ವನಿತಾ ಕ್ರಿಕೆಟ್‌ ಕೋಚ್‌; ಇಂದು ಸಂದರ್ಶನ


Team Udayavani, Dec 20, 2018, 6:00 AM IST

women-cricket-coach-interview-today.jpg

ಮುಂಬಯಿ: ಭಾರೀ ವಿವಾದವನ್ನು ಸೃಷ್ಟಿಸಿರುವ ಭಾರತೀಯ ವನಿತಾ ಕ್ರಿಕೆಟ್‌ ತಂಡದ ಕೋಚ್‌ ಹುದ್ದೆಗೆ ಗುರುವಾರ ಸಂದರ್ಶನ ನಡೆಯಲಿದೆ. ಒಟ್ಟು 28 ಮಂದಿ ಉಮೇದುವಾರರು ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಈ ಯಾದಿಯನ್ನೀಗ ಕಿರಿದುಗೊಳಿಸಲಾಗಿದೆ.

ಕಿರಿದುಗೊಂಡ ಈ ಪಟ್ಟಿಯಲ್ಲಿ ವಿವಾದಕ್ಕೆ ಕಾರಣರಾದ ರಮೇಶ್‌ ಪೊವಾರ್‌ ಕೂಡ ಇರುವುದು ವಿಶೇಷ. ಉಳಿದಂತೆ 10 ಮಂದಿ ವಿದೇಶಿ ಅಭ್ಯರ್ಥಿಗಳಿದ್ದಾರೆ. ಇವರಲ್ಲಿ ಗ್ಯಾರಿ ಕರ್ಸ್ಟನ್‌, ಹರ್ಶಲ್‌ ಗಿಬ್ಸ್, ಟ್ರೆಂಟ್‌ ಜಾನ್‌ಸ್ಟನ್‌, ಡಿಮಿಟ್ರಿ ಮಸ್ಕರೇನಸ್‌ ಪ್ರಮುಖರು. ಡಬ್ಲ್ಯು.ವಿ. ರಾಮನ್‌, ವೆಂಕಟೇಶ ಪ್ರಸಾದ್‌, ಮನೋಜ್‌ ಪ್ರಭಾಕರ್‌ ಭಾರತದ ಉಮೇದುವಾರರಾಗಿದ್ದಾರೆ. “ಶಾರ್ಟ್‌ ಲಿಸ್ಟ್‌’ನಲ್ಲಿ ಒಟ್ಟು ಎಷ್ಟು ಮಂದಿ ಅಭ್ಯರ್ಥಿಗಳಿದ್ದಾರೆ ಎಂಬದು ಖಚಿತಪಟ್ಟಿಲ್ಲ.

ಅಡ್‌-ಹಾಕ್‌ ಸಮಿತಿಯಿಂದ ಸಂದರ್ಶನ
ಭಾರತದ ಮಾಜಿ ಕ್ರಿಕೆಟಿಗರಾದ ಕಪಿಲ್‌ದೇವ್‌, ಅಂಶುಮನ್‌ ಗಾಯಕ್ವಾಡ್‌ ಮತ್ತು ಶಾಂತಾ ರಂಗಸ್ವಾಮಿ ಅವರನ್ನೊಳಗೊಂಡ ಅಡ್‌-ಹಾಕ್‌ ಸಮಿತಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ. ವಿದೇಶಿ ಆಟಗಾರರು ಸ್ಕೈಪ್‌ ಮೂಲಕ ಸಂದರ್ಶನ ನೀಡಿದರೆ, ಭಾರತದ ಅಭ್ಯರ್ಥಿಗಳು ಸ್ಥಳಕ್ಕೆ ಹಾಜರಾಗುವರು.

