ಟೋಕಿಯೊ ಒಲಿಂಪಿಕ್ ನಲ್ಲಿ ಅಶಿಸ್ತು ಪ್ರದರ್ಶನ : ಕುಸ್ತಿಪಟು ಪೋಗಟ್ ಅಮಾನತು


Team Udayavani, Aug 10, 2021, 8:30 PM IST

retyre

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಿಂದ ಹಿಂದುರಿಗಿರುವ ಕುಸ್ತಿಪಟು ವಿನೇಶಾ ಪೋಗಟ್‌ ಅವರಿಗೆ ಆಘಾತ ಎದುರಾಗಿದೆ. ಒಲಿಂಪಿಕ್ಸ್ ನಲ್ಲಿ ಅಶಿಸ್ತು ತೋರಿದ ಆರೋಪದ ಮೇಲೆ ಈಕೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಭಾರತ ಕುಸ್ತಿ ಫೆಡರೇಷನ್‌ ಆದೇಶ ಹೊರಡಿಸಿದೆ.

ಪೋಗಟ್‌ ಅವರಿಗೆ ನೋಟಿಸ್ ನೀಡಿರುವ ಡಬ್ಲೂಎಫ್ಐ ಇದಕ್ಕೆ ಇದೇ ಆಗಸ್ಟ್ 16ರೊಳಗೆ ಉತ್ತರ ನೀಡುವಂತೆಯೂ ಖಡಕ್ ವಾರ್ನಿಂಗ್ ಕೊಟ್ಟಿದೆ. ನೋಟಿಸ್‌ಗೆ ಉತ್ತರಿಸುವವರೆಗೂ ಕುಸ್ತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಅವರ ವಿಚಾರದಲ್ಲಿ ಡಬ್ಲ್ಯುಎಫ್‌ಐ ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ರಾಷ್ಟ್ರೀಯ ಮತ್ತು ಇತರ ದೇಶಿ ಟೂರ್ನಿಗಳಲ್ಲೂ ಸ್ಪರ್ಧಿಸುವಂತಿಲ್ಲ’ ಎಂದು ಡಬ್ಲ್ಯುಎಫ್‌ಐ ಮೂಲಗಳು ತಿಳಿಸಿವೆ.

ಅಶಿಸ್ತು ತೋರಿದ ಆರೋಪ :

ಟೋಕಿಯೋ ಒಲಿಂಪಿಕ್ ನಲ್ಲಿ ಅಶಿಸ್ತು ತೋರಿದ ಆರೋಪಕ್ಕೆ ವಿನೇಶಾ ಗುರಿಯಾಗಿದ್ದಾರೆ. ಒಲಿಂಪಿಕ್ ಗೂ ಮುನ್ನ ಇವರು ಹಂಗರಿಯಲ್ಲಿ ತರಬೇತಿ ಪಡೆದಿದ್ದರು. ಅಲ್ಲಿಂದ ನೇರವಾಗಿ ಟೋಕಿಯೊಗೆ ಪ್ರಯಾಣಿಸಿದ್ದರು. ಕ್ರೀಡಾ ಗ್ರಾಮದಲ್ಲಿ ಉಳಿದುಕೊಳ್ಳಲು ತಗಾದೆ ತೆಗೆದಿದ್ದ ಅವರು ಭಾರತದ ಇತರ ಕುಸ್ತಿಪಟುಗಳ ಜೊತೆಯಲ್ಲಿ ಅಭ್ಯಾಸ ನಡೆಸಲೂ ನಿರಾಕರಿಸಿದ್ದರು.

ಪ್ರಾಯೋಜಕತ್ವದ ಪೋಷಾಕು :

ಸಹ ಆಟಗಾರರ ಜೊತೆ ಗಲಾಟೆ ಒಂದು ಕಡೆಯಾದರೆ, ಭಾರತ ತಂಡಕ್ಕೆ ಶಿವ್‌ ನರೇಶ್‌ ಸಂಸ್ಥೆ ಪ್ರಾಯೋಜಕತ್ವ ಮಾಡಿದ್ದ ಪೋಷಾಕು ಧರಿಸಿರಲಿಲ್ಲ. ಇದರ ಬದಲಾಗಿ ನೈಕಿ ಸಂಸ್ಥೆಯ ಲಾಂಛನವಿರುವ ಪೋಷಾಕು ತೊಟ್ಟಿದ್ದರು.

