ಟಿ20 ಸರಣಿಯ ಮೊದಲೆರಡು ಪಂದ್ಯಗಳಿಗೆ ವಿಂಡೀಸ್‌ ತಂಡ

ನಾರಾಯಣ್‌, ಪೊಲಾರ್ಡ್‌ಗೆ ಕರೆ

Team Udayavani, Jul 24, 2019, 6:57 AM IST

narayan-polard

ಸೈಂಟ್‌ ಜಾನ್ಸ್‌ (ಆಂಟಿಗ): ಅನುಭವಿಗಳಾದ ಸುನೀಲ್‌ ನಾರಾಯಣ್‌ ಮತ್ತು ಕೈರನ್‌ ಪೊಲಾರ್ಡ್‌ ಅವರನ್ನು ಪ್ರವಾಸಿ ಭಾರತ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಿಗೆ ವೆಸ್ಟ್‌ ಇಂಡೀಸ್‌ನ 14 ಸದಸ್ಯರ ತಂಡಕ್ಕೆ ಕರೆಸಿಕೊಳ್ಳಲಾಗಿದೆ.

ಅಮೆರಿಕದ ಫ್ಲೋರಿಡಾದಲ್ಲಿ ಆ. 3ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಬೊÅವಾರ್ಡ್‌ ಕೌಂಟಿ ಕ್ರೀಡಾಂಗಣದಲ್ಲಿ ಆ. 3 ಮತ್ತು 4ರಂದು ಮೊದಲೆರಡು ಪಂದ್ಯಗಳು ನಡೆಯಲಿವೆ.

ಟಿ20 ಸರಣಿಯ ಬಳಿಕ ಭಾರತವು ವೆಸ್ಟ್‌ ಇಂಡೀಸ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಟೆಸ್ಟ್‌ ಆಡಲಿದೆ.

ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಅಂತೋನಿ ಬ್ರ್ಯಾಂಬಲ್‌ ತಂಡದ ಲ್ಲಿರುವ ಏಕೈಕ ಹೊಸ ಆಟಗಾರರಾಗಿ ದ್ದಾರೆ. ಸರಣಿಯ ಮೂರನೇ ಪಂದ್ಯ ಆ. 6ರಂದು ಗಯಾನ ನ್ಯಾಶನಲ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಗತ್ಯಬಿದ್ದರೆ ಆಯ್ಕೆ ಸಮಿತಿ ತಂಡದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ವಿಂಡೀಸ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಬ್ರಾತ್‌ವೇಟ್‌ ನಾಯಕ
ವಿಂಡೀಸ್‌ ತಂಡವನ್ನು ಕಾರ್ಲೋಸ್‌ ಬ್ರಾತ್‌ವೇಟ್‌ ಮುನ್ನಡೆಸಲಿದ್ದಾರೆ. ಆಲ್‌ರೌಂಡರ್‌ ಆ್ಯಂಡ್ರೆ ರಸೆಲ್‌ ಅವರನ್ನು ಕೂಡ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಆದರೆ ಅವರು ಸರಣಿ ಮೊದಲು ನಡೆಯುವ ಫಿಟ್‌ನೆಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗ ಬೇಕಾಗಿದೆ. ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಉದ್ದೇಶದಿಂದ ರಸೆಲ್‌ ವಿಶ್ವಕಪ್‌ನ ಆರಂಭದಲ್ಲಿಯೇ ತಂಡವನ್ನು ತ್ಯಜಿಸಿದ್ದರು.

