ವನಿತಾ ಟಿ20: ಬ್ಯಾಟಿಂಗ್‌ ಮರೆತು ಸೋತ ಭಾರತ


Team Udayavani, Feb 3, 2020, 6:41 AM IST

vanita

ಕ್ಯಾನ್‌ಬೆರಾ: ತೀವ್ರ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಭಾರತ, ವನಿತಾ ಟಿ20 ತ್ರಿಕೋನ ಸರಣಿಯ ದ್ವಿತೀಯ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ ವಿರುದ್ಧ 4 ವಿಕೆಟ್‌ಗಳ ಸೋಲು ಕಂಡಿದೆ.

ರವಿವಾರ ಕ್ಯಾನ್‌ಬೆರಾದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 9 ವಿಕೆಟಿಗೆ ಕೇವಲ 103 ರನ್‌ ಗಳಿಸಿತು. ಜವಾಬಿತ್ತ ಆಸ್ಟ್ರೇಲಿಯ 18.5 ಓವರ್‌ಗಳಲ್ಲಿ 6 ವಿಕೆಟಿಗೆ 104 ರನ್‌ ಬಾರಿಸಿತು. ಇದು ಈ ಕೂಟದಲ್ಲಿ ಆಸ್ಟ್ರೇಲಿಯಕ್ಕೆ ಒಲಿದ ಮೊದಲ ಜಯವಾದರೆ, ಭಾರತಕ್ಕೆ ಎದುರಾದ ಮೊದಲ ಸೋಲು. ಮೊದಲ ಪಂದ್ಯದಲ್ಲಿ ಭಾರತ ಇಂಗ್ಲೆಂಡನ್ನು ಸೋಲಿಸಿದರೆ, ಇಂಗ್ಲೆಂಡ್‌ ಆಸ್ಟ್ರೇಲಿಯವನ್ನು ಸೂಪರ್‌ ಓವರ್‌ನಲ್ಲಿ ಮಣಿಸಿತ್ತು.

ಪೆರ್ರಿ ದಾಳಿಗೆ ಪರದಾಟ
ಮಧ್ಯಮ ವೇಗಿ ಎಲ್ಲಿಸ್‌ ಪೆರ್ರಿ ಘಾತಕ ದಾಳಿ ಸಂಘಟಿಸಿ ಭಾರತವನ್ನು ಕಾಡಿದರು. ಪೆರ್ರಿ ಸಾಧನೆ 13ಕ್ಕೆ 4 ವಿಕೆಟ್‌. ಅವರು ಒಂದೇ ಓವರಿನಲ್ಲಿ ಕೌರ್‌, ತನಿಯಾ ಭಾಟಿಯಾ ಮತ್ತು ದೀಪ್ತಿ ಶರ್ಮ ವಿಕೆಟ್‌ ಉಡಾಯಿಸಿದರು. ಮತ್ತೋರ್ವ ಮಧ್ಯಮ ವೇಗಿ ಟಯ್ಲ ಲಾಮಿನಿಕ್‌ 13 ರನ್ನಿಗೆ 3 ವಿಕೆಟ್‌ ಉರುಳಿಸಿದರು.

ಭಾರತದ ಬ್ಯಾಟಿಂಗ್‌ ಸರದಿಯಲ್ಲಿ 35 ರನ್‌ ಮಾಡಿದ ಸ್ಮತಿ ಮಂಧನಾ ಅವರದೇ ಸರ್ವಾಧಿಕ ಗಳಿಕೆ. ಬಿರುಸಿನ ಆಟಕ್ಕಿಳಿದ ಅವರು 23 ಎಸೆತ ಎದುರಿಸಿ 3 ಬೌಂಡರಿ, 2 ಸಿಕ್ಸರ್‌ ಹೊಡೆದರು. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಗಳಿಕೆ 28 ರನ್‌ (32 ಎಸೆತ, 4 ಬೌಂಡರಿ). ಎರಡಂಕೆಯ ಗಡಿ ತಲುಪಿದ ಮತ್ತೋರ್ವ ಆಟಗಾರ್ತಿ ರಾಧಾ ಯಾದವ್‌ (11).

ಆಸ್ಟ್ರೇಲಿಯಕ್ಕೆ ಚೇಸಿಂಗ್‌ ನಿರೀಕ್ಷಿಸಿದಷ್ಟು ಸುಲಭವಾಗಿರಲಿಲ್ಲ. 10ನೇ ಓವರ್‌ ಮುಕ್ತಾಯಕ್ಕೆ 52 ರನ್ನಿಗೆ 4 ವಿಕೆಟ್‌ ಉರುಳಿತ್ತು. ಆದರೆ ಬ್ಯಾಟಿಂಗಿನಲ್ಲೂ ಮಿಂಚಿದ ಎಲ್ಲಿಸ್‌ ಪೆರ್ರಿ 49 ರನ್‌ ಬಾರಿಸಿ ತಂಡವನ್ನು ದಡ ಸೇರಿಸಿದರು (47 ಎಸೆತ, 8 ಬೌಂಡರಿ).

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.