ಲಂಕಾ ಟಿ20 ಸರಣಿಗೆ ಭಾರತ ತಂಡ ಯಾರು ಪ್ರಕಟಿಸುವವರು?

ಈಗಿನ ಆಯ್ಕೆ ಸಮಿತಿ ಅವಧಿ ಮುಗಿದಿದೆ, ನೂತನ ಸಮಿತಿ ರಚನೆಯಾಗಿಲ್ಲ!

Team Udayavani, Dec 23, 2019, 12:18 AM IST

MSK

ಹೊಸದಿಲ್ಲಿ: ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ ಸರಣಿ ಮುಗಿಸಿರುವ ಭಾರತದ ಮುಂದಿನ ಕ್ರಿಕೆಟ್‌ ಕಾರ್ಯಕ್ರಮ ಶ್ರೀಲಂಕಾ ವಿರುದ್ಧದ ಟಿ20 ಸರಣಿ. 3 ಪಂದ್ಯಗಳ ಈ ಮುಖಾಮುಖೀ ಜ. 5ರಂದು ಗುವಾಹಾಟಿಯಲ್ಲಿ ಆರಂಭವಾಗಲಿದೆ. ಇಂದೋರ್‌ ಮತ್ತು ಪುಣೆಯಲ್ಲಿ ಉಳಿದೆರಡು ಪಂದ್ಯಗಳನ್ನು ಆಡಲಾಗುವುದು.

ಆದರೆ ಈ ಸರಣಿಗಾಗಿ ಭಾರತ ತಂಡವನ್ನು ಯಾರು ಪ್ರಕಟಿಸುವವರು ಎಂಬ ಗೊಂದಲವೊಂದು ಬಿಸಿಸಿಐಗೆ ಎದುರಾಗಿದೆ. ಎಂ.ಎಸ್‌.ಕೆ. ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿಯ ಕಾರ್ಯಾವಧಿ ಈಗಾಗಲೇ ಮುಗಿದಿದೆ. ನೂತನ ಆಯ್ಕೆ ಸಮಿತಿಯನ್ನು ರಚಿಸಬೇಕಿರುವ “ಕ್ರಿಕೆಟ್‌ ಸಲಹಾ ಸಮಿತಿ’ಯೇ (ಸಿಎಸಿ) ಇನ್ನೂ ನೇಮಕಗೊಂಡಿಲ್ಲ. ಡಿ. 25ರೊಳಗೆ ತಂಡವನ್ನು ಪ್ರಕಟಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ಸಿಎಸಿ ರಚನೆ ವಿಳಂಬ?
ಡಿ. ಒಂದರ ಹೇಳಿಕೆಯೊಂದರಲ್ಲಿ, ಇನ್ನೊಂದು ವಾರ ಅಥವಾ 10 ದಿನಗಳಲ್ಲಿ ನೂತನ ಆಯ್ಕೆ ಸಮಿತಿ ರಚನೆಯಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದರು. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಬೆಳವಣಿಗೆ ಸಂಭವಿಸಿಲ್ಲ.

ಸಿಎಸಿ ಒಂದೆರಡು ದಿನಗಳಲ್ಲಿ ರಚನೆ ಯಾಗಲಿದೆ, ಇದಕ್ಕಾಗಿ ಶೀಘ್ರದಲ್ಲೇ ಸಂದರ್ಶನ ಪ್ರಕ್ರಿಯೆ ನಡೆಯಲಿದೆ ಎಂದು ಶುಕ್ರವಾರ ಸೌರವ್‌ ಗಂಗೂಲಿ ಹೇಳಿದ್ದರು. ಆದರೆ ಇದರ ಸದಸ್ಯೆಯಾಗಿದ್ದ ಶಾಂತಾ ರಂಗಸ್ವಾಮಿ ಸ್ವಹಿತಾಸಕ್ತಿ ಪ್ರಕರಣದಲ್ಲಿ ಡಿ. 28ರಂದು ವಿಚಾರಣೆ ಎದುರಿಸಬೇಕಿದೆ. ಹೀಗಾಗಿ ಸಿಎಸಿ ರಚನೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಸರಣಿಯೊಂದಕ್ಕೆ 10 ದಿನಗಳ ಮೊದಲು ತಂಡವನ್ನು ಅಂತಿಮಗೊಳಿಸ ಬೇಕೆಂಬುದು ಐಸಿಸಿ ನಿಯಮ. ಅದರಂತೆ ಡಿ. 25ರ ಒಳಗೆ ಭಾರತ ತಂಡ ಪ್ರಕಟವಾಗಲೇಬೇಕು. ಉಳಿದ 2-3 ದಿನಗಳಲ್ಲಿ ಸಿಎಸಿ ರಚನೆಯಾಗಿ, ಇದು ಆಯ್ಕೆ ಸಮಿತಿಯನ್ನು ರಚಿಸಿ, ಅದು ತಂಡವನ್ನು ಅಂತಿಮಗೊಳೀಸಿತೇ ಎಂಬ ಚಿಂತೆ ಬಿಸಿಸಿನದ್ದು! ಅಕಸ್ಮಾತ್‌ ಇದು ಸಾಧ್ಯವಾಗದೇ ಹೋದರೆ, ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿಯೇ ತಂಡವನ್ನು ಪ್ರಕಟಿಸಬೇಕಾಗುತ್ತದೆ.

ರವಿವಾರ ರಾತ್ರಿಯ ವರದಿ ಪ್ರಕಾರ ಸೋಮವಾರ ಪ್ರಸಾದ್‌ ನೇತೃತ್ವದಲ್ಲೇ ಭಾರತ ತಂಡ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಭಾರತದ ಸರಣಿಗಳು
ಶ್ರೀಲಂಕಾ ಎದುರಿನ ಟಿ20 ಸರಣಿ ಮುಗಿದ ಬೆನ್ನಲ್ಲೇ ಆಸ್ಟ್ರೇಲಿಯ ತಂಡ 3 ಏಕದಿನ ಪಂದ್ಯಗಳನ್ನಾಡಲು ಭಾರತಕ್ಕೆ ಆಗಮಿಸಲಿದೆ. ಜ. 14, 17 ಮತ್ತು 19ರಂದು ಈ ಪಂದ್ಯಗಳು ನಡೆಯಲಿವೆ. ಬಳಿಕ ಟೀಮ್‌ ಇಂಡಿಯಾ 5 ಟಿ20, 3 ಏಕದಿನ, 2 ಟೆಸ್ಟ್‌ ಪಂದ್ಯಗಳ ಸರಣಿಗಾಗಿ ನ್ಯೂಜಿಲ್ಯಾಂಡಿಗೆ ಪ್ರವಾಸಗೈಯಲಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.