ಭಾರತವನ್ನು ಮಣಿಸಿದ ರುಮಾನಾ-ಫ‌ರ್ಗಾನಾ


Team Udayavani, Jun 7, 2018, 6:10 AM IST

pti662018000059b.jpg

ಕೌಲಾಲಂಪುರ: ವನಿತಾ ಟಿ20 ಪಂದ್ಯಾವಳಿಯಲ್ಲಿ ಸತತ 2 ಗೆಲುವು ಸಾಧಿಸಿ ಮುನ್ನುಗ್ಗುತ್ತಿದ್ದ ಭಾರತಕ್ಕೆ ಬಾಂಗ್ಲಾದೇಶ ಬ್ರೇಕ್‌ ಹಾಕಿದೆ. ಬುಧವಾರದ 3ನೇ ಮುಖಾಮುಖೀಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ 7 ವಿಕೆಟ್‌ಗಳ ಆಘಾತಕಾರಿ ಸೋಲನುಭವಿಸಿದೆ.

ಬಾಂಗ್ಲಾದೇಶ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ವಿಭಾಗಗಳೆರಡರಲ್ಲೂ ಭಾರತವನ್ನು ಮೀರಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 7 ವಿಕೆಟಿಗೆ 141 ರನ್‌ ಗಳಿಸಿದರೆ, ಬಾಂಗ್ಲಾ 19.4 ಓವರ್‌ಗಳಲ್ಲಿ ಮೂರೇ ವಿಕೆಟಿಗೆ 142 ರನ್‌ ಬಾರಿಸಿ ಗೆದ್ದು ಬಂದಿತು. ಇದು ಭಾರತದ ವಿರುದ್ಧ ಬಾಂಗ್ಲಾ ಸಾಧಿಸಿದ ಮೊದಲ ಟಿ20 ಗೆಲುವು. ಭಾರತ, ಶ್ರೀಲಂಕಾ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳು 3 ಪಂದ್ಯಗಳಲ್ಲಿ 2 ಜಯ ಹಾಗೂ ಒಂದು ಸೋಲಿನೊಂದಿಗೆ 4 ಅಂಕ ಹೊಂದಿವೆ. ರನ್‌ರೇಟ್‌ನಲ್ಲಿ ಮುಂದಿರುವ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ರುಮಾನಾ, ಫ‌ರ್ಗನಾ ಸಾಹಸ
ರುಮಾನಾ ಅಹ್ಮದ್‌ ಅವರ ಆಲ್‌ರೌಂಡ್‌ ಪ್ರದರ್ಶನ ಹಾಗೂ ಫ‌ರ್ಗಾನಾ ಹಕ್‌ ಅವರ ಅಜೇಯ ಅರ್ಧ ಶತಕ ಬಾಂಗ್ಲಾ ಜಯದಲ್ಲಿ ಮಹತ್ವದ ಪಾತ್ರ ವಹಿಸಿತು. ಗೂಗ್ಲಿ ಬೌಲಿಂಗ್‌ ದಾಳಿಯ ವೇಳೆ 21ಕ್ಕೆ 3 ವಿಕೆಟ್‌ ಉರುಳಿಸಿದ ರುಮಾನಾ, ಬ್ಯಾಟಿಂಗ್‌ ವೇಳೆ 42 ರನ್‌ ಬಾರಿಸಿ ಅಜೇಯರಾಗಿ ಉಳಿದರು. 34 ಎಸೆತಗಳ ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ 6 ಬೌಂಡರಿಗಳನ್ನು ಒಳಗೊಂಡಿತ್ತು.

