ಕೆರಿಬಿಯನ್ನರ ವಿರುದ್ಧ ಬಾಂಗ್ಲಾ ಪರಾಕ್ರಮ


Team Udayavani, Aug 7, 2018, 6:00 AM IST

ap862018000026b.jpg

ಲೌಡರ್‌ಹಿಲ್‌ (ಯುಎಸ್‌ಎ): ಮಳೆಯಿಂದ ಅಡಚಣೆಗೊಳಗಾದ ವೆಸ್ಟ್‌ ಇಂಡೀಸ್‌ ಎದುರಿನ ಅಂತಿಮ ಟಿ20 ಪಂದ್ಯವನ್ನು ಡಿ-ಎಲ್‌ ನಿಯಮದಂತೆ 19 ರನ್ನುಗಳಿಂದ ಗೆದ್ದ ಬಾಂಗ್ಲಾದೇಶ 3 ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗಿಗೆ ಇಳಿದ ಬಾಂಗ್ಲಾದೇಶ 5 ವಿಕೆಟಿಗೆ 184 ರನ್‌ ಪೇರಿಸಿ ಸವಾಲೊಡ್ಡಿತು. ಆದರೆ ವೆಸ್ಟ್‌ ಇಂಡೀಸ್‌ ಚೇಸಿಂಗಿಗೆ ವೇಳೆ ಮಳೆ ಅಡ್ಡಿಯಾಯಿತು. 17.1ನೇ ಓವರ್‌ ವೇಳೆ ಸುರಿದ ಮಳೆ ಮತ್ತೆ ಆಟವನ್ನು ಮುಂದುವರಿಸಲು ಅವಕಾಶ ನೀಡಲಿಲ್ಲ. ಆಗ ವಿಂಡೀಸ್‌ 7 ವಿಕೆಟಿಗೆ 135 ರನ್‌ ಮಾಡಿತ್ತು. ಡಕ್‌ವರ್ತ್‌-ಲೂಯಿಸ್‌ ನಿಯದ ಪ್ರಕಾರ ಈ ಅವಧಿಯಲ್ಲಿ ಕೆರಿಬಿಯನ್‌ ಪಡೆ 155 ರನ್‌ ಗಳಿಸಬೇಕಿತ್ತು.

ದಾಸ್‌ ಜೀವನಶ್ರೇಷ್ಠ ಬ್ಯಾಟಿಂಗ್‌
ಬಾಂಗ್ಲಾದ ಬೃಹತ್‌ ಮೊತ್ತಕ್ಕೆ ಕಾರಣರಾದವರು ಆರಂಭಕಾರ ಲಿಟನ್‌ ದಾಸ್‌. ಅವರು ಜೀವನಶ್ರೇಷ್ಠ 61 ರನ್‌ ಬಾರಿಸಿದರು (32 ಎಸೆತ, 6 ಬೌಂಡರಿ, 3 ಸಿಕ್ಸರ್‌).

ದಾಸ್‌-ತಮಿಮ್‌ ಇಕ್ಬಾಲ್‌ 4.4 ಓವರ್‌ಗಳಿಂದ 61 ರನ್‌ ಪೇರಿಸಿ ಭರ್ಜರಿ ಆರಂಭ ಒದಗಿಸಿದರು. ಬಾಂಗ್ಲಾ ಟಿ20 ಇತಿಹಾಸದಲ್ಲಿ ಆರಂಭಿಕ ವಿಕೆಟಿಗೆ ಅತೀ ವೇಗದಲ್ಲಿ 50 ರನ್‌ ಪೇರಿಸಿದ ದಾಖಲೆಯನ್ನೂ ಇವರು ಬರೆದರು (21 ಎಸೆತ). ಕೊನೆಯ ಗಳಿಗೆಯಲ್ಲಿ ಸಿಡಿದ ಮಹಮದುಲ್ಲ ಅಜೇಯ 32 ರನ್‌ ಹೊಡೆದರು (20 ಎಸೆತ, 4 ಬೌಂಡರಿ, 1 ಸಿಕ್ಸರ್‌). ಮಹಮದುಲ್ಲ-ಅರೀಫ್ ಉಲ್‌ ಹಕ್‌ (ಔಟಾಗದೆ 18) ಅಂತಿಮ 4 ಓವರ್‌ಗಳಲ್ಲಿ 38 ರನ್‌ ಸೂರೆಗೈದುದರಿಂದ ಬಾಂಗ್ಲಾ ಬೊಂಬಾಟ್‌ ಸ್ಕೋರ್‌ ದಾಖಲಿಸಿತು.