ಕ್ರಿಸ್‌ ಗೇಲ್‌ ಇಲ್ಲ
ಕೆನಡದಲ್ಲಿ ನಡೆಯಲಿರುವ ಟಿ20 ಕೂಟದಲ್ಲಿ ಆಡಲು ಒಪ್ಪಿಕೊಂಡ ಕಾರಣ ಭಾರತ ವಿರುದ್ಧದ ಸರಣಿಗೆ ಲಭ್ಯವಿಲ್ಲವೆಂದು ಕ್ರಿಸ್‌ ಗೇಲ್‌ ಸೂಚಿಸಿದ್ದಾರೆ.
ಆಸ್ಟ್ರೇಲಿಯದಲ್ಲಿ ಮುಂದಿನ ವರ್ಷ ಐಸಿಸಿ ಟಿ20 ವಿಶ್ವಕಪ್‌ ನಡೆಯುವ ಕಾರಣ ತಂಡವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಯುವ ಮತ್ತು ಅನುಭವಿ ಆಟಗಾರರನ್ನು ಒಳಗೊಂಡ ಸಮತೋಲಿತ ತಂಡ. ನಾವು ಕೇವಲ ಭಾರತದ ವಿರುದ್ಧದ ಸರಣಿಗಾಗಿ ತಂಡವನ್ನು ಆಯ್ಕೆ ಮಾಡಿಲ್ಲ. ಬದಲಾಗಿ ಮುಂಬರುವ ಟಿ20 ವಿಶ್ವಕಪ್‌ಗಾಗಿ ತಂಡವನ್ನು ಸಿದ್ಧಪಡಿಸುತ್ತಿದ್ದೇವೆ. ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರಿಯಾದ ಯೋಜನೆ ರೂಪಿಸಿಕೊಳ್ಳುತ್ತಿದ್ದೇವೆ ಎಂದು ಹೇಯ್ನ$Õ ವಿವರಿಸಿದರು.

ಐಪಿಎಲ್‌ ಅನುಭವ
ತಂಡಕ್ಕೆ ಆಯ್ಕೆ ಮಾಡಿದ ಹೆಚ್ಚಿನ ಆಟಗಾರರು ಐಪಿಎಲ್‌ನಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಅವರೆಲ್ಲ ಭಾರತೀಯ ಆಟಗಾರರ ಬಗ್ಗೆ ತಿಳಿದಿದ್ದಾರೆ. ತವರಿನಲ್ಲಿ ಆಡುತ್ತಿರುವ ಕಾರಣ ನಾವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಸ್ಪಿನ್ನರ್‌ ನಾರಾಯಣ್‌ ಟಿ20ಯಲ್ಲಿ ವಿಂಡೀಸ್‌ ಪರ 2 ವರ್ಷ ಹಿಂದೆ ಆಡಿದ್ದರೆ ಪೊಲಾರ್ಡ್‌ ಕಳೆದ ನವೆಂಬರ್‌ನಲ್ಲಿ ಭಾರತ ಪ್ರವಾಸದ ವೇಳೆ ಆಡಿದ್ದರು. ಅವರಿಬ್ಬರು ಟಿ20ಯಲ್ಲಿ ಅಪಾರ ಅನುಭವ ಹೊಂದಿದ್ದಾರೆ ಎಂದು ಹೇಯ್ನ$Õ ಹೇಳಿದರು.

ವಿಂಡೀಸ್‌ ಟಿ20 ತಂಡ
ಕಾರ್ಲೋಸ್‌ ಬ್ರಾತ್‌ವೇಟ್‌ (ನಾಯಕ), ಸುನೀಲ್‌ ನಾರಾಯಣ್‌, ಕೀಮೊ ಪಾಲ್‌, ಖಾರಿ ಪೀರ್‌, ಕೈರನ್‌ ಪೊಲಾರ್ಡ್‌, ನಿಕೋಲಾಸ್‌ ಪೂರನ್‌, ರೋಮನ್‌ ಪೊವೆಲ್‌, ಆ್ಯಂಡ್ರೆ ರಸೆಲ್‌, ಒಶಾನೆ ಥಾಮಸ್‌, ಅಂತೋನಿ ಬ್ರ್ಯಾಂಬಲ್‌, ಜಾನ್‌ ಕ್ಯಾಂಬೆಲ್‌, ಶೆಲ್ಡನ್‌ ಕಾಟ್ರೆಲ್‌ ಶಿಮ್ರಾನ್‌ ಹೆಟ್‌ಮೈರ್‌, ಎವಿನ್‌ ಲೂವಿಸ್‌.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.