ಈ ಪಂದ್ಯಕ್ಕಾಗಿ ಭಾರತ ಪೂರ್ಣ ಸಾಮರ್ಥ್ಯದ ತಂಡವನ್ನೇ ಕಣಕ್ಕಿಳಿಸಿತ್ತು. ಸ್ಮತಿ ಮಂಧನಾ (2) ಅವರನ್ನು ಬೇಗನೇ ಕಳೆದುಕೊಂಡ ಭಾರತಕ್ಕೆ ಉಳಿದವರಿಂದ ಉತ್ತಮ ನೆರವು ಲಭಿಸಿತು. ಮಿಥಾಲಿ ರಾಜ್‌ 15, ಪೂಜಾ ವಸ್ತ್ರಾಕರ್‌ 20, ದೀಪ್ತಿ ಶರ್ಮ 32, ಹರ್ಮನ್‌ಪ್ರೀತ್‌ ಕೌರ್‌ ಸರ್ವಾಧಿಕ 42 ರನ್‌ (37 ಎಸೆತ, 6 ಬೌಂಡರಿ) ಮಾಡಿದರು.

ಅಜೇಯ 93 ರನ್‌ ಜತೆಯಾಟ
ಬಾಂಗ್ಲಾದೇಶ 8ನೇ ಓವರ್‌ ವೇಳೆ ಆರಂಭಿಕರಾದ ಶಮಿಮಾ ಸುಲ್ತಾನಾ (33), ಅಯಾಶಾ ರೆಹಮಾನ್‌ (12) ಮತ್ತು ನಿಗರ್‌ ಸುಲ್ತಾನಾ (1) ಅವರ ವಿಕೆಟ್‌ ಕಳೆದುಕೊಂಡಿತು. ಆಗ ಕೇವಲ 49 ರನ್‌ ಮಾಡಿತ್ತು. ಈ ಹಂತದಲ್ಲಿ ಭಾರತದ ಗೆಲುವು ಬಹುತೇಕ ಖಚಿತವಾಗಿತ್ತು. ಆದರೆ 4ನೇ ವಿಕೆಟಿಗೆ ಜತೆಗೂಡಿದ ಫ‌ರ್ಗಾನಾ ಹಕ್‌ ಮತ್ತು ರುಮಾನಾ ಅಹ್ಮದ್‌ ಬೇರೂರಿ ನಿಂತು ಪಂದ್ಯದ ಗತಿಯನ್ನೇ ಬದಲಾಯಿಸಿದರು. ಅಜೇಯ 93 ರನ್‌ ಜತೆಯಾಟ ನಡೆಸಿ ಭಾರತದ ಆಸೆಗೆ ತಣ್ಣೀರೆರಚಿದರು. ಇವರಿಬ್ಬರ ಅಮೋಘ ಆಟದ ವೇಳೆ ಭಾರತದ ಯಾವುದೇ ರೀತಿಯ ಬೌಲಿಂಗ್‌ ಆಕ್ರಮಣ ಫ‌ಲ ನೀಡಲಿಲ್ಲ. ಫ‌ರ್ಗಾನಾ 46 ಎಸೆತಗಳಿಂದ 52 ರನ್‌ (5 ಬೌಂಡರಿ, 1 ಸಿಕ್ಸರ್‌) ಹಾಗೂ ರುಮಾನಾ 34 ಎಸೆತಗಳಿಂದ 42 ರನ್‌ ಮಾಡಿ (6 ಬೌಂಡರಿ) ಔಟಾಗದೆ ಉಳಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-20 ಓವರ್‌ಗಳಲ್ಲಿ 7 ವಿಕೆಟಿಗೆ 142 (ಹರ್ಮನ್‌ಪ್ರೀತ್‌ 42, ದೀಪ್ತಿ 32, ಪೂಜಾ 20, ರುಮಾನಾ 21ಕ್ಕೆ 3, ಸಲ್ಮಾ 21ಕ್ಕೆ 1). ಬಾಂಗ್ಲಾದೇಶ-19.4 ಓವರ್‌ಗಳಲ್ಲಿ 3 ವಿಕೆಟಿಗೆ 142 (ಫ‌ರ್ಗಾನಾ ಔಟಾಗದೆ 52, ರುಮಾನಾ ಔಟಾಗದೆ 42, ಶಮಿಮಾ 33, ಪೂಜಾ 21ಕ್ಕೆ 1, ಪೂನಂ 21ಕ್ಕೆ 1, ರಾಜೇಶ್ವರಿ 26ಕ್ಕೆ 1).
ಪಂದ್ಯಶ್ರೇಷ್ಠ: ರುಮಾನಾ ಅಹ್ಮದ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.