ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌


Team Udayavani, May 25, 2022, 5:40 PM IST

ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌

ಮುಂಬಯಿ: ಜೂನಿಯರ್‌ ತೆಂಡುಲ್ಕರ್‌ ಖ್ಯಾತಿಯ ಆಲ್‌ರೌಂಡರ್‌ ಅರ್ಜುನ್‌ ತೆಂಡುಲ್ಕರ್‌ ಅವರ ಮತ್ತೊಂದು ಐಪಿಎಲ್‌ ಋತು ಬೆಂಚ್‌ ಮೇಲೆಯೇ ಕಳೆದು ಹೋಗಿದೆ.

2021 ಹಾಗೂ 2022ರ ಸರಣಿಯ ಎಲ್ಲ 28 ಪಂದ್ಯಗಳಿಂದಲೂ ಅವರನ್ನು ಮುಂಬೈ ಇಂಡಿಯನ್ಸ್‌ ತಂಡದಿಂದ ಹೊರಗುಳಿಸಲಾಯಿತು.

ಡೆಲ್ಲಿ ಎದುರಿನ ಕೊನೆಯ ಲೀಗ್‌ ಪಂದ್ಯದಲ್ಲಾದರೂ ಅರ್ಜುನ್‌ ಆಡಬಹುದು ಎಂಬ ನಿರೀಕ್ಷೆಯೂ ಹುಸಿಯಾಯಿತು.

ಈ ಕುರಿತು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ. “ಅರ್ಜುನ್‌ ಹಾದಿ ಬಹಳ ಸವಾಲಿನಿಂದ ಕೂಡಿದೆ. ಆತ ಕಠಿನ ಪರಿಶ್ರಮ ವಹಿಸಬೇಕಿದೆ. ಆದರೆ ಕಳೆದೆರಡು ಋತುಗಳಲ್ಲಿ ಆತನಿಗೆ ಐಪಿಎಲ್‌ ಆಡಲು ಅವಕಾಶ ಏಕೆ ಸಿಗಲಿಲ್ಲ ಎಂಬುದು ಬೇರೆ ಪ್ರಶ್ನೆ. ಈಗಾಗಲೇ ಮುಂಬೈ ಸೀಸನ್‌ ಮುಗಿದಿದೆ’ ಎಂದು “ಸಚ್‌ ಇನ್‌ಸೈಟ್‌’ ಕಾರ್ಯಕ್ರಮದಲ್ಲಿ ಸಚಿನ್‌ ಹೇಳಿದರು.

“ನಿನ್ನ ಮುಂದಿರುವ ಮಾರ್ಗ ಖಂಡಿತ ಸುಲಭದ್ದಲ್ಲ, ಇದು ಭಾರೀ ಸವಾಲಿನಿಂದ ಕೂಡಿದೆ ಎಂದು ನಾನು ಆತನಿಗೆ ಯಾವತ್ತೂ ಹೇಳುತ್ತಿರುತ್ತೇನೆ. ಕ್ರಿಕೆಟ್‌ ಮೇಲಿನ ಪ್ರೀತಿಯಿಂದಾಗಿ ನೀನು ಕ್ರಿಕೆಟ್‌ ಆಡತೊಡಗಿದೆ. ಇದನ್ನು ಅದೇ ಪ್ರೀತಿಯಲ್ಲಿ ಮುಂದುವರಿಸು. ಕಠಿನ ಶ್ರಮಪಡು. ಫ‌ಲಿತಾಂಶ ತನ್ನಿಂತಾನಾಗಿ ಲಭಿಸುತ್ತದೆ ಎಂಬುದಾಗಿ ಹೇಳಿದ್ದೇನೆ’ ಎಂದು ಪುತ್ರನಿಗೆ ನೀಡಿದ ಸಲಹೆ ಕುರಿತು ಸಚಿನ್‌ ಪ್ರತಿಕ್ರಿಯಿಸಿದರು.

ಆಯ್ಕೆ ವಿಷಯದಲ್ಲಿ ನಾನಿಲ್ಲ
“ಆಯ್ಕೆ ಪ್ರತಿಕ್ರಿಯೆ ಕುರಿತು ಹೇಳುವುದಾದರೆ, ನಾನು ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದೇ ಇಲ್ಲ. ಇವೆಲ್ಲವೂ ತಂಡದ ಆಡಳಿತ ಮಂಡಳಿಗೆ ಬಿಟ್ಟ ವಿಚಾರ’ ಎಂದು ಸಚಿನ್‌ ತೆಂಡುಲ್ಕರ್‌ ಹೇಳಿದರು.

ಮುಂಬೈ ಇಂಡಿಯನ್ಸ್‌ಗೂ ಸಚಿನ್‌ ತೆಂಡುಲ್ಕರ್‌ಗೂ ಸದ್ಯ ಆಧಿಕೃತ ಸಂಬಂಧವೇನಿಲ್ಲ. ಪಂದ್ಯಗಳ ವೇಳೆ ಹಾಜರಿದ್ದು, ತಂಡದೊಂದಿಗೆ ಬೆರೆತು, ಕೆಲವು ಸಲಹೆಗಳನ್ನು ನೀಡುತ್ತಾರೆ, ಅಷ್ಟೇ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.