ರೈಲ್ವೇ ಟ್ರ್ಯಾಕ್ನಲ್ಲಿ ಭಾರತೀಯ ಹಾಕಿ ಆಟಗಾರ್ತಿ ಶವ ಪತ್ತೆ
Team Udayavani, Aug 5, 2017, 6:20 AM IST
ಹೊಸದಿಲ್ಲಿ : ಕಳೆದ ವರ್ಷ ದಕ್ಷಿಣ ಏಶ್ಯನ್ ಗೇಮ್ಸ್ ಹಾಕಿ ಕೂಟದಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದ ಹರಿಯಾಣದ ಜ್ಯೋತಿ ಗುಪ್ತಾ ಸಾವಿಗೀಡಾಗಿದ್ದಾರೆ. ಇವರ ಶವ ಹರಿಯಾಣದ ರೆವಾರಿ ರೈಲ್ವೇ ನಿಲ್ದಾಣದ ಬಳಿಯ ಟ್ರ್ಯಾಕ್ನಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸೊನೆಪತ್ನವರಾದ 20 ವರ್ಷದ ಜ್ಯೋತಿ ಗುಪ್ತಾ, ಮಹರ್ಷಿ ದಯಾನಂದ ಯೂನಿವರ್ಸಿಟಿಯಲ್ಲಿ ಅಧ್ಯಯನ ನಡೆಸಿದ್ದರು. ಕ್ಲಾಸ್ 6 ಹಾಗೂ ಕ್ಲಾಸ್ 12ರ ಮಾರ್ಕ್ಶೀಟ್ನಲ್ಲಿ ಅವರ ಹೆಸರು ತಪ್ಪಾಗಿ ಮುದ್ರಣಗೊಂಡಿತ್ತು. ಇದನ್ನು ಸರಿಪಡಿಸಲೆಂದು ಅವರು ಮನೆ ಬಿಟ್ಟು ಕಾಲೇಜಿಗೆ ತೆರಳಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 7 ಗಂಟೆಗೆ ಮನೆಗೆ ಫೋನ್ ಮಾಡಿರುವ ಜ್ಯೋತಿ ಬಸ್ ಹಾಳಾಗಿದೆ. ಮನೆಗೆ ಬರುವುದು ಸ್ವಲ್ಪ ತಡವಾಗುತ್ತದೆ ಎಂದಿದ್ದರು ಎನ್ನಲಾಗಿದೆ. ಸುಮಾರು 10.30ರ ರಾತ್ರಿ ಹೊತ್ತಿಗೆ ರೈಲ್ವೇ ಪೊಲೀಸರು ಜ್ಯೋತಿ ಸಾವಿಗೀಡಾದ ವಿಷಯವನ್ನು ಮನೆಯವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.ರೈಲು ಚಾಲಕನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಹುಡುಗಿಯೊಬ್ಬಳು ರೈಲಿಗೆ ಅಡ್ಡ ಬಂದಳು. ತತ್ಕ್ಷಣ ರೈಲು ನಿಲ್ಲಿಸಲು ಪ್ರಯತ್ನ ನಡೆಸಿದೆ. ಆದರೆ ಅದು ಸಾಧ್ಯವಾಗಲಿಲ್ಲ. ಅಷ್ಟರ ವೇಳೆಗೆ ದುರಂತ ಸಂಭವಿಸಿತ್ತು ಎಂದು ರೈಲು ಚಾಲಕ ಹೇಳಿದ್ದಾರೆ. ಪೊಲೀಸರು ಈಗ ಎಲ್ಲ ಹೇಳಿಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.ಜ್ಯೋತಿ ಪ್ರತಿಭಾವಂತ ಆಟಗಾರ್ತಿ. ಹಲವಾರು ಕೂಟಗಳಲ್ಲಿ ರಾಜ್ಯ ತಂಡ ಹರಿಯಾಣವನ್ನು ಪ್ರತಿನಿಧಿಸಿದ್ದರು. ಅಷ್ಟೇ ಅಲ್ಲ ಇತ್ತೀಚೆಗೆ ವಿಶ್ವ ಹಾಕಿ ಲೀಗ್ ಸೆಮಿಫೈನಲ್ಗಾಗಿ ಹಾಕಿ ಇಂಡಿಯಾ ನಡೆಸಿದ 3 ತಿಂಗಳ ತರಬೇತಿ ಶಿಬಿರದಲ್ಲೂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