ವನಿತಾ ಟೀಮ್‌ ಬ್ಯಾಡ್ಮಿಂಟನ್‌ ಭಾರತಕ್ಕೆ ಕ್ವಾರ್ಟರ್‌ ಫೈನಲ್‌ ಆಘಾತ


Team Udayavani, Aug 21, 2018, 6:20 AM IST

pti8202018000053a.jpg

ಜಕಾರ್ತಾ: ಏಶ್ಯನ್‌ ಗೇಮ್ಸ್‌ ವನಿತಾ ಟೀಮ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಜಪಾನ್‌ ವಿರುದ್ಧ ಎಡವಿದ ಭಾರತ ಪದಕ ರೇಸ್‌ನಿಂದ ಹೊರಬಿದ್ದಿದೆ. ಸೋಮವಾರ ನಡೆದ ಮುಖಾಮುಖೀಯಲ್ಲಿ ಜಪಾನ್‌ 3-1 ಅಂತರದಿಂದ ಭಾರತವನ್ನು ಮಣಿಸಿ ಸೆಮಿಫೈನಲ್‌ಗೆ ನೆಗೆಯಿತು.

ಕಳೆದ ಏಶ್ಯಾಡ್‌ನ‌ಲ್ಲಿ ಕಂಚಿನ ಪದಕ ಜಯಿಸಿದ್ದ ವನಿತಾ ತಂಡದ ಮೇಲೆ ಈ ಬಾರಿ ಇನ್ನೂ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಪಿ.ವಿ. ಸಿಂಧು ಹೊರತುಪಡಿಸಿ ಉಳಿದವರೆಲ್ಲರೂ ಸೋಲಿನ ಸುಳಿಗೆ ಸಿಲುಕಿದರು. ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ, ಕೂಟದ ಅಗ್ರ ಶ್ರೇಯಾಂಕಿತ ತಂಡವೂ ಆಗಿರುವ ಜಪಾನ್‌ ತನ್ನ ಛಾತಿಗೆ ತಕ್ಕ ಪ್ರದರ್ಶನ ನೀಡಿತು.

ಗೆದ್ದದ್ದು ಸಿಂಧು ಮಾತ್ರ
ಆರಂಭಿಕ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು 21-18, 21-19 ಅಂತರದಿಂದ ಅಕಾನೆ ಯಮಗುಚಿ ಅವರನ್ನು ಮಣಿಸಿ ಭಾರತಕ್ಕೆ 1-0 ಮುನ್ನಡೆ ಒದಗಿಸಿದರು. ಆದರೆ ಭಾರತದ ಗೆಲುವಿನ ಆಟ ಈ ಪಂದ್ಯಕ್ಕಷ್ಟೇ ಸೀಮಿತಗೊಂಡಿತು. ತಿರುಗಿ ಬಿದ್ದ ಜಪಾನ್‌ ಮುಂದಿನ ಮೂರೂ ಪಂದ್ಯಗಳಲ್ಲಿ ಗೆದ್ದು ಮುನ್ನಡೆಯಿತು.ವನಿತಾ ಡಬಲ್ಸ್‌ನಲ್ಲಿ ಎನ್‌. ಸಿಕ್ಕಿ ರೆಡ್ಡಿ-ಆರತಿ ಸುನೀಲ್‌ ಅವರನ್ನು ಯುಕಿ ಫ‌ುಕುಶಿಮಾ-ಸಯಾಕಾ ಹಿರೋಟಾ 21-15, 21-6 ಅಂತರದಿಂದ ಮಣಿಸಿದರು. ಸ್ಪರ್ಧೆ 1-1 ಸಮಬಲಕ್ಕೆ ಬಂತು.

ಸೈನಾ ನೆಹ್ವಾಲ್‌ಗೆ ಸೋಲು
ನಿರ್ಣಾಯಕ ದ್ವಿತೀಯ ಸಿಂಗಲ್ಸ್‌ನಲ್ಲಿ ನಜೋಮಿ ಒಕುಹರಾ ವಿರುದ್ಧ  ಆಡಲಿಳಿದ ಸೈನಾ ನೆಹ್ವಾಲ್‌ ಮೇಲೆ ವಿಪರೀತ ನಿರೀಕ್ಷೆ ಇತ್ತು. ಆದರೆ 3 ಗೇಮ್‌ಗಳ ಕಾದಾಟ ನಡೆಸಿದರೂ ಗೆಲುವು ಒಲಿಯಲಿಲ್ಲ. ಸೈನಾ 11-21, 25-23, 16-21 ಅಂತರದ ಸೋಲು ಕಾಣಬೇಕಾಯಿತು.

“ಮಸ್ಟ್‌ ವಿನ್‌’ ಪಂದ್ಯದಲ್ಲಿ ಪಿ.ವಿ. ಸಿಂಧು-ಅಶ್ವಿ‌ನಿ ಪೊನ್ನಪ್ಪ ಡಬಲ್ಸ್‌ ಆಡಲಿಳಿದರು. ಆದರೆ ಒಲಿಂಪಿಕ್‌ ಚಾಂಪಿಯನ್ಸ್‌ ಮಿಸಾಕಿ ಮತ್ಸುಟೊಮೊ-ಅಯಾಕಾ ತಕಹಾಶಿ ವಿರುದ್ಧ ಇವರ ಆಟ ನಡೆಯಲಿಲ್ಲ. 13-21, 12-21 ಅಂತರದ ಸೋಲುಂಡ ಸಿಂಧು-ಅಶ್ವಿ‌ನಿ ಭಾರತದ ಹೋರಾಟವನ್ನು ನಿರಾಶಾದಾಯಕವಾಗಿ ಮುಗಿಸಿದರು.

“ಜಪಾನ್‌ ವಿರುದ್ಧ ಮೊದಲ ಪಂದ್ಯವಾಡುವುದು ಯಾವತ್ತೂ ಅತ್ಯಂತ ಕಠಿನ ಸವಾಲು. ಗೆಲುವಿನ ಆರಂಭವನ್ನೇ ಪಡೆದೆವು. ಡಬಲ್ಸ್‌ ಆಟಗಾರ್ತಿಯರ ಪ್ರದರ್ಶನವೂ ಉತ್ತಮ ಮಟ್ಟದಲ್ಲಿತ್ತು. ಸೈನಾ ಕೂಡ ನೂರು ಪ್ರತಿಶತ ಸಾಮರ್ಥ್ಯ ತೋರಿದರು. ಆದರೆ ತಾಂತ್ರಿಕವಾಗಿ ಜಪಾನಿಯರ ಆಟ ಮೇಲ್ಮಟ್ಟದಲ್ಲಿತ್ತು’ ಎಂಬುದಾಗಿ ಸಿಂಧು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.