ಪಶ್ಚಿಮ ವಲಯಕ್ಕೆ ದುಲೀಪ್‌ ಪಟ್ಟ; ದಕ್ಷಿಣ ವಲಯ ವಿರುದ್ಧ  294 ರನ್‌ ಗೆಲುವು


Team Udayavani, Sep 25, 2022, 11:00 PM IST

ಪಶ್ಚಿಮ ವಲಯಕ್ಕೆ ದುಲೀಪ್‌ ಪಟ್ಟ; ದಕ್ಷಿಣ ವಲಯ ವಿರುದ್ಧ  294 ರನ್‌ ಗೆಲುವು

ಕೊಯಮತ್ತೂರು: ಇನ್ನಿಂಗ್ಸ್‌ ಮುನ್ನಡೆ ಹೊಂದಿದ್ದ ಆತಿಥೇಯ ದಕ್ಷಿಣ ವಲಯವನ್ನು 294 ರನ್ನುಗಳ ಭಾರೀ ಅಂತರದಿಂದ ಕೆಡವಿದ ಪಶ್ಚಿಮ ವಲಯ “ದುಲೀಪ್‌ ಟ್ರೋಫಿ’ ಪಟ್ಟ ಅಲಂಕರಿಸಿದೆ.

ಗೆಲುವಿಗೆ 529 ರನ್ನುಗಳ ಕಠಿನ ಗುರಿ ಪಡೆದಿದ್ದ ದಕ್ಷಿಣ ವಲಯ, ಪಂದ್ಯದ ಅಂತಿಮ ದಿನ ಭೋಜನ ವಿರಾಮದೊಳಗಾಗಿ 234ಕ್ಕೆ ಸರ್ವಪತನ ಕಂಡಿತು. 4ನೇ ದಿನದಾಟದ ಅಂತ್ಯಕ್ಕೆ 154 ರನ್ನಿಗೆ 6 ವಿಕೆಟ್‌ ಕಳೆದುಕೊಂಡಾಗಲೇ ದಕ್ಷಿಣ ವಲಯದ ಸೋಲು ಖಾತ್ರಿಯಾಗಿತ್ತು. ಸ್ಟಾರ್‌ ಆಟಗಾರರೆಲ್ಲ ಪಶ್ಚಿಮದ ಬೌಲಿಂಗ್‌ ದಾಳಿಗೆ ಸಿಲುಕಿ ಪೆವಿಲಿಯನ್‌ ಸೇರಿ ಕೊಂಡಿದ್ದರು. ನಾಟೌಟ್‌ ಬ್ಯಾಟರ್‌ಗಳಾದ ಟಿ. ರವಿತೇಜ ಮತ್ತು ಆರ್‌. ಸಾಯಿ ಕಿಶೋರ್‌ ಎರಡು ಗಂಟೆಗಳ ಕಾಲ ಹೋರಾಟ ಸಂಘಟಿಸಿ ಕ್ರೀಸ್‌ ಆಕ್ರಮಿಸಿಕೊಳ್ಳುವ ಸೂಚನೆ ನೀಡಿದರು. ಈ ಜೋಡಿಯಿಂದ 157 ಎಸೆತಗಳಿಂದ 57 ರನ್‌ ಒಟ್ಟುಗೂಡಿತು. ಸ್ಕೋರ್‌ 203ಕ್ಕೆ ಏರಿದಾಗ ಮಧ್ಯಮ ವೇಗಿ ಚಿಂತನ್‌ ಗಜ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದರು.

