ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯ: ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌  ಜಯಭೇರಿ


Team Udayavani, Mar 21, 2023, 5:09 AM IST

ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯ: ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌  ಜಯಭೇರಿ

ವೆಲ್ಲಿಂಗ್ಟನ್‌: ಶ್ರೀಲಂಕಾ ವಿರುದ್ಧದ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯವನ್ನು ಇನ್ನಿಂಗ್ಸ್‌ ಹಾಗೂ 58 ರನ್ನುಗಳಿಂದ ಗೆಲ್ಲುವ ಮೂಲಕ ನ್ಯೂಜಿಲ್ಯಾಂಡ್‌ 2-0 ಅಂತರದಿಂದ ಕ್ಲೀನ್‌ ಸ್ವೀಪ್‌ ಆಗಿ ಸರಣಿಯನ್ನು ವಶಪಡಿಸಿಕೊಂಡಿದೆ.

416 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಶ್ರೀಲಂಕಾದ ಮೇಲೆ ಕಿವೀಸ್‌ ಫಾಲೋಆನ್‌ ಹೇರಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಹೋರಾಟ ಸಂಘಟಿಸಿತಾದರೂ ಇನ್ನಿಂಗ್ಸ್‌ ಸೋಲಿನ ಸಂಕಟದಿಂದ ಪಾರಾಗಲು ಸಾಧ್ಯವಾಗಲಿಲ್ಲ. 358ಕ್ಕೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

50 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಕುಸಲ್‌ ಮೆಂಡಿಸ್‌ ಅದೇ ಮೊತ್ತಕ್ಕೆ ಔಟಾಗುವುದರೊಂದಿಗೆ ಲಂಕೆ 4ನೇ ದಿನದ ಆರಂಭದಲ್ಲೇ ಆಘಾತಕ್ಕೆ ಸಿಲುಕಿತು. ದಿನೇಶ್‌ ಚಂಡಿಮಾಲ್‌ 62, ಧನಂಜಯ ಡಿಸಿಲ್ವ 98 ರನ್‌ ಬಾರಿಸಿ ಸೋಲನ್ನು ತುಸು ಮುಂದೂಡಿದರು. ಇವರಿಂದ 5ನೇ ವಿಕೆಟಿಗೆ 126 ರನ್‌ ಹರಿದು ಬಂತು.

ನಾಯಕ ಟಿಮ್‌ ಸೌಥಿ ಮತ್ತು ಬ್ಲೇರ್‌ ಟಿಕ್ನರ್‌ ತಲಾ 3 ವಿಕೆಟ್‌, ಮೈಕಲ್‌ ಬ್ರೇಸ್‌ವೆಲ್‌ 2 ವಿಕೆಟ್‌ ಉರುಳಿಸಿದರು. ಹೆನ್ರಿ ನಿಕೋಲ್ಸ್‌ ಪಂದ್ಯಶ್ರೇಷ್ಠ, ಕೇನ್‌ ವಿಲಿಯಮ್ಸನ್‌ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಎರಡೂ ತಂಡಗಳಿನ್ನು 3 ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿವೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-4 ವಿಕೆಟಿಗೆ 580 ಡಿಕ್ಲೇರ್‌. ಶ್ರೀಲಂಕಾ-164 ಮತ್ತು 358 (ಧನಂಜಯ 98, ಚಂಡಿಮಾಲ್‌ 62, ಕರುಣಾರತ್ನೆ 51, ಮೆಂಡಿಸ್‌ 50, ಸೌಥಿ 51ಕ್ಕೆ 3, ಟಿಕ್ನರ್‌ 84ಕ್ಕೆ 3, ಮೈಕಲ್‌ ಬ್ರೇಸ್‌ವೆಲ್‌ 100ಕ್ಕೆ 2).

ಪಂದ್ಯಶ್ರೇಷ್ಠ: ಹೆನ್ರಿ ನಿಕೋಲ್ಸ್‌. ಸರಣಿಶ್ರೇಷ್ಠ: ಕೇನ್‌ ವಿಲಿಯಮ್ಸನ್‌.

“ಟೆಸ್ಟ್‌ ನಾಯಕತ್ವ ಸಾಕು’
ನ್ಯೂಜಿಲ್ಯಾಂಡ್‌ ಎದುರಿನ ಸರಣಿಯನ್ನು ಕ್ಲೀನ್‌ ಸ್ವೀಪ್‌ ಆಗಿ ಕಳೆದುಕೊಂಡ ಬಳಿಕ ಶ್ರೀಲಂಕಾ ಟೆಸ್ಟ್‌ ತಂಡದ ನಾಯಕ ದಿಮುತ್‌ ಕರುಣಾರತ್ನೆ ಈ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಐರ್ಲೆಂಡ್‌ ವಿರುದ್ಧ ತವರಲ್ಲಿ ನಡೆಯುವ 2 ಪಂದ್ಯಗಳ ಟೆಸ್ಟ್‌ ಸರಣಿ ಮುಗಿದೊಡನೆ ನಾಯಕತ್ವ ಬಿಡುವುದಾಗಿ ಹೇಳಿದರು.

2019ರಲ್ಲಿ ಕರುಣಾರತ್ನೆ ಶ್ರೀಲಂಕಾ ಟೆಸ್ಟ್‌ ತಂಡದ ನಾಯಕರಾಗಿ ನೇಮಕಗೊಂಡಿದ್ದರು. ಒಟ್ಟು 26 ಟೆಸ್ಟ್‌ ಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. 10 ಜಯ, 10 ಸೋಲು, 6 ಡ್ರಾ ಇವರ ಸಾಧನೆ. ನಾಯಕನಾಗಿ ಆಯ್ಕೆಯಾದ ಮೊದಲ ಸರಣಿಯಲ್ಲೇ ದಕ್ಷಿಣ ಆಫ್ರಿಕಾವನ್ನು ಅವರದೇ ನೆಲದಲ್ಲಿ 2-0 ಅಂತರದಿಂದ ಮಣಿಸಿದ್ದು ಇವರ ಅಮೋಘ ಸಾಧನೆಯಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.