ವನಿತಾ ಟಿ20 ತ್ರಿಕೋನ ಸರಣಿ: ಭಾರತಕ್ಕೆ ಶರಣಾದ ವೆಸ್ಟ್‌ ಇಂಡೀಸ್‌

56 ರನ್‌ ಜಯ ; ಮಂಧನಾ, ಕೌರ್‌ ಅಜೇಯ ಅರ್ಧ ಶತಕ

Team Udayavani, Jan 24, 2023, 11:28 PM IST

ವನಿತಾ ಟಿ20 ತ್ರಿಕೋನ ಸರಣಿ: ಭಾರತಕ್ಕೆ ಶರಣಾದ ವೆಸ್ಟ್‌ ಇಂಡೀಸ್‌

ಈಸ್ಟ್‌ ಲಂಡನ್‌ (ದಕ್ಷಿಣ ಆಫ್ರಿಕಾ): ವನಿತಾ ಟಿ20 ತ್ರಿಕೋನ ಸರಣಿಯ ಮೊದಲ ಸುತ್ತಿನಲ್ಲಿ ಭಾರತ ಅಜೇಯವಾಗಿ ಉಳಿದಿದೆ. ಸೋಮ ವಾರ ರಾತ್ರಿ ನಡೆದ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ಗೆ 56 ರನ್ನುಗಳ ಸೋಲು ಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಟ್ಟಿಗೊಳಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಭಾರತ ಎರಡೇ ವಿಕೆಟಿಗೆ 167 ರನ್‌ ಪೇರಿಸಿತು. ಜವಾಬಿತ್ತ ವೆಸ್ಟ್‌ ಇಂಡೀಸ್‌ 4 ವಿಕೆಟಿಗೆ 111 ರನ್‌ ಮಾಡಿ ಶರಣಾಯಿತು. ಇದು ಭಾರತಕ್ಕೆ ಒಲಿದ ಸತತ 2ನೇ ಜಯವಾದರೆ, ವಿಂಡೀಸಿಗೆ ಎದುರಾದ ಸತತ 2ನೇ ಸೋಲು.

ಯಾಸ್ತಿಕಾ ಭಾಟಿಯಾ (18) ಮತ್ತು ಸ್ಮತಿ ಮಂಧನಾ ಪವರ್‌ ಪ್ಲೇಯಲ್ಲಿ ಅಷ್ಟೇನೂ ಬಿರುಸಿನ ಆಟ ಆಡಲಿಲ್ಲ. 5.5 ಓವರ್‌ಗಳಲ್ಲಿ ಬಂದದ್ದು 33 ರನ್‌ ಮಾತ್ರ. ಆಗ ಯಾಸ್ತಿಕಾ ವಿಕೆಟ್‌ ಬಿತ್ತು. ಅನಂತರ ಬಂದ ಹಲೀìನ್‌ ದೇವಲ್‌ 12 ರನ್ನಿಗೆ ಲೆಗ್‌ ಬಿಫೋರ್‌ ಆಗಿ ವಾಪಸಾದರು. ಹೀಗೆ 8.2 ಓವರ್‌ಗಳಲ್ಲಿ 52 ರನ್ನಿಗೆ 2 ವಿಕೆಟ್‌ ಉರುಳಿತು.

115 ರನ್‌ ಜತೆಯಾಟ
ಮುಂದಿನದು ಸ್ಮತಿ ಮಂಧನಾ- ಹರ್ಮನ್‌ಪ್ರೀತ್‌ ಕೌರ್‌ ಜೋಡಿಯ ಅಜೇಯ ಬ್ಯಾಟಿಂಗ್‌. 11.4 ಓವರ್‌ಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಇವರು ಮುರಿಯದ 3ನೇ ವಿಕೆಟಿಗೆ 115 ರನ್‌ ಪೇರಿಸಿದರು. ಮಂಧನಾ ಸರ್ವಾ ಧಿಕ 74 ರನ್‌ ಹೊಡೆದರು. 51 ಎಸೆತಗಳ ಈ ಆಕರ್ಷಕ ಆಟದಲ್ಲಿ 10 ಬೌಂಡರಿ ಹಾಗೂ ಇನ್ನಿಂಗ್ಸ್‌ನ
ಏಕೈಕ ಸಿಕ್ಸರ್‌ ಒಳಗೊಂಡಿತ್ತು. ದಕ್ಷಿಣ ಆಫ್ರಿಕಾ ವಿರುದ್ಧ ತಂಡವನ್ನು ಮುನ್ನಡೆಸಿದ್ದ ಮಂಧನಾ ಕೇವಲ 7 ರನ್ನಿಗೆ ಔಟಾಗಿದ್ದರು.

