ಆರ್ ಸಿಬಿ ತಂಡದಲ್ಲಿ ಪಡಿಕ್ಕಲ್ ಜೊತೆ ಯಾರು ಆರಂಭಿಕ? ಉತ್ತರ ನೀಡಿದ ವಿರಾಟ್ ಕೊಹ್ಲಿ
Team Udayavani, Mar 21, 2021, 9:49 AM IST
ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ಶನಿವಾರ ರಾತ್ರಿ ನಡೆದ ಐದನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಗೆದ್ದು, ಸರಣಿ ಜಯ ಸಾಧಿಸಿದೆ. ಇದೇ ವೇಳೆ ನಾಯಕ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ತಂಡದ ಆರಂಭಿಕ ಜೋಡಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಟೀಂ ಇಂಡಿಯಾ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಸತತ ವೈಫಲ್ಯ ಅನುಭವಿಸಿದ ಕಾರಣ ಅಂತಿಮ ಪಂದ್ಯದಲ್ಲಿ ಅವರನ್ನು ಕೈ ಬಿಡಲಾಗಿದೆ. ರೋಹಿತ್ ಶರ್ಮಾ ಜೊತೆ ನಾಯಕ ವಿರಾಟ್ ಕೊಹ್ಲಿಯೇ ಸ್ವತಃ ಆರಂಭಿಕರಾಗಿ ಕಣಕ್ಕಿಳಿದರು. ಈ ಪ್ರಯೋಗ ಯಶಸ್ವಿಯೂ ಆಯಿತು.
ಈ ಜೋಡಿ ಮೊದಲ ವಿಕೆಟ್ ಗೆ 94 ರನ್ ಗಳಿಸಿತು. ರೋಹಿತ್ ಶರ್ಮಾ 64 ರನ್ ಗಳಿಸಿದರೆ, ಕೊನೆಯವರೆಗೆ ಆಡಿ ಅಜೇಯರಾಗುಳಿದ ವಿರಾಟ್ 80 ರನ್ ಗಳಿಸಿದರು. ಪಂದ್ಯದ ಬಳಿಕ ಮಾತನಾಡಿದ ನಾಯಕ ವಿರಾಟ್, ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಬಗ್ಗೆ ಮಾತನಾಡಿದರು.
ಇದನ್ನೂ ಓದಿ:ಬಯೋ ಬಬಲ್ ನೇರ ಪ್ರವೇಶಕ್ಕೆ ಅವಕಾಶ: ಬಿಸಿಸಿಐ
ಹೌದು, ಈ ಬಾರಿಯ ಐಪಿಎಲ್ ನಲ್ಲೂ ನಾನೇ ಇನ್ನಿಂಗ್ಸ್ ಆರಂಭಿಸುತ್ತೇನೆ ಎಂದು ವಿರಾಟ್ ಹೇಳಿದರು. ಆರ್ ಸಿಬಿ ತಂಡದಲ್ಲಿ ದೇವದತ್ತ್ ಪಡಿಕ್ಕಲ್ ಈಗಾಗಲೇ ಓರ್ವ ಆರಂಭಿಕ ಆಟಗಾರನಿದ್ದು, ಅವರೊಂದಿಗೆ ವಿರಾಟ್ ಕಣಕ್ಕಿಳಿಯಲಿದ್ದಾರೆ.
ಟೀಂ ಇಂಡಿಯಾದಲ್ಲೂ ಓಪನರ್ ಆಗಿ ಆಡುವ ಇಚ್ಛೆಯನ್ನು ಕೊಹ್ಲಿ ವ್ಯಕ್ತಪಡಿಸಿದರು. ನಾನು ಬೇರೆ ಬೇರೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇನೆ. ಇದೀಗ ನಮ್ಮ ಮಧ್ಯಮ ಕ್ರಮಾಂಕ ಅತ್ಯುತ್ತಮವಾಗಿದೆ. ಟಿ20 ಕ್ರಿಕೆಟ್ ನಲ್ಲಿ ತಂಡದ ಇಬ್ಬರು ಅತ್ಯುತ್ತಮ ಆಟಗಾರರು ಎಷ್ಷು ಹೊತ್ತು ಆಡುತ್ತಾರೆ ಎನ್ನುವುದು ಮುಖ್ಯವಾಗುತ್ತದೆ. ಹಾಗಾಗಿ ನಾನು ರೋಹಿತ್ ಜೊತೆ ಇನ್ನಷ್ಟು ಟಿ20 ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಲು ಉತ್ಸುಕನಾಗಿದ್ದೇನೆ ಎಂದರು.
ಇದನ್ನೂ ಓದಿ: ಮನೆಯಂಗಳದ ಗಿಡ ಕಿತ್ತ ತಪ್ಪಿಗೆ ಬಾಲಕಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟ ದುರುಳ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