ಸಿಡಿದು ನಿಂತ ರಸೆಲ್‌
ಚೇಸಿಂಗ್‌ ವೇಳೆ ವೆಸ್ಟ್‌ ಇಂಡೀಸ್‌ ಎಡಗೈ ಮಧ್ಯಮ ವೇಗಿ ಮುಸ್ತಫಿಜುರ್‌ ದಾಳಿಗೆ ಸಿಲುಕಿತು (31ಕ್ಕೆ 3). ಆ್ಯಂಡ್ರೆ ಫ್ಲೆಚರ್‌ (6), ಸಾಮ್ಯುಯೆಲ್ಸ್‌ (2) ಬೇಗನೇ ಔಟಾದದ್ದು ದೊಡ್ಡ ಹೊಡೆತ ನೀಡಿತು. ರಿಕಾರ್ಡೊ ಪೊವೆಲ್‌ (23), ದಿನೇಶ್‌ ರಾಮದಿನ್‌ (21), ಚಾಡ್ವಿಕ್‌ ವಾಲ್ಟನ್‌ (19) ಕೂಡ ಕ್ರೀಸ್‌ ಆಕ್ರಮಿಸಲು ವಿಫ‌ಲರಾದರು.

ಈ ಹಂತದಲ್ಲಿ ಸಿಡಿದು ನಿಂತ ಆ್ಯಂಡ್ರೆ ರಸೆಲ್‌ ಬಾಂಗ್ಲಾ ಬೌಲರ್‌ಗಳ ಮೇಲೆರಗಿ ಹೋದರು. ಕೇವಲ 21 ಎಸೆತಗಳಿಂದ 47 ರನ್‌ ಸಿಡಿಸಿನ ಭೀತಿಯೊಡ್ಡಿದರು (6 ಸಿಕ್ಸರ್‌, 1 ಬೌಂಡರಿ). ಆದರೆ 17.1ನೇ ಓವರಿನಲ್ಲಿ ರಸೆಲ್‌ ವಿಕೆಟ್‌ ಬಿದ್ದೊಡನೆಯೇ ಮಳೆ ಆರಂಭಗೊಂಡಿತು. ಪಂದ್ಯ ಇಲ್ಲಿಗೇ ನಿಂತಿತು.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-5 ವಿಕೆಟಿಗೆ 184 (ಲಿಟನ್‌ ದಾಸ್‌ 61, ಮಹಮದುಲ್ಲ ಔಟಾಗದೆ 32, ಪೌಲ್‌ 26ಕ್ಕೆ 2, ಬ್ರಾತ್‌ವೇಟ್‌ 32ಕ್ಕೆ 2). ವೆಸ್ಟ್‌ ಇಂಡೀಸ್‌-17.1 ಓವರ್‌ಗಳಲ್ಲಿ 7 ವಿಕೆಟಿಗೆ 135 (ರಸೆಲ್‌ 47, ಪೊವೆಲ್‌ 23, ಮುಸ್ತಫಿಜುರ್‌ 31ಕ್ಕೆ 3). ಪಂದ್ಯಶ್ರೇಷ್ಠ: ಲಿಟನ್‌ ದಾಸ್‌. ಸರಣಿಶ್ರೇಷ್ಠ: ಶಕಿಬ್‌ ಅಲ್‌ ಹಸನ್‌.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.