‘ಕ್ರೀಡಾ ಗ್ರಾಮದಲ್ಲಿ ಸೋನಮ್‌ ಮಲಿಕ್‌, ಅನ್ಶು ಮಲಿಕ್‌ ಮತ್ತು ಸೀಮಾ ಬಿಸ್ಲಾ ಉಳಿದುಕೊಂಡಿದ್ದ ಕೊಠಡಿಯ ಸನಿಹದಲ್ಲೇ ವಿನೇಶಾಗೂ ಕೊಠಡಿ ಕಾಯ್ದಿರಿಸಲಾಗಿತ್ತು. ನೀವೆಲ್ಲಾ ಭಾರತದಿಂದ ಬಂದಿದ್ದೀರಿ. ನಿಮ್ಮಿಂದ ನನಗೆ ಕೊರೊನಾ ಸೋಂಕು ತಗುಲಬಹುದು. ನಾನಂತೂ ಇಲ್ಲಿ ಉಳಿದುಕೊಳ್ಳುವುದಿಲ್ಲ ಎಂದು ರಾದ್ಧಾಂತ ಮಾಡಿಬಿಟ್ಟಿದ್ದರು. ಅವರ ವರ್ತನೆ ಕಂಡು ನಮಗೂ ಬೇಸರವಾಗಿತ್ತು’ ಎಂದು ಕೂಟದಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ವಾರ್ಟರ್‌ ಫೈನಲ್‌ ನಲ್ಲಿ ಮುಗ್ಗರಿಸಿದ ವಿನೇಶ್ :

ವಿನೇಶಾ ಅವರ ಮೇಲೆ ಭಾರೀ ನೀರಿಕ್ಷೆ ಇತ್ತು. ಆದರೆ, ಇವರು ಕ್ವಾರ್ಟರ್‌ ಫೈನಲ್‌ನಲ್ಲೇ ಮುಗ್ಗರಿಸಿದರು.

ಸೋನಂ ಮಲಿಕ್​ಗೂ ನೋಟಿಸ್:

ಇನ್ನು ಟೋಕಿಯೋ ಒಲಿಂಪಿಕ್ಸ್​ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಸೋನಮ್ ಮಲಿಕ್​ಗೂ ಅನುಚಿತ ವರ್ತನೆಗಾಗಿ ನೋಟಿಸ್ ನೀಡಲಾಗಿದೆ. ಸೋನಂ ಮಲಿಕ್‌ಗೆ ಆಕೆ ಅಥವಾ ಆಕೆಯ ಕುಟುಂಬದ ಯಾರಾದರೂ ಫೆಡರೇಶನ್ ಕಚೇರಿಯಿಂದ ಪಾಸ್‌ಪೋರ್ಟ್ ತೆಗೆದುಕೊಳ್ಳಬೇಕು ಎಂದು ತಿಳಿಸಲಾಯಿತು. ಆದರೆ ಆಕೆ ತನ್ನ ಪರವಾಗಿ ಸಂಗ್ರಹಿಸಲು SAI ಅಧಿಕಾರಿಗಳಿಗೆ ಆದೇಶಿಸಿದಳು. ಇದು ಸ್ವೀಕಾರಾರ್ಹವಲ್ಲ. ಅವರು ಏನನ್ನೂ ಸಾಧಿಸಿಲ್ಲ. ಇದಾಗ್ಯೂ ಇಂತಹ ವರ್ತನೆಗಳು ಸ್ಟಾರ್​ಗಿರಿಯನ್ನು ತೋರಿಸುತ್ತಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನೊಟೀಸ್ ನೀಡಲಾಗಿದೆ ಎಂದು ಇದನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.