ಶೀಘ್ರವೇ ರಾಜ್ಯ ಕ್ರಿಕೆಟ್‌ ಸಂಸ್ಥೆಯಲ್ಲಿ ಮಹಿಳಾ ದರ್ಬಾರ್‌?


Team Udayavani, Sep 20, 2017, 12:19 PM IST

22-PT-41.jpg

ಬೆಂಗಳೂರು: ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಇತಿಹಾಸಕ್ಕೊಂದು ಭಾರೀ ತಿರುವು ಸಿಕ್ಕಿದೆ. ಮುಂದಿನ ಕೆಎಸ್‌ಸಿಎ ಚುನಾವಣೆಯಲ್ಲಿ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್‌ ಆಟಗಾರ್ತಿಯರು ಸ್ಪರ್ಧಿಸಲಿದ್ದಾರೆ. ಇದು ಸಾಕಾರಗೊಂಡರೆ ಇದೇ ಮೊದಲ ಬಾರಿಗೆ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಡಳಿತ ವಿಭಾಗಕ್ಕೆ ಮಹಿಳೆಯರು ಪ್ರವೇಶಿಸಿದಂತಾಗುತ್ತದೆ. ಹೀಗೆಂದು ಸ್ವತಃ ಕೆಎಸ್‌ಸಿಎ ಮೂಲಗಳು ಉದಯವಾಣಿಗೆ ಖಚಿತಪಡಿಸಿವೆ.

ರೇಸ್‌ನಲ್ಲಿದ್ದಾರೆ ಶಾಂತಾ, ಕಲ್ಪನಾ: ಅಧಿಕಾರ ಚುಕ್ಕಾಣಿ ಹಿಡಿಯಲಿರುವ ಸಂಭಾವ್ಯರ ಪಟ್ಟಿಯಲ್ಲಿ ಮಾಜಿ ಆಟಗಾರ್ತಿಯರಾದ ಶಾಂತ ರಂಗಸ್ವಾಮಿ, ಕಲ್ಪನಾ ವೆಂಕಟಾಚಾರ್‌ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಅಲ್ಲದೆ ಮಾಜಿ ಆಟಗಾರ್ತಿಯರಾದ ಪ್ರಮೀಳಾ ಭಟ್‌, ಮಮತಾ ಮದೆನ್‌, ಮಾಲಾ, ಸುಜಾತ ಶ್ರೀಧರ್‌ ಮತ್ತಿತರರ ಮಾಜಿ ಆಟಗಾರ್ತಿಯರ ಹೆಸರು ಕೂಡ ಇದೆ ಎನ್ನಲಾಗಿದೆ.

ಲೋಧಾ ಶಿಫಾರಸು ಪ್ರಕಾರ ಮಹಿಳೆಗೆ ಅವಕಾಶ: ನಿವೃತ್ತ ನ್ಯಾಯಮೂರ್ತಿ ಲೋಧಾ ಸಮಿತಿ ಸುಪ್ರೀಂ ಕೋರ್ಟ್‌ಗೆ ಬಿಸಿಸಿಐನಲ್ಲಿ ಪಾರದರ್ಶಕ ಆಡಳಿತ ತರುವುದಕ್ಕಾಗಿ ಕೆಲವೊಂದು ಶಿಫಾರಸು ಮಾಡಿತ್ತು. ಇದರಲ್ಲಿ ಪ್ರತಿ ರಾಜ್ಯ ಕ್ರಿಕೆಟ್‌ ಸಂಸ್ಥೆಗಳಲ್ಲಿ ಇಬ್ಬರು ಮಹಿಳೆಯರಿಗೂ ಅಧಿಕಾರ ನೀಡಬೇಕು ಎನ್ನುವುದು ಕೂಡ ಪ್ರಮುಖವಾಗಿತ್ತು. ಇದೇ ನಿಯಮ ಬಿಸಿಸಿಐ ಅಡಿ ಬರುವ ಎಲ್ಲ ರಾಜ್ಯಕ್ಕೂ ಅನ್ವಯಿ 
ಸುವುದರಿಂದ ಕರ್ನಾಟಕ ಮಹಿಳಾ ಮಾಜಿ ಆಟಗಾರ್ತಿಯರ ಮುಖದಲ್ಲಿ ನಗು ಮೂಡಿಸಿದೆ.