“ದೇಶದ ಖ್ಯಾತ ಮಾಜಿ ಆಟಗಾರರು ಅಡ್‌-ಹಾಕ್‌ ಸಮಿತಿಯ ಸದಸ್ಯರಾಗಿದ್ದು, ಇವರು ಸೂಕ್ತ ಅಭ್ಯರ್ಥಿಯನ್ನು ಆರಿಸುವರೆಂಬ ವಿಶ್ವಾಸವಿದೆ’ ಎಂಬಿದಾಗಿ ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ರಾಯ್‌-ಎಡುಲ್ಜಿ ಭಿನ್ನಾಭಿಪ್ರಾಯ
ಸರ್ವೋಚ್ಚ ನ್ಯಾಯಾಲಯದಿಂದ ನಿಯೋಜಿಸಲ್ಪಟ್ಟ ಆಡಳಿತಾಧಿಕಾರಿಗಳ ಸಮಿತಿಯ (ಸಿ.ಒ.ಎ.) ಅಧ್ಯಕ್ಷ ವಿನೋದ್‌ ರಾಯ್‌ ಮತ್ತು ಸದಸ್ಯೆ ಡಯಾನಾ ಎಡುಲ್ಜಿ ನಡುವೆ ಕೋಚ್‌ ಆಯ್ಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಕನಿಷ್ಠ ಮುಂದಿನ ತಿಂಗಳ ನ್ಯೂಜಿಲ್ಯಾಂಡ್‌ ಪ್ರವಾಸದ ವರೆಗಾದರೂ ರಮೇಶ್‌ ಪೊವಾರ್‌ ಅವರನ್ನೇ ಈ ಹುದ್ದೆಯಲ್ಲಿ ಮುಂದುವರಿಸಿ ಎಂಬುದಾಗಿ ಎಡುಲ್ಜಿ ಸಲಹೆ ಮಾಡಿದ್ದರು. ಆದರೆ ಈಗಾಗಲೇ ಅರ್ಜಿಗಳನ್ನು ಕರೆದಾಗಿದೆ, ಸಂದರ್ಶನದ ಮೂಲಕವೇ ಕೋಚ್‌ ಆಯ್ಕೆ ನಡೆಯಲಿ ಎಂಬುದು ರಾಯ್‌ ವಾದವಾಗಿತ್ತು.

ಭಾರತದ ಏಕದಿನ ತಂಡದ ನಾಯಕಿ, ಹಿರಿಯ ಆಟಗಾರ್ತಿ ಮಿಥಾಲಿ ರಾಜ್‌ ಅವರನ್ನು ಕಳೆದ ಟಿ20 ವಿಶ್ವಕಪ್‌ ಸೆಮಿಫೈನಲ್‌ ವೇಳೆ ವಿನಾ ಕಾರಣ ಹೊರಗಿರಿಸಿದ ಬಳಿಕ “ವನಿತಾ ಕ್ರಿಕೆಟ್‌ ರಾಜಕೀಯ’ ಬಯಲಾಗತೊಡಗಿತ್ತು. ಮಿಥಾಲಿ, ಪೊವಾರ್‌ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತ  ಮಾಧ್ಯಮಗಳಿಗೆ ಆಹಾರವಾಗಿದ್ದರು. ವಿಂಡೀಸ್‌ನಲ್ಲಿ ನಡೆದ ವಿಶ್ವಕಪ್‌ ಮುಗಿದ ಬೆನ್ನಲ್ಲೇ ಪೊವಾರ್‌ ಅವರ ಒಪ್ಪಂದದ ಅವಧಿ ಕೂಡ ಮುಗಿದಿತ್ತು. ಆದರೆ ಟಿ20 ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಮತ್ತು ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಅವರು ರಮೇಶ್‌ ಪೊವಾರ್‌ ಬೆಂಬಲಕ್ಕೆ ನಿಂತು, ಅವರನ್ನೇ ಕೋಚ್‌ ಹುದ್ದೆಯಲ್ಲಿ ಮುಂದುವರಿಸಬೇಕೆಂದು ಬಿಸಿಸಿಐಗೆ ಪತ್ರ ಬರೆದಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.