ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯ: ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌  ಜಯಭೇರಿ


Team Udayavani, Mar 21, 2023, 5:09 AM IST

ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯ: ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌  ಜಯಭೇರಿ

ವೆಲ್ಲಿಂಗ್ಟನ್‌: ಶ್ರೀಲಂಕಾ ವಿರುದ್ಧದ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯವನ್ನು ಇನ್ನಿಂಗ್ಸ್‌ ಹಾಗೂ 58 ರನ್ನುಗಳಿಂದ ಗೆಲ್ಲುವ ಮೂಲಕ ನ್ಯೂಜಿಲ್ಯಾಂಡ್‌ 2-0 ಅಂತರದಿಂದ ಕ್ಲೀನ್‌ ಸ್ವೀಪ್‌ ಆಗಿ ಸರಣಿಯನ್ನು ವಶಪಡಿಸಿಕೊಂಡಿದೆ.

416 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಶ್ರೀಲಂಕಾದ ಮೇಲೆ ಕಿವೀಸ್‌ ಫಾಲೋಆನ್‌ ಹೇರಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಹೋರಾಟ ಸಂಘಟಿಸಿತಾದರೂ ಇನ್ನಿಂಗ್ಸ್‌ ಸೋಲಿನ ಸಂಕಟದಿಂದ ಪಾರಾಗಲು ಸಾಧ್ಯವಾಗಲಿಲ್ಲ. 358ಕ್ಕೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

50 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಕುಸಲ್‌ ಮೆಂಡಿಸ್‌ ಅದೇ ಮೊತ್ತಕ್ಕೆ ಔಟಾಗುವುದರೊಂದಿಗೆ ಲಂಕೆ 4ನೇ ದಿನದ ಆರಂಭದಲ್ಲೇ ಆಘಾತಕ್ಕೆ ಸಿಲುಕಿತು. ದಿನೇಶ್‌ ಚಂಡಿಮಾಲ್‌ 62, ಧನಂಜಯ ಡಿಸಿಲ್ವ 98 ರನ್‌ ಬಾರಿಸಿ ಸೋಲನ್ನು ತುಸು ಮುಂದೂಡಿದರು. ಇವರಿಂದ 5ನೇ ವಿಕೆಟಿಗೆ 126 ರನ್‌ ಹರಿದು ಬಂತು.

ನಾಯಕ ಟಿಮ್‌ ಸೌಥಿ ಮತ್ತು ಬ್ಲೇರ್‌ ಟಿಕ್ನರ್‌ ತಲಾ 3 ವಿಕೆಟ್‌, ಮೈಕಲ್‌ ಬ್ರೇಸ್‌ವೆಲ್‌ 2 ವಿಕೆಟ್‌ ಉರುಳಿಸಿದರು. ಹೆನ್ರಿ ನಿಕೋಲ್ಸ್‌ ಪಂದ್ಯಶ್ರೇಷ್ಠ, ಕೇನ್‌ ವಿಲಿಯಮ್ಸನ್‌ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಎರಡೂ ತಂಡಗಳಿನ್ನು 3 ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿವೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-4 ವಿಕೆಟಿಗೆ 580 ಡಿಕ್ಲೇರ್‌. ಶ್ರೀಲಂಕಾ-164 ಮತ್ತು 358 (ಧನಂಜಯ 98, ಚಂಡಿಮಾಲ್‌ 62, ಕರುಣಾರತ್ನೆ 51, ಮೆಂಡಿಸ್‌ 50, ಸೌಥಿ 51ಕ್ಕೆ 3, ಟಿಕ್ನರ್‌ 84ಕ್ಕೆ 3, ಮೈಕಲ್‌ ಬ್ರೇಸ್‌ವೆಲ್‌ 100ಕ್ಕೆ 2).

ಪಂದ್ಯಶ್ರೇಷ್ಠ: ಹೆನ್ರಿ ನಿಕೋಲ್ಸ್‌. ಸರಣಿಶ್ರೇಷ್ಠ: ಕೇನ್‌ ವಿಲಿಯಮ್ಸನ್‌.

“ಟೆಸ್ಟ್‌ ನಾಯಕತ್ವ ಸಾಕು’
ನ್ಯೂಜಿಲ್ಯಾಂಡ್‌ ಎದುರಿನ ಸರಣಿಯನ್ನು ಕ್ಲೀನ್‌ ಸ್ವೀಪ್‌ ಆಗಿ ಕಳೆದುಕೊಂಡ ಬಳಿಕ ಶ್ರೀಲಂಕಾ ಟೆಸ್ಟ್‌ ತಂಡದ ನಾಯಕ ದಿಮುತ್‌ ಕರುಣಾರತ್ನೆ ಈ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಐರ್ಲೆಂಡ್‌ ವಿರುದ್ಧ ತವರಲ್ಲಿ ನಡೆಯುವ 2 ಪಂದ್ಯಗಳ ಟೆಸ್ಟ್‌ ಸರಣಿ ಮುಗಿದೊಡನೆ ನಾಯಕತ್ವ ಬಿಡುವುದಾಗಿ ಹೇಳಿದರು.

2019ರಲ್ಲಿ ಕರುಣಾರತ್ನೆ ಶ್ರೀಲಂಕಾ ಟೆಸ್ಟ್‌ ತಂಡದ ನಾಯಕರಾಗಿ ನೇಮಕಗೊಂಡಿದ್ದರು. ಒಟ್ಟು 26 ಟೆಸ್ಟ್‌ ಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. 10 ಜಯ, 10 ಸೋಲು, 6 ಡ್ರಾ ಇವರ ಸಾಧನೆ. ನಾಯಕನಾಗಿ ಆಯ್ಕೆಯಾದ ಮೊದಲ ಸರಣಿಯಲ್ಲೇ ದಕ್ಷಿಣ ಆಫ್ರಿಕಾವನ್ನು ಅವರದೇ ನೆಲದಲ್ಲಿ 2-0 ಅಂತರದಿಂದ ಮಣಿಸಿದ್ದು ಇವರ ಅಮೋಘ ಸಾಧನೆಯಾಗಿದೆ.

ಟಾಪ್ ನ್ಯೂಸ್

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