ಹಿರಿತನದ ಪ್ರಕಾರ ಹುದ್ಧೆ ಸಿಗುವ ಸಾಧ್ಯತೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್‌ ಆಡಿ. ರಾಜ್ಯದ ಹೆಸರನ್ನು ಬೆಳಗಿದವರಲ್ಲಿ ಅಗ್ರಸ್ಥಾನ ಶಾಂತ ರಂಗಸ್ವಾಮಿ ಹಾಗೂ ಕಲ್ಪನಾ ಅವರಿಗೆ ಸಲ್ಲುತ್ತದೆ. ಇವರ ಬಳಿಕ ಅನೇಕ ಕ್ರಿಕೆಟಿಗರು ಇದ್ದಾರೆ. ಹಿರಿತನ, ಅನುಭವದ ಪ್ರಕಾರ ಕೆಎಸ್‌
ಸಿಎ ಅವಕಾಶ ಕೊಡುವುದಿದ್ದರೆ ಮೊದಲಿಗೆ ಶಾಂತ ಹಾಗೂ ಕಲ್ಪನಾ ಹೆಸರು ಕಾಣುತ್ತದೆ. 

ಇನ್ನು 6 ತಿಂಗಳೊಳಗೆ ನಿರ್ಧಾರ: ಒಟ್ಟಾರೆ ಇದೆಲ್ಲ ಸಾಕಾರಗೊಳ್ಳಲು, ರಾಜ್ಯದಲ್ಲಿ ಮಹಿಳಾ ದರ್ಬಾರ್‌ ಕಾಣಲು ಇನ್ನೂ ಆರು ತಿಂಗಳು
ಬೇಕು. ಇದಕ್ಕೆ ಕಾರಣ ಸುಪ್ರೀಂ ಕೋರ್ಟ್‌ ಆದೇಶ. ಹೌದು, ಸದ್ಯ ರಾಜ್ಯ ಕ್ರಿಕೆಟ್‌ ಸಂಸ್ಥೆಗಳ ಚುನಾವಣೆಗೆ ಸುಪ್ರೀಂ ತಡೆ ನೀಡಿದೆ. ಎಲ್ಲ
ರಾಜ್ಯಗಳು ಸುಪ್ರೀಂ ಆದೇಶ ಬಂದ ಬಳಿಕವಷ್ಟೇ ದೇಶದಾದ್ಯಂತ ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೂ ಚುನಾವಣೆ ನಡೆಸಲಿವೆ. 

ಇದೊಂದು ಸ್ವಾಗತಾರ್ಹ ನಿರ್ಧಾರ. ಲೋಧಾ ಶಿಫಾರಸು ಗೌರವಿಸುತ್ತೇನೆ. ಅವಕಾಶ ಸಿಕ್ಕರೆ ರಾಜ್ಯ ಕ್ರಿಕೆಟ್‌ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ನಾನು ಸಿದ್ಧವಾಗಿದ್ದೇನೆ. 
ಶಾಂತಾ ರಂಗಸ್ವಾಮಿ, ಮಾಜಿ ಕ್ರಿಕೆಟ್‌ ಆಟಗಾರ್ತಿ

ರಾಜ್ಯದ ಮಹಿಳಾ ಕ್ರಿಕೆಟ್‌ಗೆ ಹೊಸ ಆಯಾಮ ನೀಡಲು ಉತ್ಸುಕಳಾಗಿದ್ದೇನೆ. ಈ ನಿಟ್ಟಿನಲ್ಲಿ ಅವಕಾಶ ಎದುರಿಗೆ ಬಂದರೆ ಕೈ ಚಾಚಿ ಅಪ್ಪಿಕೊಳ್ಳುತ್ತೇನೆ.
ಕಲ್ಪನಾ ವೆಂಕಟಾಚಾರ್‌, ಮಾಜಿ ಕ್ರಿಕೆಟ್‌ ಆಟಗಾರ್ತಿ 

ಕೆಎಸ್‌ಸಿಎನಲ್ಲಿ ಅವಕಾಶ ಪಡೆಯಲು ಪ್ರತಿ ಮಹಿಳಾ ಆಟಗಾರ್ತಿಯರಿಗೂ ಹಕ್ಕಿದೆ. ಸುಪ್ರೀಂ ಸೂಚಿಸಿದಂತೆ ಲೋಧಾ ಶಿಫಾರಸು ಪಾಲಿಸುವುದು ಕಡ್ಡಾಯ. 
ವಿನಯ್‌ ಮೃತ್ಯುಂಜಯ, ಕೆಎಸ್‌ಸಿಎ ಮಾಧ್ಯಮ ವಕ್ತಾರ

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.