ಅನಾರೋಗ್ಯದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿಳಿಯದ ಕೌರ್‌ ಇಲ್ಲಿ 35 ಎಸೆತ ನಿಭಾಯಿಸಿ 56 ರನ್‌ ಬಾರಿಸಿದರು. ಸಿಡಿಸಿದ್ದು 8 ಬೌಂಡರಿ.

ವಿಂಡೀಸ್‌ ರಕ್ಷಣಾತ್ಮಕ ಆಟ
ಅಷ್ಟೇನೂ ಬಲಿಷ್ಠವಲ್ಲದ ವೆಸ್ಟ್‌ ಇಂಡೀಸ್‌ 168 ರನ್‌ ಬೆನ್ನಟ್ಟುವ ಸ್ಥಿತಿ ಯಲ್ಲಿರಲಿಲ್ಲ. ಕೆರಿಬಿಯನ್‌ ವನಿತೆ ಯರು ರನ್‌ ಚೇಸಿಂಗ್‌ ಬದಲು ರಕ್ಷಣಾತ್ಮಕ ಆಟಕ್ಕೆ ಮುಂದಾದರು. ಇತ್ತ ಭಾರತ ಕೂಡ ಬಿಗಿಯಾದ ಬೌಲಿಂಗ್‌ ಸಂಘಟಿಸಿತು. ದೀಪ್ತಿ ಶರ್ಮ 2 ವಿಕೆಟ್‌ ಉಡಾಯಿಸಿ ಹೆಚ್ಚಿನ ಯಶಸ್ಸು ಪಡೆದರು. ರಾಧಾ ಯಾದವ್‌ ಮತ್ತು ರಾಜೇಶ್ವರಿ ಗಾಯಕ್ವಾಡ್‌ 4 ಓವರ್‌ಗಳಲ್ಲಿ ಕ್ರಮವಾಗಿ 10 ಹಾಗೂ 16 ರನ್‌ ನೀಡಿ ಒಂದು ವಿಕೆಟ್‌ ಕೆಡವಿದರು. ಶಿಖಾ ಪಾಂಡೆ ವಿಕೆಟ್‌ಲೆಸ್‌ ಎನಿಸಿದರೂ 4 ಓವರ್‌ಗಳ ಕೋಟಾದಲ್ಲಿ ನೀಡಿದ್ದು 18 ರನ್‌ ಮಾತ್ರ.

ಶನಿವಾರ ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಸುತ್ತಿನಲ್ಲಿ ಸೆಣಸಲಿವೆ. ಇದಕ್ಕೂ ಮುನ್ನ ಬುಧವಾರ ದಕ್ಷಿಣ ಆಫ್ರಿಕಾ-ವೆಸ್ಟ್‌ ಇಂಡೀಸ್‌ ಮುಖಾಮುಖಿ ಆಗಲಿವೆ. ಇಲ್ಲಿ ವಿಂಡೀಸ್‌ ಗೆದ್ದರಷ್ಟೇ ಸರಣಿ ಜೀವಂತವಾಗಿ ಉಳಿಯಲಿದೆ. ಸೋತರೆ ಕೆರಿಬಿಯನ್‌ ತಂಡ ಹೊರಬೀಳಲಿದ್ದು, ಭಾರತ-ದಕ್ಷಿಣ ಆಫ್ರಿಕಾ ಫೈನಲ್‌ಗೆ ಸಜ್ಜಾಗಲಿವೆ.

ಸಂಕ್ಷಿಪ್ತ ಸ್ಕೋರ್‌: ಭಾರತ-2 ವಿಕೆಟಿಗೆ 167 (ಮಂಧನಾ ಔಟಾಗದೆ 74, ಕೌರ್‌ ಔಟಾಗದೆ 56, ಯಾಸ್ತಿಕಾ 18, ಹಲೀìನ್‌ 12, ಕರಿಷ್ಮಾ ರಾಮರಾಕ್‌ 12ಕ್ಕೆ 1, ಶಾನಿಕಾ ಬ್ರೂಸ್‌ 25ಕ್ಕೆ 1). ವೆಸ್ಟ್‌ ಇಂಡೀಸ್‌-4 ವಿಕೆಟಿಗೆ 111 (ಶಿಮೇನ್‌ ಕ್ಯಾಂಬೆಲ್‌ 47, ಹ್ಯಾಲಿ ಮ್ಯಾಥ್ಯೂಸ್‌ ಔಟಾಗದೆ 34, ದೀಪ್ತಿ 29ಕ್ಕೆ 2, ರಾಧಾ 10ಕ್ಕೆ 1, ರಾಜೇಶ್ವರಿ 16ಕ್ಕೆ 1).

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.