ಕಿರಿಯರ ತಂಡಕ್ಕೆ ಆಯ್ಕೆಯಾಗಿದ್ದಾಗ ಆತ್ಮಹತ್ಯಗೆ ಯತ್ನಿಸಿದ್ದ ಕುಲದೀಪ್‌


Team Udayavani, Nov 13, 2017, 6:15 AM IST

Kuldeep-Yadav.jpg

ಹೊಸದಿಲ್ಲಿ: ತನ್ನ ಅಲ್ಪಾವಧಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಬಾಳ್ವೆಯಲ್ಲಿ ಪರಿಣಾಮಕಾರಿ ಬೌಲಿಂಗ್‌ ಪ್ರದರ್ಶನ ನೀಡಿದ ಹೆಗ್ಗಳಿಕೆ ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ ಅವರದ್ದು. ಟೆಸ್ಟ್‌ ಹಾಗೂ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಕುಲದೀಪ್‌ ಟೀಮ್‌ ಇಂಡಿಯಾದ ಅನಿವಾರ್ಯ ಆಟಗಾರನೂ ಆಗಿದ್ದಾರೆ. ಭವ್ಯ ಭವಿಷ್ಯವನ್ನೂ ಹೊಂದಿದ್ದಾರೆ.

ಇಂಥ ಕುಲದೀಪ್‌ ಯಾದವ್‌ ಬಾಲ್ಯದಲ್ಲೊಮ್ಮೆ ಆತ್ಮಹತ್ಯೆಗೆ ಮುಂದಾಗಿದ್ದರು ಅಂದರೆ ನಂಬುತ್ತೀರಾ? ಹೌದು, ಇದು ಸತ್ಯ. ಸ್ವತಃ ಕುಲದೀಪ್‌ ಅವರೇ ಇದನ್ನು ಹೇಳಿಕೊಂಡಿದ್ದಾರೆ. ಆಗ ಯಾದವ್‌ ವಯಸ್ಸು ಕೇವಲ 13 ವರ್ಷ. ಉತ್ತರಪ್ರದೇಶದ ಅಂಡರ್‌-15 ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗದೇ ಹೋದಾಗ ಯಾದವ್‌ ಇಂಥದೊಂದು ನಿರ್ಧಾರಕ್ಕೆ ಬಂದಿದ್ದರಂತೆ!

“ಆಯ್ಕೆಗೋಸ್ಕರ ನಾನು ನಡೆಸಿದ ಅಭ್ಯಾಸ ಅಷ್ಟಿಷ್ಟಲ್ಲ. ವಿಪರೀತ ನಿರೀಕ್ಷೆ ನನ್ನದಾಗಿತ್ತು. ಆದರೆ ಆಯ್ಕೆಯಾಗದೇ ಹೋದಾಗ ತೀವ್ರ ಹತಾಶನಾದ ನಾನು ಆತ್ಮಹತ್ಯೆ ಮಾಡಿಕೊಳ್ಳುವ ತೀರ್ಮಾನಕ್ಕೆ ಬಂದಿದ್ದೆ…’ ಎಂದು ಕುಲದೀಪ್‌ ಯಾದವ್‌ ಪತ್ರಿಕಾ ಸಂದರ್ಶನವೊಂದರ ವೇಳೆ ಹೇಳಿದರು.

ತಂದೆಯ ಸೂಚನೆ ಮೇರೆಗೆ…
“ನಾನು ಕಲಿಕೆಯಲ್ಲಿ ಮುಂದಿದ್ದೆ. ಮೆರಿಟ್‌ ವಿದ್ಯಾರ್ಥಿಯೂ ಆಗಿದ್ದೆ. ಆದರೆ ನನ್ನನ್ನು ಕ್ರಿಕೆಟಿಗನನ್ನಾಗಿ ರೂಪಿಸುವುದು ತಂದೆಯ ಉದ್ದೇಶವಾಗಿತ್ತು. ಬಾಲ್ಯದಲ್ಲಿ ಕ್ರಿಕೆಟನ್ನು ನಾನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಕೇವಲ ಟೈಮ್‌ಪಾಸ್‌ಗೊàಸ್ಕರ ಆಡುತ್ತಿದ್ದೆ. ಆದರೆ ತಂದೆಯ ಉದ್ದೇಶ ಬೇರೆಯದೇ ಆಗಿತ್ತು. ಅವರು ನನ್ನನ್ನು ಕೋಚ್‌ ಬಳಿ ಕರೆದೊಯ್ದು ಕ್ರಿಕೆಟನ್ನು ಗಂಭೀರವಾಗಿ ಆಡುವಂತೆ ಸೂಚಿಸಿದರು. ಆಗ ಸೀಮ್‌ ಬೌಲರ್‌ ಆಗಬೇಕೆಂಬುದು ನನ್ನ ಬಯಕೆಯಾಗಿತ್ತು. ಆದರೆ ಸ್ಪಿನ್ನರ್‌ ಆಗುವಂತೆ ಕೋಚ್‌ ಬಲವಂತಪಡಿಸಿದರು. ನನ್ನ ಕೆಲವು ಚೈನಾಮನ್‌ ಎಸೆತಗಳನ್ನು ಕಂಡ ಕೋಚ್‌, ಇದೇ ಶೈಲಿಯನ್ನು ಮುಂದುವರಿಸುವಂತೆ ಸೂಚಿಸಿದರು. ಆಗ, ವಿಭಿನ್ನವಾಗಿ ಬೌಲಿಂಗ್‌ ಮಾಡುತ್ತಿದ್ದೇನೆ ಎಂದು ನನಗನಿಸಿರಲೇ ಇಲ್ಲ…’ ಎಂದು ಕುಲದೀಪ್‌ ಹೇಳಿದರು.

“ಆಸ್ಟ್ರೇಲಿಯದ ಸ್ಪಿನ್ನರ್‌ ಶೇನ್‌ ವಾರ್ನ್ ನನ್ನ ಪಾಲಿನ ಆದರ್ಶ. ಅವರ ಬೌಲಿಂಗ್‌ ವೀಡಿಯೋ ನೋಡುತ್ತ ಆಭ್ಯಾಸ ಮಾಡುತ್ತಿದ್ದೆ. ಕಾಕತಾಳೀಯವೆಂಬಂತೆ, ಆಸ್ಟ್ರೇಲಿಯ ವಿರುದ್ದವೇ ನನಗೆ ಟೆಸ್ಟ್‌ಕ್ಯಾಪ್‌ ಧರಿಸುವ ಅವಕಾಶ ಸಿಕ್ಕಿತು. ಅದು ಸರಣಿ ನಿರ್ಣಾಯಕ ಪಂದ್ಯವಾಗಿತ್ತು. ಎಲ್ಲರ ಮೇಲೂ ಒತ್ತಡವಿತ್ತು. ಅಶ್ವಿ‌ನ್‌, ಜಡೇಜ ಜತೆ ನಾನು ಬೌಲಿಂಗಿಗೆ ಇಳಿದಿದ್ದೆ. ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ಕಿತ್ತಾಗ ಆತ್ಮವಿಶ್ವಾಸ ಮೂಡಿತು…’ ಎಂದು ಈ ವರ್ಷದ ಧರ್ಮಶಾಲಾ ಟೆಸ್ಟ್‌ ಪಂದ್ಯವನ್ನು ಕುಲದೀಪ್‌ ನೆನಪಿಸಿಕೊಂಡರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.