ಆಸ್ಟ್ರೇಲಿಯನ್ ಓಪನ್ಗೆ ಕಾಡ್ಗಿಚ್ಚಿನ ಕಂಟಕ
Team Udayavani, Jan 11, 2020, 11:17 PM IST
ಮೆಲ್ಬರ್ನ್: ವರ್ಷಾರಂಭದ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ಸ್ಲಾಮ್ ಟೆನಿಸ್ ಕೂಟಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಇದಕ್ಕೆ ಕಾಡ್ಗಿಚ್ಚಿನ ಬಿಸಿ ತಟ್ಟಿದೆ. ವಾತಾವರಣ ತಿಳಿಯಾಗದೇ ಹೋದರೆ ಈ ಪ್ರತಿಷ್ಠಿತ ಕೂಟವನ್ನೇ ಸಂಘಟಕರು ರದ್ದು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆಸೀಸ್ ಮಾಧ್ಯಮಗಳಲ್ಲಿ ಇಂಥದೊಂದು ಸುದ್ದಿ ಬಿತ್ತರಗೊಂಡಿದೆ.
ಸದ್ಯದ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯದ ವಾತಾವರಣವಿಡೀ ಕಲುಷಿತ ಗೊಂಡಿದೆ. ಉಸಿರಾಟಕ್ಕೆ ತೀವ್ರ ತೊಂದರೆ ಯಾಗುತ್ತಿದೆ. ಹೀಗಿರುವಾಗ ಜ. 20ರಿಂದ ಟೆನಿಸ್ ಕೂಟವನ್ನು ಆಯೋಜಿಸುವುದು ಅಸಾಧ್ಯ ಎನ್ನಲಾಗಿದೆ. ಸದ್ಯ ಕಾಡ್ಗಿಚ್ಚಿಗೆ 26 ಮಂದಿ ಬಲಿಯಾಗಿದ್ದಾರೆ. 80 ಸಾವಿರಕ್ಕೂ ಹೆಚ್ಚು ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶ ಸುಟ್ಟು ಹೋಗಿದೆ. ಲಕ್ಷಾಂತರ ವನ್ಯ ಜೀವಿಗಳು ಸುಟ್ಟು ಕರಕಲಾಗಿವೆ.
ಶುದ್ಧ ಗಾಳಿ ಇಲ್ಲ…
ಆಸ್ಟ್ರೇಲಿಯದ ವಾತಾವರಣದಲ್ಲಿ ಈಗ ಉಸಿರಾಡಲು ಬೇಕಾಗಿರುವ ಶುದ್ಧ ಗಾಳಿ ಇಲ್ಲ. ಇದು ಆಟಗಾರರಿಗೆ, ಸಿಬಂದಿಗೆ ಹಾಗೂ ಕೂಟವನ್ನು ವೀಕ್ಷಿಸಲು ಬರುವ ವೀಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಸಿಡ್ನಿ ಹಾಗೂ ಕ್ಯಾನ್ಬೆರಾದಲ್ಲಿ ಉಂಟಾಗಿರುವ ಮಾಲಿನ್ಯದ ತೀವ್ರತೆ, ಕೂಟದ ತಾಣವಾದ ಮೆಲ್ಬರ್ನ್ನಲ್ಲಿ ಇಲ್ಲವಾದರೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸಂಘಟಕರು ಚಿಂತನೆ ನಡೆಸಿದ್ದಾರೆ.
“ವಿಕ್ಟೋರಿಯಾದಲ್ಲಿ ಇನ್ನೂ ಕಾಡ್ಗಿಚ್ಚು ನಂದಿಲ್ಲ. ಇನ್ನೂ ಒಂದು ವಾರದ ಕಾಲಾವಕಾಶ ಇದೆ. ಬೆಂಕಿಯ ತೀವ್ರತೆ ಕ್ರಮೇಣ ಕಡಿಮೆಯಾಗುವ, ವಾತಾವರಣ ತಿಳಿಯಾಗುವ ನಿರೀಕ್ಷೆ ಇದೆ. ಕೂಟವನ್ನು ಆಯೋಜಿಸುವ ವಿಶ್ವಾಸವಿದೆ’ ಎಂಬುದು ಆಸ್ಟ್ರೇಲಿಯನ್ ಓಪನ್ ಸಿಇಒ ಗ್ರೆಗ್ ಟಿಲ್ಲೆ ಅವರ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್