ವಿಂಬಲ್ಡನ್‌: ಆ್ಯಂಡಿ ಮರ್ರೆ ಪ್ರೀ ಕ್ವಾರ್ಟರ್‌ಗೆ


Team Udayavani, Jul 9, 2017, 3:05 AM IST

AP7_8_2017_000123A.jpg

ಲಂಡನ್‌: ತೀವ್ರ ಸ್ಪರ್ಧೆಯಿಂದ ಕೂಡಿದ ಪಂದ್ಯದಲ್ಲಿ ವಿಶ್ವ ನಂ.1 ಆ್ಯಂಡಿ ಮರ್ರೆ ವಿಂಬಲ್ಡನ್‌ ಓಪನ್‌ನಲ್ಲಿ ಪ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್‌ನ 3ನೇ ಸುತ್ತಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್‌, ಇಂಗ್ಲೆಂಡ್‌ನ‌ ಮರ್ರೆ 6-2, 4-6, 6-1, 7-5ರಿಂದ ಇಟಲಿಯ ಫ್ಯಾಬಿಯೊ ಫಾಗ್ನಿನಿ ವಿರುದ್ಧ ಜಯ ಸಾಧಿಸಿದರು.

ಮೊದಲ ಸೆಟ್‌ ಅನ್ನು ಸುಲಭವಾಗಿ ಗೆದ್ದ ಮರ್ರೆಗೆ 2ನೇ ಸೆಟ್‌ನಲ್ಲಿ ಇಟಲಿ ಆಟಗಾರ ತಿರುಗೇಟು ನೀಡಿದರು. ಹೀಗಾಗಿ ಈ ಹಂತದಲ್ಲಿ 1-1ರಿಂದ ಸಮಬಲ ಸಾಧಿಸಿದರು. ಆದರೆ ನಂತರದ 2 ಸೆಟ್‌ಗಳಲ್ಲಿ ಭರ್ಜರಿ ಹೋರಾಟ ಪ್ರದರ್ಶಿಸಿದ ಮರ್ರೆ ಎರಡೂ ಸೆಟ್‌ ವಶಪಡಿಸಿಕೊಂಡು ಪ್ರೀ ಕ್ವಾರ್ಟರ್‌ಗೆ ಲಗ್ಗೆ ಹಾಕಿದರು. ಉಳಿದಂತೆ ಪುರುಷರ ಸಿಂಗಲ್ಸ್‌ನಲ್ಲಿ ಕೆನಡಾದ ಮಿಲೊಸ್‌ ರಾನಿಕ್‌, ಬಲ್ಗೇರಿಯಾದ ಗ್ರೆಗರ್‌ ಡಿಮಿಟ್ರೊವ್‌ ಪ್ರೀ ಕ್ವಾರ್ಟರ್‌ಗೆ ಪ್ರವೇಶಿಸಿದ್ದಾರೆ.

ಏಂಜಲಿಕ್‌, ಕುಜ್ನೆತೊವಾಗೆ ಗೆಲುವು: ಮಹಿಳಾ ಸಿಂಗಲ್ಸ್‌ನಲ್ಲಿ ವಿಶ್ವ ನಂ.1 ಶ್ರೇಯಾಂಕಿತ ಆಟಗಾರ್ತಿ ಏಂಜಲಿಕ್‌ ಕೆರ್ಬರ್‌, ರಷ್ಯಾದ ಸ್ವೆಟ್ಲಾನಾ ಕುಜ್ನೆತೊÕವಾ, ಗಾರ್ಬಿನ್‌ ಮುಗುರುಜಾ ಪ್ರೀ ಕ್ವಾರ್ಟರ್‌ ಪ್ರವೇಶಿಸಿದ್ದಾರೆ. 3ನೇ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ಏಂಜಲಿಕ್‌ ಕೆರ್ಬರ್‌ 4-6, 7-6(7-2), 6-4 ರಿಂದ ಅಮೆರಿಕದ ಸೆಲ್ಬಿ ರೋಜರ್ಸ್‌ ವಿರುದ್ಧ ಜಯ ಸಾಧಿಸಿದರು. ಮತ್ತೂಂದು ಪಂದ್ಯದಲ್ಲಿ ರಷ್ಯಾದ ಸ್ವೆಟ್ಲಾನಾ ಕುಜ್ನೆತೊÕವಾ 6-4, 6-0ದಿಂದ ಸ್ಲೊವೇನಿಯಾದ ಪೊಲೊನಾ ಹರ್ಕಾಗ್‌ ವಿರುದ್ಧ ಗೆದ್ದರು. ಸ್ಪೇನಿನ ಗಾರ್ಬಿನ್‌ ಮುಗುರುಜಾ 6-2, 6-2 ರಿಂದ ರೊಮೇನಿಯಾದ ಸುರಾನಾ ಕ್ರಿಸ್ಟಿನಾ ವಿರುದ್ಧ ಗೆಲುವು ಪಡೆದರು.

