![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
WPL ವರ್ಣರಂಜಿತ ಚಾಲನೆ :ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈಗೆ ರೋಚಕ ಗೆಲುವು
ಕೊನೆಯ ಎಸೆತದಲ್ಲಿ ಐದು ರನ್ ಅಗತ್ಯವಿತ್ತು...
Team Udayavani, Feb 23, 2024, 11:19 PM IST
![1-w](https://www.udayavani.com/wp-content/uploads/2024/02/1-w-620x414.jpg)
ಬೆಂಗಳೂರು: ವನಿತಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಚರಣಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿ ಚಾಲನೆ ಲಭಿಸಿದೆ. ಉದ್ಘಾಟನ ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರಾದ ಶಾರುಖ್ ಖಾನ್, ಶಾಹಿದ್ ಕಪೂರ್, ಸಿದ್ಧಾರ್ಥ್ ಮಲ್ಹೋತ್ರ, ವರುಣ್ ಧವನ್, ಕಾರ್ತಿಕ್ ಆರ್ಯನ್, ಟೈಗರ್ ಶ್ರಾಫ್ ಮೊದಲಾದವರು ಗಮನ ಸೆಳೆದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಬಾದ್ಶಾ ಶಾರುಖ್, ಝೂಮೆ ಜೋ ಪಠಾಣ್ ಹಾಡಿಗೆ ಸ್ಟೆಪ್ಸ್ ಹಾಕಿ ನೆರದ ಕ್ರೀಡಾಭಿಮಾನಿಗಳನ್ನು ರಂಜಿಸಿದರು. ಉಳಿದ ನಟರೂ ಮನೋರಂಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವರ್ಣರಂಜಿತ ಸುಡು ಮದ್ದುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ರಂಗೇರಿಸಿತು.
ಮುಂಬೈ ಡೆಲ್ಲಿ ವಿರುದ್ಧ ಮುಂಬೈಗೆ ರೋಚಕ ಗೆಲುವು
ಮೊದಲ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. 172 ರನ್ ಗಳಿಸುವ ಸವಾಲು ಪಡೆದ ಮುಂಬೈ ಕೊನೆಯ ಎಸೆತದ ವರೆಗೆ ಸಾಗಿದ ರೋಚಕ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡಿತು.
ಅಲೀಸ್ ಕ್ಯಾಪ್ಸೆ ಅವರ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡವು ಐದು ವಿಕೆಟಿಗೆ 171 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು. 19ರ ಹರೆಯದ ಕ್ಯಾಪ್ಸೆ 53 ಎಸೆತಗಳಿಂದ 75 ರನ್ ಹೊಡೆದಿದ್ದರು.
ಗುರಿ ಬೆನ್ನಟ್ಟಿದ ಮುಂಬೈ ಪರ ಯಾಸ್ತಿಕಾ ಭಾಟಿಯಾ 57,ನಾಯಕಿ ಹರ್ಮನ್ಪ್ರೀತ್ ಕೌರ್ 55 ರನ್ ಗಳ ಅಮೋಘ ಆಟವಾಡಿದರು. ಕೊನೆಯ ಎಸೆತದಲ್ಲಿ ಐದು ರನ್ ಅಗತ್ಯವಿತ್ತು, ಬ್ಯಾಟಿಂಗ್ ಗೆ ಆಗಮಿಸಿದ್ದ ಸಂಜನಾ ಸಿಕ್ಸರ್ ಬಾರಿಸಿ ನಾಲ್ಕು ವಿಕೆಟ್ ಗಳ ಗೆಲುವು ತಂದುಕೊಟ್ಟರು. 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಜಯದ ಶುಭಾರಂಭ ಮಾಡಿತು.
ಬೆಂಗಳೂರಿಗೆ ಯುಪಿ ಸವಾಲು
ಮಹಿಳಾ ಐಪಿಎಲ್ನ ಎರಡನೇ ಪಂದ್ಯವಾಗಿ ಶನಿವಾರ ರಾಯಲ್ ಚಾಲೆಂಜರ್ ಬೆಂಗಳೂರು (ಆರ್ಸಿಬಿ) ತಂಡವು ಯುಪಿ ವಾರಿಯರ್ ಸವಾಲು ಸ್ವೀಕರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲೇ ಈ ಪಂದ್ಯ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.