ವನಿತಾ ಹಾಕಿ: ಜಬರ್ದಸ್ತ್ ಜಪಾನ್‌ಗೆ ಭಾರತ ಶರಣು


Team Udayavani, Sep 1, 2018, 6:00 AM IST

z-26.jpg

ಜಕಾರ್ತಾ: ಭಾರತದ ಮುಂದಿದ್ದ ಮತ್ತೂಂದು ಏಶ್ಯಾಡ್‌ ಚಿನ್ನದ ಪದಕ ಕೈಜಾರಿದೆ. ಶುಕ್ರವಾರ ನಡೆದ ವನಿತೆಯರ ಹಾಕಿ ಫೈನಲ್‌ನಲ್ಲಿ ಜಬರ್ದಸ್ತ್ ಪ್ರದರ್ಶನ ನೀಡಿದ ಜಪಾನ್‌ ತಂಡ 2-1 ಗೋಲುಗಳ ಜಯಭೇರಿ ಮೊಳಗಿಸಿ ಬಂಗಾರದಿಂದ ಸಿಂಗಾರಗೊಂಡಿತು. ಭಾರತಕ್ಕೆ ಬೆಳ್ಳಿ ಪದಕವೇ ಗತಿಯಾಯಿತು.

ಇದು ಪ್ರಸಕ್ತ ಏಶ್ಯಾಡ್‌ನ‌ಲ್ಲಿ ಭಾರತೀಯ ಹಾಕಿಗೆ ಎದುರಾದ 2ನೇ ಹಾರ್ಟ್‌ ಬ್ರೇಕ್‌. ಇದಕ್ಕೂ ಮುನ್ನ ಪುರುಷರ ತಂಡ ಚಿನ್ನವನ್ನು ಕಳೆದುಕೊಂಡು ಕಂಚಿಗಾಗಿ ಸ್ಪರ್ಧೆ ನಡೆಸುವ ಸಂಕಟವನ್ನು ಆಹ್ವಾನಿಸಿಕೊಂಡಿತ್ತು. ಈ ಸೋಲಿನಿಂದ ಭಾರತಕ್ಕೆ ಎದುರಾದ ಮತ್ತೂಂದು ಭಾರೀ ನಷ್ಟವೆಂದರೆ ಒಲಿಂಪಿಕ್ಸ್‌ ನೇರ ಪ್ರವೇಶ. ಇಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದರೆ ಭಾರತದ ವನಿತಾ ಹಾಕಿ ತಂಡ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ನೇರ ಅವಕಾಶ ಪಡೆಯುತ್ತಿತ್ತು. ಈ ಅವಕಾಶವೀಗ ಜಪಾನ್‌ ಪಾಲಾಗಿದೆ. ಭಾರತವಿನ್ನು ಅರ್ಹತಾ ಪಂದ್ಯಾವಳಿಯಲ್ಲಿ ಅದೃಷ್ಟಪರೀಕ್ಷೆಗೆ ಇಳಿಯಬೇಕಿದೆ.

ಜಪಾನ್‌ ಯೋಜನಾಬದ್ಧ ಆಟ
ಲೀಗ್‌ ಹಂತದಲ್ಲಿ ಅಜೇಯವಾಗಿ ಉಳಿದು, ಸೆಮಿಫೈನಲ್‌ನಲ್ಲಿ ಚೀನ ವಿರುದ್ಧ ಏಕೈಕ ಗೋಲಿನಿಂದ ಜಯ ಸಾಧಿಸಿದ ರಾಣಿ ರಾಮ್‌ಪಾಲ್‌ ಪಡೆ, ಚಿನ್ನದ ಕಾಳಗದಲ್ಲಿ ತನಗಿಂತ ಕೆಳ ಕ್ರಮಾಂಕದ ಜಪಾನ್‌ ವಿರುದ್ಧ ಮೇಲುಗೈ ಸಾಧಿಸೀತೆಂಬ ನಂಬಿಕೆ ಇತ್ತು. ಪುರುಷರಿಗೆ ಒಲಿಯದ ಚಿನ್ನ ವನಿತೆಯರ ಪಾಲಾಗಬಹುದೆಂಬ ನಿರೀಕ್ಷೆ ದಟ್ಟವಾಗಿತ್ತು. ಆದರೆ ಫೈನಲ್‌ ಜೋಶ್‌ ಪ್ರದರ್ಶಿಸಲು ವಿಫ‌ಲವಾದ ಭಾರತ ತೀರಾ ನೀರಸ ಆಟವಾಡಿ ಸೋತು ಹೋಯಿತು. ಜಪಾನ್‌ ಆಕ್ರಮಣಕಾರಿ ಹಾಗೂ ರಕ್ಷಣಾತ್ಮಕ ಕಾರ್ಯತಂತ್ರವನ್ನು ಯಶಸ್ವಿಯಾಗಿ ಅಳವಡಿಸಿಕೊಂಡು ಭಾರತದ ಮೇಲೆ ಸವಾರಿ ಮಾಡಿತು.

ಭಾರತಕ್ಕೆ ಆರಂಭದಲ್ಲೇ ಹಿನ್ನಡೆ
ಮಿನಾಮಿ ಶಿಮಿಝು 11ನೇ ನಿಮಿಷದಲ್ಲೇ ಗೋಲು ಸಿಡಿಸಿ ಜಪಾನ್‌ ತಂಡದಲ್ಲಿ ಹೊಸ ಹುರುಪು ಮೂಡಿಸಿದರು. ಮೊದಲ ಪೆನಾಲ್ಟಿ ಕಾರ್ನರನ್ನೇ ಅವರು ಗೋಲಾಗಿ ಪರಿವರ್ತಿಸಿದ್ದರು. ಭಾರತ 25ನೇ ನಿಮಿಷದಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ನವನೀತ್‌ ಕೌರ್‌ ಅವರ “ರಿವರ್ಸ್‌ ಹಿಟ್‌’ ಪಾಸ್‌ ಒಂದನ್ನು ನೇಹಾ ಗೋಯೆಲ್‌ ಡಿಫ್ಲೆಕ್ಟ್ ಮಾಡುವ ಮೂಲಕ ಗೋಲಾಗಿ ಪರಿವರ್ತಿಸಿದರು. ಭಾರತದ ಗೋಲಾಟ ಇಲ್ಲಿಗೇ ನಿಂತಿತು.

2ನೇ ಕ್ವಾರ್ಟರ್‌ ಬಳಿಕ ಜಪಾನ್‌ ಸಂಘಟಿತ ಆಟದ ಮೂಲಕ ಗಮನ ಸೆಳೆಯಿತು. 44ನೇ ನಿಮಿಷದಲ್ಲಿ ಲಭಿಸಿದ ಮತ್ತೂಂದು ಪೆನಾಲ್ಟಿ ಕಾರ್ನರನ್ನು ನಾಯಕಿ ಮೊಟೊಮಿ ಕವಾಮುರಾ ಗೋಲಾಗಿಸುವಲ್ಲಿ ಯಶಸ್ವಿಯಾದರು. 

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.