ಮಹಿಳಾ ಡಬಲ್ಸ್‌: ಸಾನಿಯಾ ಜೋಡಿ ಪ್ರೀ ಕ್ವಾರ್ಟರ್‌ಗೆ
ಮಹಿಳಾ ಡಬಲ್ಸ್‌ನಲ್ಲಿ ಭಾರತದ ಸಾನಿಯಾ ಮಿರ್ಜಾ ಮತ್ತು ಬೆಲ್ಜಿಯನ್‌ ಕರ್ಸ್ಟನ್‌ ಫ್ಲಿಪೆRನ್ಸ್‌ ಜೋಡಿ ಪ್ರೀಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಭಾರತ ಮತ್ತು ಬೆಲ್ಜಿಯನ್‌ ಜೋಡಿ 6-3, 3-6, 6-4ರಿಂದ ಇಂಗ್ಲೆಂಡ್‌ ಜೋಡಿ ನವೋಮಿ ಬ್ರಾಡಿ ಮತ್ತು ಹೆದರ್‌ ವಾಟ್ಸನ್‌ ವಿರುದ್ಧ ಜಯ ಸಾಧಿಸಿದರು.

ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಾನಿಯಾ ಜೋಡಿ ಸುಲಭವಾಗಿ ಮೊದಲ ಸೆಟ್‌ ವಶಪಡಿಸಿಕೊಂಡಿತು. ಆದರೆ 2ನೇ ಸೆಟ್‌ನಲ್ಲಿ ಕೆಲವೊಂದು ಅನಗತ್ಯ ತಪ್ಪುಗಳನ್ನು ಮಾಡುವ ಮೂಲಕ ಭಾರತ, ಬೆಲ್ಜಿಯನ್‌ ಜೋಡಿ ಕಳೆದುಕೊಂಡಿತು. ಹೀಗಾಗಿ ಮೂರನೇ ಸೆಟ್‌ ನಿರ್ಣಾಯಕವಾಗಿತ್ತು. ಈ ಹಂತದಲ್ಲಿ ಎಚ್ಚರಿಕೆಯ ಆಟವನ್ನು ಪ್ರದರ್ಶಿಸಿದ ಸಾನಿಯಾ ಜೋಡಿ ಭರ್ಜರಿ ಸರ್ವ್‌, ಎದುರಾಳಿಗಳ ಸರ್ವ್‌ಗೆ ತಕ್ಕ ತಿರುಗೇಟು ನೀಡುವ ಮೂಲಕ ಅಂಕವನ್ನು ಹೆಚ್ಚಿಸಿಕೊಂಡರು. ಅಂತಿಮವಾಗಿ ಸಾನಿಯಾ ಜೋಡಿ 3ನೇ ಸೆಟ್‌ ಅನ್ನು 6-4ರಿಂದ ವಶಪಡಿಸಿಕೊಂಡು ಮೇಲುಗೈ ಸಾಧಿಸಿದರು. ಇಂಗ್ಲೆಂಡ್‌ ಜೋಡಿ ಅಂತಿಮ ಸೆಟ್‌ನಲ್ಲಿ ಹೋರಾಟ ನೀಡಿದರೂ ಕೆಲವೊಂದು ತಪ್ಪುಗಳಿಂದ ಸೆಟ್‌ ಕಳೆದುಕೊಂಡಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.