ಟಿ20 ಸರಣಿ: ನ್ಯೂಜಿಲ್ಯಾಂಡ್‌ ವಿರುದ್ಧ ವೆಸ್ಟ್‌ ಇಂಡೀಸ್‌ ಗೆ 8 ವಿಕೆಟ್ ಗಳ ಜಯಭೇರಿ

ವೈಟ್‌ವಾಶ್‌ ತಪ್ಪಿಸಿಕೊಂಡ ವಿಂಡೀಸ್‌

Team Udayavani, Aug 15, 2022, 4:29 PM IST

ಟಿ20 ಸರಣಿ: ನ್ಯೂಜಿಲ್ಯಾಂಡ್‌ ವಿರುದ್ಧ ವೆಸ್ಟ್‌ ಇಂಡೀಸ್‌ ಗೆ 8 ವಿಕೆಟ್ ಗಳ ಜಯಭೇರಿ

ಕಿಂಗ್‌ಸ್ಟನ್‌ (ಜಮೈಕಾ): ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಟಿ20 ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ ವೈಟ್‌ವಾಶ್‌ ಅವಮಾನದಿಂದ ಪಾರಾಗಿದೆ.

3ನೇ ಹಾಗೂ ಅಂತಿಮ ಪಂದ್ಯವನ್ನು 8 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದು ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿದೆ.

ಇಲ್ಲಿನ “ಸಬೀನಾ ಪಾರ್ಕ್‌’ನಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ 7 ವಿಕೆಟಿಗೆ 145 ರನ್‌ ಗಳಿಸಿದರೆ, ವೆಸ್ಟ್‌ ಇಂಡೀಸ್‌ 19 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 150 ಬಾರಿಸಿತು. ಮೊದಲೆರಡು ಪಂದ್ಯಗಳನ್ನು ನ್ಯೂಜಿಲ್ಯಾಂಡ್‌ ಕ್ರಮವಾಗಿ 13 ರನ್‌ ಹಾಗೂ 90 ರನ್ನುಗಳಿಂದ ಜಯಿಸಿತ್ತು.

ವಿಂಡೀಸ್‌ ಆರಂಭಿಕರಾದ ಬ್ರ್ಯಾಂಡನ್‌ ಕಿಂಗ್‌ ಮತ್ತು ಶಮರ್‌ ಬ್ರೂಕ್ಸ್‌ ಪ್ರಚಂಡ ಬ್ಯಾಟಿಂಗ್‌ ನಡೆಸಿ ಭದ್ರ ಬುನಾದಿ ನಿರ್ಮಿಸಿದರು. 13.1 ಓವರ್‌ಗಳಲ್ಲಿ 101 ರನ್‌ ಹರಿದು ಬಂತು. ಕಿಂಗ್‌ ಗಳಿಕೆ 35 ಎಸೆತಗಳಿಂದ 53 ರನ್‌ (4 ಫೋರ್‌, 3 ಸಿಕ್ಸರ್‌). ಈ ಬ್ಯಾಟಿಂಗ್‌ ಸಾಹಸಕ್ಕಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು.

ಬ್ರೂಕ್ಸ್‌ ಔಟಾಗದೆ 56 ರನ್‌ ಹೊಡೆದರು (59 ಎಸೆತ, 3 ಬೌಂಡರಿ, 2 ಸಿಕ್ಸರ್‌). ಇವರೊಂದಿಗೆ ಪೊವೆಲ್‌ 27 ರನ್‌ ಮಾಡಿ ಔಟಾಗದೆ ಉಳಿದರು.

ನ್ಯೂಜಿಲ್ಯಾಂಡಿಗೆ ಓಡಿಯನ್‌ ಸ್ಮಿತ್‌ ಕಡಿವಾಣ ಹಾಕಿದರು. ಇವರ ಸಾಧನೆ 29ಕ್ಕೆ 3 ವಿಕೆಟ್‌. ಅಖೀಲ್‌ ಹುಸೇನ್‌ 2 ವಿಕೆಟ್‌ ಕೆಡವಿದರು. 41 ರನ್‌ ಮಾಡಿದ ಗ್ಲೆನ್‌ ಫಿಲಿಪ್ಸ್‌ ಅವರದು ನ್ಯೂಜಿಲ್ಯಾಂಡ್‌ ಸರದಿಯ ಸರ್ವಾಧಿಕ ಗಳಿಕೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-7 ವಿಕೆಟಿಗೆ 145 (ಫಿಲಿಪ್ಸ್‌ 41, ವಿಲಿಯಮ್ಸನ್‌ 24, ಕಾನ್ವೆ 21, ಸ್ಮಿತ್‌ 29ಕ್ಕೆ 3, ಹೊಸೇನ್‌ 28ಕ್ಕೆ 2). ವೆಸ್ಟ್‌ ಇಂಡೀಸ್‌-19 ಓವರ್‌ಗಳಲ್ಲಿ 2 ವಿಕೆಟಿಗೆ 150 (ಬ್ರೂಕ್ಸ್‌ ಔಟಾಗದೆ 56, ಕಿಂಗ್‌ 53, ಪೊವೆಲ್‌ ಔಟಾಗದೆ 27).

ಪಂದ್ಯಶ್ರೇಷ್ಠ: ಬ್ರ್ಯಾಂಡನ್‌ ಕಿಂಗ್‌.
ಸರಣಿಶ್ರೇಷ್ಠ: ಗ್ಲೆನ್‌ ಫಿಲಿಪ್ಸ್‌.

Ad

ಟಾಪ್ ನ್ಯೂಸ್

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌

ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ

Axiom Mission 4: ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.