ಬಳಿಕ ರವಿತೇಜ ಮತ್ತು ಕೃಷ್ಣಪ್ಪ ಗೌತಮ್‌ 8 ಓವರ್‌ಗಳ ತನಕ ಪಶ್ಚಿಮದ ದಾಳಿಯನ್ನು ತಡೆದು ನಿಂತರು. ಇವರು ದ್ವಿತೀಯ ಅವಧಿಗೆ ಪಂದ್ಯವನ್ನು ವಿಸ್ತರಿಸುವ ನಿರೀಕ್ಷೆ ಮೂಡಿಸಿದರು. ಆದರೆ ಇದರಲ್ಲಿ ಯಶಸ್ಸು ಕಾಣಲಿಲ್ಲ. ಸ್ಕೋರ್‌ 226ಕ್ಕೆ ಏರಿದಾಗ ಶಮ್ಸ್‌ ಮುಲಾನಿ ದೊಡ್ಡದೊಂದು ಬ್ರೇಕ್‌ ಒದಗಿಸಿದರು. ಕ್ರೀಸ್‌ ಆಕ್ರಮಿಸಿಕೊಂಡಿದ್ದ ರವಿತೇಜ ಅವರನ್ನು ಲೆಗ್‌ ಬಿಫೋರ್‌ ಬಲೆಗೆ ಬೀಳಿಸಿದರು. ರವಿತೇಜ 97 ಎಸೆತ ಎದುರಿಸಿ 53 ರನ್‌ ಹೊಡೆದರು (3 ಬೌಂಡರಿ, 1 ಸಿಕ್ಸರ್‌). ಬಾಸಿಲ್‌ ಥಂಪಿ ಖಾತೆ ತೆರೆಯದೆ ವಾಪಸಾದರು. ಕೆ. ಗೌತಮ್‌ ವಿಕೆಟ್‌ ಕಿತ್ತ ತನುಷ್‌ ಕೋಟ್ಯಾನ್‌ ಪಶ್ಚಿಮ ವಲಯದ ಜಯಭೇರಿ ಮೊಳಗಿಸಿದರು. ಗೌತಮ್‌ ಗಳಿಕೆ 28 ಎಸೆತಗಳಿಂದ 17 ರನ್‌ (3 ಬೌಂಡರಿ).

51ಕ್ಕೆ 4 ವಿಕೆಟ್‌ ಕಿತ್ತ ಶಮ್ಸ್‌ ಮುಲಾನಿ ಪಶ್ಚಿಮ ವಲಯದ ಅತ್ಯಂತ ಯಶಸ್ವಿ ಬೌಲರ್‌ ಎನಿಸಿದರು. 93 ರನ್‌ ಮಾಡಿದ ಕೇರಳದ ಓಪನರ್‌ ರೋಹನ್‌ ಕುನ್ನುಮ್ಮಾಳ್‌ ದಕ್ಷಿಣ ವಲಯದ ದ್ವಿತೀಯ ಸರದಿಯ ಟಾಪ್‌ ಸ್ಕೋರರ್‌. ಅಮೋಘ ದ್ವಿಶತಕ ಬಾರಿಸಿ ಪಶ್ಚಿಮ ವಲಯವನ್ನು ಹಳಿ ಏರಿಸಿದ ಯಶಸ್ವಿ ಜೈಸ್ವಾಲ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ದುಲೀಪ್‌ ಟ್ರೋಫಿ ಪಂದ್ಯಾವಳಿ ಪ್ರಸಕ್ತ ಋತುವಿನಿಂದ ವಲಯ ಮಾದರಿಗೆ ಮರಳಿತ್ತು. ಕಳೆದ ಕೆಲವು ವರ್ಷಗಳಿಂದ 3 ತಂಡಗಳ ನಡುವೆ ಈ ಪಂದ್ಯಾವಳಿ ನಡೆಯುತ್ತಿತ್ತು.

ಸಂಕ್ಷಿಪ್ತ ಸ್ಕೋರ್‌: ಪಶ್ಚಿಮ ವಲಯ-270 ಮತ್ತು 4 ವಿಕೆಟಿಗೆ 585 ಡಿಕ್ಲೇರ್‌. ದಕ್ಷಿಣ ವಲಯ-327 ಮತ್ತು 234 (ರೋಹನ್‌ ಕುನ್ನುಮ್ಮಾಳ್‌ 93, ಟಿ. ರವಿತೇಜ 53, ಕೆ. ಗೌತಮ್‌ 17, ಶಮ್ಸ್‌ ಮುಲಾನಿ 51ಕ್ಕೆ 4, ಜೈದೇವ್‌ ಉನಾದ್ಕತ್‌ 28ಕ್ಕೆ 2, ಅಜಿತ್‌ ಶೇs… 29ಕ್ಕೆ 2).
ಪಂದ್ಯಶ್ರೇಷ್ಠ: ಯಶಸ್ವಿ ಜೈಸ್ವಾಲ್‌.
ಸರಣಿಶ್ರೇಷ್ಠ: ಜೈದೇವ್‌ ಉನಾದ್ಕತ್‌.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.