ವನಿತಾ ಏಷ್ಯಾ ಕಪ್‌ ಕ್ರಿಕೆಟ್‌: ಮಲೇಷ್ಯಾದ ಮಳೆ ಪಂದ್ಯ ಗೆದ್ದ ಭಾರತ


Team Udayavani, Oct 3, 2022, 10:37 PM IST

ವನಿತಾ ಏಷ್ಯಾ ಕಪ್‌ ಕ್ರಿಕೆಟ್‌: ಮಲೇಷ್ಯಾದ ಮಳೆ ಪಂದ್ಯ ಗೆದ್ದ ಭಾರತ

ಬಾಂಗ್ಲಾದೇಶ: ವನಿತಾ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು ತನ್ನ ಓಟ ಮುಂದುವರಿಸಿದೆ. ಸೋಮವಾರ ಮಲೇಷ್ಯಾ ಎದುರಿನ ಮಳೆಪೀಡಿತ ಮುಖಾಮುಖಿಯನ್ನು ಹರ್ಮನ್‌ಪ್ರೀತ್‌ ಕೌರ್‌ ಬಳಗ ಡಿ-ಎಲ್‌ ನಿಯಮದಂತೆ 30 ರನ್ನುಗಳಿಂದ ಜಯಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 4 ವಿಕೆಟಿಗೆ 161 ರನ್‌ ಪೇರಿಸಿದರೆ, ಮಲೇಷ್ಯಾ ಚೇಸಿಂಗ್‌ ವೇಳೆ ಮಳೆ ಸುರಿಯಿತು. ಪಂದ್ಯ 5.2 ಓವರ್‌ಗಳಿಗೆ ನಿಂತಿತು. ಮಲೇಷ್ಯಾ 2 ವಿಕೆಟ್‌ ಕಳೆದುಕೊಂಡು 16 ರನ್‌ ಮಾಡಿತ್ತು. ಆಗ ಅದು 46 ರನ್‌ ಗಳಿಸಬೇಕಿತ್ತು.

ಅಂಕಪಟ್ಟಿಯಲ್ಲೀಗ ಭಾರತ ದ್ವಿತೀಯ ಸ್ಥಾನದಲ್ಲಿದೆ (4 ಅಂಕ, +2.803 ರನ್‌ರೇಟ್‌). ಪಾಕಿಸ್ಥಾನ ಅಗ್ರಸ್ಥಾನಿಯಾಗಿದೆ. ಅದು ಕೂಡ 4 ಅಂಕ ಹೊಂದಿದ್ದರೂ ರನ್‌ರೇಟ್‌ನಲ್ಲಿ ಭಾರತಕ್ಕಿಂತ ಮುಂದಿದೆ (+3.059).

ಮೇಘನಾ ಮಿಂಚಿನಾ ಆಟ
ಉಪನಾಯಕಿ ಸ್ಮತಿ ಮಂಧನಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಇವರ ಬದಲು ಇನ್ನಿಂಗ್ಸ್‌ ಆರಂಭಿಸಿದ ಎಸ್‌. ಮೇಘನಾ ಮಿಂಚಿನ ಆಟವಾಡಿದರು. 53 ಎಸೆತಗಳಿಂದ 69 ರನ್‌ ಬಾರಿಸಿದರು (11 ಬೌಂಡರಿ, 1 ಸಿಕ್ಸರ್‌).
ತೀವ್ರ ಬ್ಯಾಟಿಂಗ್‌ ಬರಗಾಲದಲ್ಲಿದ್ದ ಶಫಾಲಿ ವರ್ಮ 46 ರನ್‌ ಹೊಡೆದು ಲಯ ಕಂಡುಕೊಂಡರು (1 ಬೌಂಡರಿ, 3 ಸಿಕ್ಸರ್‌). ರಿಚಾ ಘೋಷ್‌ ಅಜೇಯ 33 ರನ್‌ ಮಾಡಿದರು. ಆದರೆ ಕಿರಣ್‌ ಪ್ರಭು “ಗೋಲ್ಡನ್‌ ಡಕ್‌’ ಸಂಕಟಕ್ಕೆ ಸಿಲುಕಿದರು. ಕಳೆದ ಪಂದ್ಯದಲ್ಲಿ ಸಿಡಿದಿದ್ದ ಜೆಮಿಮಾ ರೋಡ್ರಿಗಸ್‌, ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ರೀಸ್‌ ಇಳಿಯಲಿಲ್ಲ.

ಮಲೇಷ್ಯಾದ 2 ವಿಕೆಟ್‌ಗಳನ್ನು ರಾಜೇಶ್ವರಿ ಗಾಯಕ್ವಾಡ್‌ ಮತ್ತು ದೀಪ್ತಿ ಶರ್ಮ ಉರುಳಿಸಿದರು.

ಭಾರತ ಮಂಗಳವಾರ ಯುಎಇ ವಿರುದ್ಧ ಆಡಲಿದೆ.

ಸಂಕ್ಷಿಪ್ತ ಸ್ಕೋರ್‌: ಭಾರತ-4 ವಿಕೆಟಿಗೆ 181 (ಮೇಘನಾ 69, ಶಫಾಲಿ 46, ರಿಚಾ 33, ನುರ್‌ ದಾನಿಯಾ 9ಕ್ಕೆ 2). ಮಲೇಷ್ಯಾ-5.2 ಓವರ್‌ಗಳಲ್ಲಿ 2 ವಿಕೆಟಿಗೆ 16. ಪಂದ್ಯಶ್ರೇಷ್ಠ: ಎಸ್‌. ಮೇಘನಾ.

ಪಾಕ್‌ಗೆ 9 ವಿಕೆಟ್‌ ಜಯ
ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ಥಾನ ಆತಿಥೇಯ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಪರಾಭವಗೊಳಿಸಿತು. ಬಾಂಗ್ಲಾ 8 ವಿಕೆಟಿಗೆ ಗಳಿಸಿದ್ದು 70 ರನ್‌ ಮಾತ್ರ. ಪಾಕಿಸ್ಥಾನ 12.2 ಓವರ್‌ಗಳಲ್ಲಿ ಒಂದು ವಿಕೆಟಿಗೆ 72 ರನ್‌ ಮಾಡಿತು. ಪಾಕ್‌ ಮೊದಲ ಪಂದ್ಯದಲ್ಲಿ ಮಲೇಷ್ಯಾವನ್ನೂ 9 ವಿಕೆಟ್‌ಗಳಿಂದ ಸೋಲಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.