5th T20I ; ಭಾರತಕ್ಕೆ ಸೋಲುಣಿಸಿ ಸರಣಿ ಜಯಿಸಿದ ವೆಸ್ಟ್ ಇಂಡೀಸ್

ಸುಲಭ ಜಯ ತಂದುಕೊಟ್ಟ ಬ್ರಾಂಡನ್ ಕಿಂಗ್

Team Udayavani, Aug 14, 2023, 12:31 AM IST

1-qwwqe

ಲಾಡರ್‌ಹಿಲ್‌(ಫ್ಲೋರಿಡಾ): ಐದು ಪಂದ್ಯಗಳ ಟಿ 20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತಕ್ಕೆ ಸೋಲುಣಿಸಿದ ವೆಸ್ಟ್ ಇಂಡೀಸ್ 3-2 ರಿಂದ ಸರಣಿ ಜಯಿಸಿದೆ.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಆಟಕ್ಕೆ ಮಳೆ ಅಡ್ಡಿಯ ನಡುವೆಯೂ 166 ರನ್‌ಗಳ ಗುರಿ ಬೆನ್ನಟ್ಟಿದ ವಿಂಡೀಸ್‌ ಬ್ರಾಂಡನ್ ಕಿಂಗ್ ಅವರ ಅತ್ಯಮೋಘ ಆಟದಿಂದ ಭರ್ಜರಿ ಜಯ ಒಲಿಸಿಕೊಂಡಿತು. 18 ಓವರ್ ಗಳಲ್ಲೇ 2 ವಿಕೆಟ್ ನಷ್ಟಕ್ಕೆ 171 ರನ್ ಗಳಿಸುವ ಮೂಲಕ ಸುಲಭ ಜಯ ತನ್ನದಾಗಿಸಿಕೊಂಡಿತು.

ಬ್ರಾಂಡನ್ ಕಿಂಗ್ ಔಟಾಗದೆ 85 ರನ್ ಚಚ್ಚಿದರು.55 ಎಸೆತಗಳಲ್ಲಿ5 ಬೌಂಡರಿ ಮತ್ತು 6ಆಕರ್ಷಕ ಸಿಕ್ಸರ್ ಸಿಡಿಸಿದರು. ಕಿಂಗ್ ಗೆ ಸಾಥ್ ನೀಡಿದ ನಿಕೋಲಸ್ ಪೂರನ್ 47 ರನ್ ಗಳಿಸಿ ಔಟಾದರು. ಕೈಲ್ ಮೇಯರ್ಸ್ 10, ಶಾಯ್ ಹೋಪ್ ಔಟಾಗದೆ 22 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ನಾಲ್ಕು ವಿಕೆಟ್ ಕಿತ್ತ ರೊಮಾರಿಯೋ ಶೆಫರ್ಡ್ ಭಾಗಿಯಾದರು. ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ನಿಕೋಲಸ್ ಪೂರನ್ ಭಾಜನರಾದರು.

ಈ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಅರ್ಧಶತಕ ಗಳಿಸಿದ್ದು ವಿಶೇಷ.ರವಿವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಹಾರ್ದಿಕ್‌ ಪಾಂಡ್ಯ, ನಿರ್ಧಾರ ಹಾದಿತಪ್ಪಿತು. ಆರಂಭಿಕ ಆಟಗಾರರಿಬ್ಬರೂ 17 ರನ್‌ಗಳಾಗುವಷ್ಟರಲ್ಲಿ ಪೆವಿಲಿಯನ್‌ ಸೇರಿದ್ದರು. ವಿಶೇಷವೆಂದರೆ, ಇವರಿಬ್ಬರೂ ಶನಿವಾರ ನಡೆದ ಪಂದ್ಯದಲ್ಲಿ ವಿಂಡೀಸ್‌ ಬೌಲರ್‌ಗಳನ್ನು ಧೂಳೀಪಟ ಮಾಡಿದ್ದರು.

ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 4 ಎಸೆತಗಳಲ್ಲಿ 5 ಮತ್ತು ಶುಭಮನ್‌ ಗಿಲ್‌ 9 ಎಸೆತಗಳಲ್ಲಿ 9 ರನ್‌ ಗಳಿಸಿ ಔಟಾದರು. ಇವರಿಬ್ಬರೂ ಅಖೀಲ್‌ಗೆ ವಿಕೆಟ್‌ ಒಪ್ಪಿಸಿದರು. ಆದರೆ ಒನ್‌ಡೌನ್‌ ಸೂರ್ಯಕುಮಾರ್‌ ಮತ್ತು ತಿಲಕ್‌ ವರ್ಮ ಒಂದಷ್ಟು ಹೊತ್ತು ಗಟ್ಟಿಯಾಗಿ ನಿಲ್ಲುವ ಪ್ರಯತ್ನ ಮಾಡಿದರು. ಹೊಡಿಬಡಿ ಆಟಗಾರ ತಿಲಕ್‌ ವರ್ಮ 18 ಎಸೆತಗಳಲ್ಲಿ 2 ಸಿಕ್ಸ್‌, 3 ಬೌಂಡರಿಗಳ ನೆರವಿನಿಂದ 27 ರನ್‌ ಗಳಿಸಿದರು. ತಿಲಕ್‌ ವರ್ಮ ಕ್ರೀಸ್‌ನಲ್ಲಿ ಇದ್ದಷ್ಟು ಹೊತ್ತು ಮೊತ್ತ ಜೋರಾಗಿ ಏರುತ್ತಲೇ ಇತ್ತು.

ತಿಲಕ್‌ ವರ್ಮ ಔಟಾದ ಮೇಲೆ ಬಂದ ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ 13 ರನ್‌ ಗಳಿಸಲಷ್ಟೇ ಶಕ್ತವಾದರು. ಈ ಮೂಲಕ ಮತ್ತೂಮ್ಮೆ ವಿಫ‌ಲವಾದರು. ಹಾರ್ದಿಕ್‌ ಪಾಂಡ್ಯ 14 ರನ್‌ ಗಳಿಸಿದರು. ಅಕ್ಷರ್‌ ಪಟೇಲ್‌ 13 ರನ್‌ ಗಳಿಸಿ ಔಟಾದರು. ಅರ್ಷದೀಪ್‌ ಸಿಂಗ್‌ 8, ಕುಲದೀಪ್‌ ಯಾದವ್‌ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್‌ ಯಾದವ್‌ 45 ಎಸೆತಗಳಲ್ಲಿ 61 ರನ್‌ ಗಳಿಸಿದರು. ಇದರಲ್ಲಿ 3 ಸಿಕ್ಸ್‌, 4 ಫೋರ್‌ಗಳಿವೆ. ಇದು ತಂಡದಲ್ಲಿಯೇ ಆಟಗಾರನೋರ್ವ ಗಳಿಸಿದ ಅತ್ಯಧಿಕ ರನ್‌.

ವೆಸ್ಟ್‌ ಇಂಡೀಸ್‌ ಪರ ಶೆಫ‌ರ್ಡ್‌ 31 ರನ್‌ ನೀಡಿ 4 ವಿಕೆಟ್‌ ಪಡೆದು ಯಶಸ್ವಿ ಬೌಲರ್‌ ಎನ್ನಿಸಿದರು. ಹಾಗೆಯೇ, ಅಖೀಲ್‌ 24ಕ್ಕೆ 2, ಹೋಲ್ಡರ್‌ 36 ರನ್‌ಗೆ 2 ವಿಕೆಟ್‌ ಗಳಿಸಿದರು. ಆಟಕ್ಕೆ ಮಳೆ ಅಡ್ಡಿ ಪಡಿಸಿದ್ದರಿಂದ ಮೊದಲಾರ್ಧದ ಆಟ ವಿಳಂಬವಾಗಿ ಕೊನೆಗೊಂಡಿತು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.