ರಾಹುಲ್‌-ಧವನ್‌ ಓಪನಿಂಗ್‌: ವನ್‌ಡೌನ್‌ನಲ್ಲಿ ಶುಭಮನ್‌ ಗಿಲ್‌


Team Udayavani, Aug 16, 2022, 6:30 AM IST

ರಾಹುಲ್‌-ಧವನ್‌ ಓಪನಿಂಗ್‌: ವನ್‌ಡೌನ್‌ನಲ್ಲಿ ಶುಭಮನ್‌ ಗಿಲ್‌

ಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಈಗಾಗಲೇ ಹರಾರೆಗೆ ಆಗಮಿಸಿರುವ ಭಾರತ ತಂಡ ಮೊದಲ ಸುತ್ತಿನ ಅಭ್ಯಾಸವನ್ನೂ ಯಶಸ್ವಿಯಾಗಿ ಮುಗಿಸಿದೆ. ಗುರುವಾರ ಮೊದಲ ಪಂದ್ಯ ನಡೆಯಲಿದ್ದು, ಟೀಮ್‌ ಕಾಂಬಿನೇಶನ್‌ ಹೇಗಿದ್ದೀತು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಕೆ.ಎಲ್‌. ರಾಹುಲ್‌ ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ಮರಳಿದ್ದರಿಂದ ಅವರು ಶಿಖರ್‌ ಧವನ್‌ ಜತೆ ಇನ್ನಿಂಗ್ಸ್‌ ಆರಂಭಿಸುವುದು ಖಚಿತ. ಆಗ ಮತ್ತೋರ್ವ ಓಪನರ್‌ ಶುಭಮನ್‌ ಗಿಲ್‌ ಅವರನ್ನು 3ನೇ ಸ್ಥಾನದಲ್ಲಿ ಆಡಿಸಬೇಕು ಎಂಬುದಾಗಿ ಮಾಜಿಗಳನೇಕರು ಸಲಹೆ ನೀಡಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ, ಆಯ್ಕೆ ಸಮಿತಿಯ ಮಾಜಿ ಸದಸ್ಯ ದೇವಾಂಗ್‌ ಗಾಂಧಿ ಇಂಥದೊಂದು ಸಲಹೆ ನೀಡಿದ್ದು, ಇದನ್ನು ಮತ್ತೋರ್ವ ಮಾಜಿ ಕ್ರಿಕೆಟಿಗ ದೀಪ್‌ ದಾಸ್‌ಗುಪ್ತ ಅನುಮೋದಿಸಿದ್ದಾರೆ.

ವಿಂಡೀಸ್‌ ವಿರುದ್ಧ ಯಶಸ್ಸು
ಕಳೆದ ವೆಸ್ಟ್‌ ಇಂಡೀಸ್‌ ಎದುರಿನ ಸರಣಿ ವೇಳೆ ಆರಂಭಿಕನಾಗಿ ಇಳಿದಿದ್ದ ಶುಭಮನ್‌ ಗಿಲ್‌ ಮೂರೂ ಪಂದ್ಯಗಳಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಕ್ರಮವಾಗಿ 64, 43 ಮತ್ತು ಅಜೇಯ 98 ರನ್‌ ಬಾರಿಸಿ ಭಾರತದ ಸರಣಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಗಿಲ್‌ ಆಡುವ ಬಳಗದ ಖಾಯಂ ಸದಸ್ಯರ ಯಾದಿಯಲ್ಲಿದ್ದಾರೆ. 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಗಿಲ್‌ ಅವರ ಫಾರ್ಮ್ ಭಾರತದ ಪಾಲಿಗೆ ನಿರ್ಣಾಯಕ.

ಮುಂದೊಂದು ದಿನ ರೋಹಿತ್‌ ಶರ್ಮ ಮರಳಿದಾಗ ಅವರು ಶಿಖರ್‌ ಧವನ್‌ ಜತೆ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ರೋಹಿತ್‌-ಧವನ್‌ ಭಾರತ ತಂಡದ ಮೊದಲ ಆಯ್ಕೆಯ ಓಪನರ್. ಆಗ ಕೆ.ಎಲ್‌. ರಾಹುಲ್‌ ಮಧ್ಯಮ ಕ್ರಮಾಂಕದಲ್ಲಿ ಇಳಿಯಬೇಕಾಗುತ್ತದೆ. ಗಿಲ್‌ ಮೂರರಲ್ಲೇ ಉಳಿಯುವರು. ಅಕಸ್ಮಾತ್‌ ಮೊದಲ ವಿಕೆಟ್‌ ಬೇಗನೇ ಉರುಳಿದರೆ ಆಗ ಗಿಲ್‌ ಓಪನಿಂಗ್‌ ಬಂದಂತೆಯೇ ಆಗುತ್ತದೆ ಎಂಬುದು ದೇವಾಂಗ್‌ ಗಾಂಧಿ ಅವರ ತರ್ಕ.

ಇಲ್ಲಿ ಶಿಖರ್‌ ಧವನ್‌ ಫಾರ್ಮ್ ಕೂಡ ನಿರ್ಣಾಯಕ ಪಾತ್ರ ವಹಿಸಲಿದೆ ಎಂಬುದು ದೀಪ್‌ ದಾಸ್‌ಗುಪ್ತ ಅವರ ಲೆಕ್ಕಾಚಾರ. ಧವನ್‌ ಫಾರ್ಮ್ನಲ್ಲಿಲ್ಲವಾದರೆ ಗಿಲ್‌ ಇನ್ನಿಂಗ್ಸ್‌ ಆರಂಭಿಸುವುದು ಅನಿವಾರ್ಯ
ವಾಗುತ್ತದೆ. 2023ರ ವಿಶ್ವಕಪ್‌ಗೆ ಆರಂಭಿಕ ನಾಗುವ ನಿಟ್ಟಿನಲ್ಲಿ ಗಿಲ್‌ ಬೆಳೆಯುತ್ತಿದ್ದಾರೆ ಎಂದರು.

 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.