆಗೆ ಕುತೂಹಲವೂ ಹೆಚ್ಚಿದೆ…’ ಎಂಬು ದಾಗಿ ಕೊಹ್ಲಿ ಅಭಿಪ್ರಾಯಪಟ್ಟರು.

ಲಂಕಾ ಚೇಸಿಂಗ್‌ ದಾಖಲೆ: “ಕೆನ್ನಿಂಗ್ಟನ್‌ ಓವಲ್‌’ನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 321 ರನ್‌ ಪೇರಿಸಿದಾಗ ಗೆಲುವು ಖಚಿತ ಎಂದೇ ಭಾವಿಸಲಾಗಿತ್ತು. ಏಕೆಂದರೆ ಶ್ರೀಲಂಕಾದ ಬ್ಯಾಟಿಂಗ್‌ ಸರದಿ ಮೇಲೆ ಯಾರಿಗೂ ಅಷ್ಟೊಂದು ನಂಬಿಕೆ ಇರಲಿಲ್ಲ. ಹಾಗೆಯೇ ಭಾರತದ ಪೇಸ್‌ ಬೌಲರ್‌ಗಳು ಉತ್ತಮ ನಿಯಂತ್ರಣ ಸಾಧಿಸ ಬಹುದೆಂದೂ ಭಾವಿಸಲಾಗಿತ್ತು. ಆದರೆ ಈ ಎರಡೂ ಲೆಕ್ಕಾಚಾರಗಳು ಉಲ್ಟಾ ಹೊಡೆದವು. ಶ್ರೀಲಂಕಾ ತನ್ನ ಏಕದಿನ ಇತಿಹಾಸದಲ್ಲೇ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿ ವಿಜೃಂಭಿಸಿತು. 

ಈ ಪಂದ್ಯದಲ್ಲಿ ಭಾರತದ ಕ್ಷೇತ್ರ ರಕ್ಷಣೆ ಕೂಡ ಅತ್ಯಂತ ಕಳಪೆ ಯಾಗಿತ್ತು. ಬೌಲಿಂಗ್‌ನಲ್ಲಿ 7 ಮಂದಿ ದಾಳಿಗಿಳಿದರೂ ಇವರಲ್ಲಿ ವಿಕೆಟ್‌ ಹಾರಿಸಿದ್ದು ಭುವನೇಶ್ವರ್‌ ಕುಮಾರ್‌ ಮಾತ್ರ. ಅದೂ ಒಂದೇ ವಿಕೆಟ್‌. ಉಳಿದಿಬ್ಬರು ರನೌಟಾಗಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.